ಬಿಜೆಪಿ ವಿಜಯೋತ್ಸವದ ಬಳಿಕ ದುಷ್ಕರ್ಮಿಗಳ ಅಟ್ಟಹಾಸ- ಇಬ್ಬರಿಗೆ ಚಾಕು ಇರಿತ

Public TV
1 Min Read
MANGALURU 1 1

ಮಂಗಳೂರು: ಬಿಜೆಪಿ ವಿಜಯೋತ್ಸವ (BJP Celebration) ಮೆರವಣಿಗೆ ಬಳಿಕ ಇಬ್ಬರಿಗೆ ಚೂರಿ ಇರಿತವಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳದ ಬೋಳಿಯಾರು ಎಂಬಲ್ಲಿ ನಡೆದಿದೆ.

MANGALURU 3

ಹರೀಶ್ ಮತ್ತು ನಂದಕುಮಾರ್ ಚಾಕು ಇರಿತಕ್ಕೊಳಗಾದವರಾಗಿದ್ದು, ಇವರಿಬ್ಬರೂ ಬೋಳಿಯಾರು ನಿವಾಸಿಗಳು. ಭಾನುವಾರ ನರೇಂದ್ರ ಮೋದಿಯವರು (Narendra Modi) ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸುವ ಹಿನ್ನೆಲೆಯಲ್ಲಿ ವಿಜಯೋತ್ಸವ ಆಯೋಜಿಸಲಾಗಿತ್ತು.

ವಿಜಯೋತ್ಸವ ಮುಗಿಸಿ ಹರೀಶ್ ಮತ್ತು ನಂದಕುಮಾರ್ ಅವರು ಬೋಳಿಯಾರು ಪೇಟೆಯಲ್ಲಿ ನಿಂತಿದ್ದರು. ಈ ವೇಳೆ ಅಪರಿಚಿತ ದುಷ್ಕರ್ಮಿಗಳ ತಂಡವು ಏಕಾಏಕಿ ಇಬ್ಬರಿಗೆ ಚಾಕುವಿನಿಂದ ಇರಿದಿದೆ. ಸದ್ಯ ಇಬ್ಬರಿಗೂ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಸಣ್ಣಪುಟ್ಟ ಗಾಯದೊಂದಿಗೆ ಇಬ್ಬರು ಪಾರಾಗಿದ್ದಾರೆ. ಈ ಸಂಬಂಧ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಾಳಿಗೆ ಕಮರಿಗೆ ಉರುಳಿದ ಬಸ್ – 10 ಯಾತ್ರಾರ್ಥಿಗಳ ಸಾವು, 33 ಮಂದಿಗೆ ಗಾಯ

Share This Article