ಕಾರವಾರ: ಈಜಲು (Swimming) ತೆರಳಿದ್ದ ಇಬ್ಬರು ನೀರು ಪಾಲಾದ ಘಟನೆ ಉತ್ತರ ಕನ್ನಡ (Uttara Kannada) ಜಿಲ್ಲೆಯ ಶಿರಸಿ (Sirsi) ತಾಲೂಕಿನ ಉಂಚಳ್ಳಿ ಸಮೀಪದ ಮಾಸ್ತಿಜಡ್ಡಿ ಗ್ರಾಮದಲ್ಲಿನ ಹೊಳೆಯಲ್ಲಿ ನಡೆದಿದೆ.
ಮಾಸ್ತಿಜಡ್ಡಿ ಗ್ರಾಮದ ಮದನ್ ನಾಯ್ಕ (17) ಹಾಗೂ ಹೊನ್ನಾವರದ ಲೋಹಿತ್ ನಾಯ್ಕ (19) ಮೃತ ದುರ್ದೈವಿಗಳು. ಹಳ್ಳಕ್ಕೆ ಕಟ್ಟಿದ್ದ ಬಾಂದಾರದಲ್ಲಿ ಈಜಲು ತೆರಳಿದ್ದ ವೇಳೆ 15 ಅಡಿ ಆಳದ ಬಾಂದಿನ ನೀರಿನಲ್ಲಿ ಮುಳುಗಿ ಇಬ್ಬರೂ ಸಾವನ್ನಪ್ಪಿದ್ದಾರೆ. ಇನ್ನು ಶವ ಶೋಧ ನಡೆಸಿದ ಶ್ರೀ ಮಾರಿಕಾಂಬ ರೆಸ್ಕ್ಯೂ ಟೀಮ್ನ ಗೋಪಾಲ ಗೌಡ ನೇತೃತ್ವದ ತಂಡ ಶವಗಳನ್ನು ನೀರಿನಿಂದ ಮೇಲೆತ್ತಿದ್ದಾರೆ. ಇದನ್ನೂ ಓದಿ: ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ನೆರವೇರಿದ ಗಾಯಕಿ ಎಸ್.ಜಾನಕಿ ಅಂತ್ಯಕ್ರಿಯೆ; ಚಿತೆಗೆ ಮೊಮ್ಮಗಳಿಂದ ಅಗ್ನಿಸ್ಪರ್ಶ
ಘಟನಾ ಸ್ಥಳಕ್ಕೆ ಬನವಾಸಿ ಠಾಣೆ ಪಿಎಸ್ಐ ಮಹಾಂತಪ್ಪ ಕುಂಬಾರ ಭೇಟಿ ನೀಡಿ ಪರಿಶೀಲನೆ ನಡೆಸಿ ಶವವನ್ನು ಮರಣೋತ್ತರ ಪರೀಕ್ಷೆಗೆ ಶಿರಸಿಗೆ ರವಾನೆ ಮಾಡಿದ್ದಾರೆ. ಘಟನೆ ಸಂಬಂಧ ಬನವಾಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಕಾರವಾರ ಬಂದರಿನಲ್ಲಿ ಹಡಗಿನಿಂದ ಸಾವಿರಾರು ಲೀಟರ್ ಬಿಸಿ ಡಾಂಬರ್ ಸಮುದ್ರಕ್ಕೆ ಸೋರಿಕೆ
