ಅನ್ನಭಾಗ್ಯ ಯೋಜನೆಯ ಅಕ್ಕಿಯ ಅಕ್ರಮ ಮಾರಾಟ: ಇಬ್ಬರ ಬಂಧನ

Public TV
0 Min Read
CNG ARREST 1

ಚಾಮರಾಜನಗರ: ಹಸಿವು ಮುಕ್ತ ಮಾಡುವ ಸರ್ಕಾರದ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಕಡಿಮೆ ಬೆಲೆಗೆ ಕೊಂಡು ಖಾಸಗಿಯಾಗಿ ಹೆಚ್ಚು ಬೆಲೆಗೆ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಜಿಲ್ಲೆಯ ಯಳಂದೂರು  ಪೊಲೀಸರು ಬಂಧಿಸಿದ್ದಾರೆ.

ಯಳಂದೂರು ತಾಲೂಕಿನ ಬಳೆಪೇಟೆ ಬಳಿ ಆಟೋದಲ್ಲಿ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಸಾಗಾಣಿಕೆ ಮಾಡುತ್ತಿದ್ದ ಬಷೀರ್ ಹಾಗೂ ರವಿ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ 6 ತಿಂಗಳಿನಿಂದ ಈ ಕೃತ್ಯ ನಡೆಸುತ್ತಿದ್ದ ಇವರನ್ನು ಇಂದು ಅಕ್ಕಿ ಸಾಗಿಸುವ ವೇಳೆ ಬಂಧಿಸಲಾಗಿದೆ.

ಬಂಧಿತರಿಂದ 10 ಕ್ವಿಂಟಲ್ ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ಯಳಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

CNG ARREST 2

Share This Article
Leave a Comment

Leave a Reply

Your email address will not be published. Required fields are marked *