ಭೋಪಾಲ್: ವೇಗವಾಗಿ ಬಂದ ರೈಲು (Train) ಡಿಕ್ಕಿ ಹೊಡೆದು ರೈಲ್ವೇ ಸಂರಕ್ಷಣಾ ಪಡೆಯ (RPF) ಇಬ್ಬರು ಹೆಡ್ ಕಾನ್ಸ್ಟೇಬಲ್ಗಳು ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ (Madhya Pradesh) ಮೊರೆನಾ (Morena) ಜಿಲ್ಲೆಯಲ್ಲಿ ನಡೆದಿದೆ.
ಮೊರೆನಾದಿಂದ 7 ಕಿಮೀ ದೂರದಲ್ಲಿರುವ ಸಾಂಕ್ ರೈಲು ನಿಲ್ದಾಣದಲ್ಲಿ ಮಂಗಳವಾರ ರಾತ್ರಿ 8 ಗಂಟೆ ಸುಮಾರಿಗೆ ಈ ದುರ್ಘಟನೆ ನಡೆದಿದೆ. ಹೆಡ್ ಕಾನ್ಸ್ಟೇಬಲ್ಗಳಾದ ಅಶೋಕ್ ಕುಮಾರ್ (56) ಮತ್ತು ನವರಾಜ್ ಸಿಂಗ್ (40) ಘಟನೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಬುಧವಾರ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಗ್ರಾಮದ ಯುವಕನೊಂದಿಗೆ ಪ್ರೀತಿ – ಮಗಳನ್ನೇ ಕೊಚ್ಚಿ ಕೊಂದ ತಂದೆ
- Advertisement 2
- Advertisement 3
ಆರ್ಪಿಎಫ್ ಪೊಲೀಸರು ಸ್ಥಳದಲ್ಲಿ ನಿಲ್ಲಿಸಿದ್ದ ಗ್ವಾಲಿಯರ್-ಆಗ್ರಾ ಪ್ಯಾಸೆಂಜರ್ ರೈಲನ್ನು ಪರಿಶೀಲಿಸುತ್ತಿದ್ದು, ಅವರಿಬ್ಬರೂ ಮಧ್ಯದ ಹಳಿಯಲ್ಲಿದ್ದರು. ಈ ವೇಳೆ ದೆಹಲಿಯಿಂದ ಬರುತ್ತಿದ್ದ ದುರೊಂತೋ ಎಕ್ಸ್ಪ್ರೆಸ್ ರೈಲು ವೇಗವಾಗಿ ಹಾದು ಹೋಗಿದೆ. ಇದರಿಂದ ರೈಲು ಅಧಿಕಾರಿಗಳಿಗೆ ಡಿಕ್ಕಿ ಹೊಡೆದಿದೆ ಎಂದು ಮೊರೆನಾ ಆರ್ಪಿಎಫ್ ಪೊಲೀಸ್ ಠಾಣೆಯ ಉಸ್ತುವಾರಿ ಹರಿಕಿಶನ್ ಮೀನಾ ತಿಳಿಸಿದ್ದಾರೆ. ಇದನ್ನೂ ಓದಿ: 2,500 ರೂ. ವಾಪಸ್ ಕೊಡದಿದ್ದಕ್ಕೆ ಯುವಕನ ಕೈಯನ್ನೆ ಕತ್ತರಿಸಿದ್ರು
- Advertisement 4
ಇನ್ನೊಂದು ಬದಿಯ ಹಳಿಯಲ್ಲಿ ಗೂಡ್ಸ್ ರೈಲು ನಿಂತಿದ್ದರಿಂದ ಅಧಿಕಾರಿಗಳು ಸುರಕ್ಷಿತ ಸ್ಥಳಕ್ಕೆ ಓಡಲು ಸಾಧ್ಯವಾಗಲಿಲ್ಲ. ಹೀಗಾಗಿ ದುರಂತ ಸಂಭವಿಸಿದೆ. ಇಬ್ಬರು ಪೊಲೀಸರು ಸ್ಥಳದಲ್ಲೇ ಮೃತಪಟ್ಟಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಘಟನೆಯ ಕುರಿತು ತನಿಖೆ ನಡೆಯುತ್ತಿದೆ ಎಂದು ಮಾಹಿತಿ ನೀಡಿದರು.