ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ರಸ್ತೆ ಅಪಘಾತಗಳು (Accident) ದಿನದಿಂದ ದಿನಕ್ಕೆ ಏರಿಕೆಯಾಗುತ್ತಿವೆ. ಅದರಲ್ಲೂ ಬೆಂಗಳೂರಿನಲ್ಲಿ (Bengaluru) ಬಿಎಂಟಿಸಿ (BMTC) ಬಸ್ಗೆ ಸಿಲುಕಿ ಸಾವನ್ನಪ್ಪುತ್ತಿರುವವರೇ ಹೆಚ್ಚು ಎಂದರೆ ತಪ್ಪಾಗಲಾರದು. ಅದೇ ರೀತಿ ಭಾನುವಾರ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಕಿಲ್ಲರ್ ಬಿಎಂಟಿಸಿಗೆ ಇಬ್ಬರು ಬಲಿಯಾಗಿದ್ದಾರೆ.
ರಸ್ತೆ ದಾಟುವ ವೇಳೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ವೀಣಾ ಬಿಎಂಟಿಸಿ ಬಸ್ಗೆ ಬಲಿಯಾದ ಮಹಿಳೆ. ಹುಳಿಮಾವು ಸಂಚಾರಿ ಠಾಣಾ ವ್ಯಾಪ್ತಿಯ ಅರಕೆರೆಯ ಶ್ರೀ ಸಾಯಿ ಗಾರ್ಮೆಂಟ್ಸ್ ಬಳಿ ಘಟನೆ ನಡೆದಿದೆ. ಸ್ಥಳಕ್ಕೆ ಹುಳಿಮಾವು ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಅಪರಿಚಿತರಿಂದ ಗುಂಡಿನ ದಾಳಿ – ಅಂಗಡಿ ಮಾಲೀಕ ಸ್ಥಳದಲ್ಲೇ ಸಾವು
ಅದೇ ರೀತಿ ವಿಜಯನಗರ (Vijayanagara) ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಮತ್ತೊಬ್ಬ ವ್ಯಕ್ತಿ ಬಿಎಂಟಿಸಿಗೆ ಸಿಲುಕಿ ಸಾವನ್ನಪ್ಪಿದ್ದಾರೆ. ಕುಮಾರ್ (45) ಬಿಎಂಟಿಸಿ ಬಸ್ಗೆ ಬಲಿಯಾದ ಬೈಕ್ ಸವಾರ. ವಿಜಯನಗರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಗೋವಿಂದರಾಜನಗರ ಬೈಟು ಕಾಫಿ ಮುಂಭಾಗದಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ವಿಜಯನಗರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ರಾಜ್ಯೋತ್ಸವಕ್ಕೆ ಧ್ವಜಸ್ತಂಭ ನಿಲ್ಲಿಸುವ ವೇಳೆ ವಿದ್ಯುತ್ ಪ್ರವಹಿಸಿ ಯುವಕ ಸಾವು
ಇದಕ್ಕೂ ಮೊದಲು ವೇಗವಾಗಿ ಬಂದ ಬಿಎಂಟಿಸಿ ಬಸ್ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನೆಲಮಂಗಲದಲ್ಲಿ ನಡೆದಿತ್ತು. ನೆಲಮಂಗಲ ಸಮೀಪದ ಬಿನ್ನಮಂಗಲ ಬಳಿ ಘಟನೆ ನಡೆದಿದ್ದು, ಬಸ್ ಗುದ್ದಿದ ರಭಸಕ್ಕೆ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದ. ಇದನ್ನೂ ಓದಿ: ಬೈಕ್ ರಿಪೇರಿ ಹಣ ಕೊಡದೆ ಸತಾಯಿಸಿದ್ದಕ್ಕೆ ವ್ಯಕ್ತಿ ಹತ್ಯೆ- ಅಪ್ರಾಪ್ತ ಸೇರಿ ನಾಲ್ವರು ಅರೆಸ್ಟ್
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]