ಅಮರಾವತಿ: ಬೆಕ್ಕು ಕಚ್ಚಿದ ಪರಿಣಾಮ ಇಬ್ಬರು ಮಹಳೆಯರು ಸಾವನ್ನಪ್ಪಿದ ಘಟನೆ ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯಲ್ಲಿ ನಡೆದಿದೆ.
ಮೃತ ದುರ್ದೈವಿಗಳನ್ನು ಕಮಲ(64) ಹಾಗೂ ನಾಗಮಣಿ(43) ಎಂದು ಗುರುತಿಸಲಾಗಿದೆ. ಇವರು ಶನಿವಾರ ಮೊವ್ವಾ ಮಂಡಲ್ ನಲ್ಲಿರುವ ವೆಮುಲಮಾಡ ಗ್ರಾಮದ ನಿವಾಸಿಗಳು. ಇದನ್ನೂ ಓದಿ: ಆಸ್ತಿ ವಿಚಾರಕ್ಕೆ ತಂದೆಯ ಕತ್ತು ಹಿಸುಕಿ ಕೊಂದು ಬೆಂಕಿ ಹಚ್ಚಿದ ಪಾಪಿ ಮಗ
ಕಮಲ ಹಾಗೂ ನಾಗಮಣಿಗೆ ಎರಡು ತಿಂಗಳ ಹಿಂದೆ ಬೆಕ್ಕು ಕಚ್ಚಿತ್ತು. ಕೂಡಲೇ ಅವರು ಸ್ಥಳೀಯ ಆಸ್ಪತ್ರೆಗೆ ತೆರಳಿ ಚುಚ್ಚುಮದ್ದು ಪಡೆದುಕೊಂಡಿದ್ದರು. ಆದರೆ ಮಾ.4 ರಂದು ಕಮಲಾ ಆರೋಗ್ಯದಲ್ಲಿ ವ್ಯತ್ಯಾಸ ಕಾಣಿಸಿಕೊಂಡಿದ್ದು, ಹೀಗಾಗಿ ಅವರನ್ನು ಮಂಗಳಗಿರಿಯ ಎನ್ಆರ್ಐ ಆಸ್ಪತ್ರೆಗೆ ದಾಖಲಿಸಲಾಯಿತು. ಇತ್ತ ನಾಗಮಣಿ ಆರೋಗ್ಯ ಕುಡ ಕೈಕೊಟ್ಟಿದ್ದರಿಂದ ಅವರನ್ನು ಕೂಡ ವಿಜಯವಾಡದ ಕಾರ್ಪೊರೇಟ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಶನಿವಾರ ಮೃತಪಟ್ಟಿದ್ದಾರೆ.
ಬೆಕ್ಕು ಕಚ್ಚಿದ ನಂತರ ಈ ಮಹಿಳೆಯರಿಗೆ ರೇಬಿಸ್ ತಗುಲಿದೆ ಎಂದು ವೈದ್ಯರು ತಿಳಿಸಿದ್ದಾರೆ. ನಾಯಿ, ಇಲಿ, ಹಾವು ಕಚ್ಚಿದರೆ ಕೂಡಲೇ ಸ್ಥಳೀಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯಬೇಕು ಎಂದು ಆರೋಗ್ಯ ಕೇಂದ್ರದ ಅಧಿಕಾರಿ ಶಿವರಾಮಕೃಷ್ಣ ರಾವ್ ಸಲಹೆ ಕೊಟ್ಟಿದ್ದಾರೆ.