ಜೆಸ್ಕಾಂ ಗುತ್ತಿಗೆದಾರನ ನಿರ್ಲಕ್ಷಕ್ಕೆ ಇಬ್ಬರು ಕಾರ್ಮಿಕರು ಬಲಿ

Public TV
1 Min Read
ELECTRIC DEATH

ಕೊಪ್ಪಳ: ಗುತ್ತಿಗೆದಾರನ ನಿರ್ಲಕ್ಷ್ಯದಿಂದಾಗಿ ವಿದ್ಯುತ್ ಪ್ರವಹಿಸಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿ ಮೂವರು ಗಾಯಗೊಂಡಿರುವ ಘಟನೆ ಜಿಲ್ಲೆಯ ಗಂಗಾವತಿ ತಾಲೂಕಿನ ಹಿರೇಬೆಣಕಲ್ ಗ್ರಾಮದಲ್ಲಿ ನಡೆದಿದೆ.

ಹನುಮಂತಪ್ಪ(32) ಹಾಗೂ ಮೆಹಬೂಬ್ ಸಾಬ್(45) ಮೃತ ಕಾರ್ಮಿಕರಾಗಿದ್ದಾರೆ. ಇವರು ಗಂಗಾವತಿ ತಾಲೂಕಿನ ವೆಂಕಟಗಿರಿ ನಿವಾಸಿಗಳಾಗಿದ್ದು, ವಿದ್ಯುತ್ ದುರಸ್ಥಿ ವೇಳೆ ಅವಘಡ ಸಂಭವಿಸಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಗಂಗಾವತಿ ತಾಲೂಕಿನ ಹಿರೇಬೆಣಕಲ್ ಗ್ರಾಮದಲ್ಲಿ ವಿದ್ಯುತ್ ತಂತಿ ಲೈನಿಂಗ್ ಕಾಮಗಾರಿ ನಡೆಯುತ್ತಿದ್ದು, ಜೆಸ್ಕಾಂ ಗುತ್ತಿಗೆದಾರ ವಿದ್ಯುತ್ ಸಂಪರ್ಕ ಕಡಿತಗೊಳಿಸದೇ ಬೇಜವಾಬ್ದಾರಿಯಿಂದ ಕಾಮಗಾರಿ ನಡೆಸುತ್ತಿದ್ದ. ಈ ವೇಳೆ ವಿದ್ಯುತ್ ಪ್ರವಹಿಸಿ ಸ್ಥಳದಲ್ಲೇ ಇಬ್ಬರು ಕಾರ್ಮಿಕರು ಸಾವನ್ನಪ್ಪಿ ಮೂವರು ಗಾಯಗೊಂಡಿದ್ದಾರೆ. ಕೂಡಲೇ ಮೂವರನ್ನು ತಾಲೂಕಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತರ ಕುಟುಂಬದವರ ಆಕ್ರಂದನ ಮುಗಿಲುಮುಟ್ಟಿದೆ. ಜೆಸ್ಕಾಂ ಗುತ್ತಿಗೆದಾರನ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಕರಣ ಸಂಬಂಧ ಗಂಗಾವತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *