ಗಣೇಶ ಮೂರ್ತಿ ವಿಸರ್ಜನೆಗೆ ತೆರಳಿದ್ದ ಇಬ್ಬರು ನೀರು ಪಾಲು

Public TV
0 Min Read
MYS DEATH 1

ಮೈಸೂರು: ಗಣೇಶ ಮೂರ್ತಿ ವಿಸರ್ಜನೆಗೆ ತೆರಳಿದ್ದ ಇಬ್ಬರು ಯುವಕರು ನೀರುಪಾಲಾದ ಘಟನೆ ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ವಿ.ಜಿ.ಕೊಪ್ಪಲು ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಬಾಲಕ ಮಂಜುನಾಥ್(16), ಯುವಕ ಮಹೇಶ್(27) ಮೃತಪಟ್ಟ ದುರ್ದೈವಿಗಳು. ಇಂದು ಬೆಳಗ್ಗೆ ತಮ್ಮ ಗ್ರಾಮದ ಕೆರೆಗೆ ಯುವಕರ ಗುಂಪು ಗಣಪತಿ ಮೂರ್ತಿ ವಿಸರ್ಜನೆಗೆ ತೆರಳಿದ್ದ ವೇಳೆ ಈ ಅವಘಡ ಸಂಭವಿಸಿದೆ.

ಕೆರೆಯಿಂದ ಶವಗಳನ್ನು ಹೊರ ತೆಗೆದು ಮರಣೋತ್ತರ ಪರೀಕ್ಷೆಗೆ ಪಿರಿಯಾಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಕುರಿತು ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕಕರಣ ದಾಖಲಾಗಿದೆ.

MYS DEATH 5

MYS DEATH 4

MYS DEATH 3

MYS DEATH 2

Share This Article