ಎರಡು ಪ್ರತ್ಯೇಕ ಅಪಘಾತದಲ್ಲಿ ಯುವಕರಿಬ್ಬರ ದುರ್ಮರಣ

Public TV
1 Min Read
RMG ACT

ರಾಮನಗರ: ಎರಡು ಪ್ರತ್ಯೇಕ ಅಪಘಾತದಲ್ಲಿ ಯುವಕರಿಬ್ಬರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕನಕಪುರ ತಾಲೂಕಿನಲ್ಲಿ ನಡೆದಿದೆ.

ಗುರುರಾಜ್ (21) ಮತ್ತು ಕಿರಣ್ (25) ಮೃತ ದುರ್ದೈವಿಗಳು. ಕೋಡಿಹಳ್ಳಿಯಿಂದ ಗುರುರಾಜ್ ಬೈಂಡಿಂಗ್ ಕೆಲಸಕ್ಕೆ ಬೈಕಿನಲ್ಲಿ ತೆರಳುತ್ತಿದ್ದನು. ಈ ವೇಳೆ ಕನಕಪುರ ಟೌನ್ ಹಾಗೂ ಕನಕಪುರ ತಾಲೂಕಿನ ಟಿ.ಬೇಕುಪ್ಪೆ ಸರ್ಕಲ್ ಬಳಿ ವೇಗವಾಗಿ ಬಂದ ಟ್ರಾಕ್ಟರ್ ಬೈಕಿಗೆ ಹಿಂಬದಿಯಿಂದ ಗುದ್ದಿದೆ. ಪರಿಣಾಮ ಬೈಕಿನಲ್ಲಿ ಗುರುರಾಜ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.

ಹಿಂಬದಿ ಸವಾರ ಸುರೇಶ್ ಗಾಯಗೊಂಡಿದ್ದು, ಆತನನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆ ಸಂಬಂಧ ಕನಕಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

RMG

ಇತ್ತ ಕನಕಪುರ ಟೌನ್‍ನ ಮೆಳೆಕೋಟೆ ಸಮೀಪದಲ್ಲಿ ಲಾರಿ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಪರಿಣಾಮ ದೊಡ್ಡ ಆಲಹಳ್ಳಿಯ ನಿವಾಸಿ ಕಿರಣ್ ಮೃತಪಟ್ಟಿದ್ದಾನೆ. ಇಲ್ಲೂ ಕೂಡ ಹಿಂಬದಿ ಸವಾರ ಗೋವಿಂದರಾಜ್ ಗಾಯಗೊಂಡಿದ್ದು, ಆತನನ್ನು ಕನಕಪುರ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ಕನಕಪುರ ಸಂಚಾರಿ ಪೊಲೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *