ಬ್ರಿಡ್ಜ್ ಗೆ ಬೈಕ್ ಡಿಕ್ಕಿಯಾಗಿ ಯುವಕರಿಬ್ಬರ ದಾರುಣ ಸಾವು

Public TV
0 Min Read
ACCIDENT 1

ಮಂಡ್ಯ: ಬ್ರಿಡ್ಜ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರು ದಾರುಣವಾಗಿ ಮೃತಪಟ್ಟ ಘಟನೆ ಮಂಡ್ಯದಲ್ಲಿ ನಡೆದಿದೆ.

ಜಲ್ಲೆಯ ಮಳವಳ್ಳಿ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 209ರ ಚಿಲ್ಲಾಪುರ ಗೇಟ್ ಬಳಿ ತಡರಾತ್ರಿ ಈ ಘಟನೆ ನಡೆದಿದೆ. ಹಲಗೂರಿನ ಪ್ರತಾಪ್(23) ಬಾಣಸಮುದ್ರದ ಶಶಿ(24) ಮೃತ ದುರ್ದೈವಿಗಳು. ಘಟನೆಯಿಂದ ಪ್ರತಾಪ್ ಸ್ಥಳದಲ್ಲಿಯೇ ಮೃತಪಟ್ಟರೆ, ಶಶಿ ಆಸ್ಪತ್ರೆಗೆ ದಾಖಲಿಸುವ ಸಂದರ್ಭದಲ್ಲಿ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ.

ಅಜಾಗರೂಕತೆ ಹಾಗೂ ಅತಿವೇಗವೇ ಈ ಘಟನೆಗೆ ಕಾರಣ ಎಂದು ತಿಳಿದುಬಂದಿದೆ. ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

mnd accdent av 2

mnd accdent av 6

mnd accdent av 7

Share This Article
Leave a Comment

Leave a Reply

Your email address will not be published. Required fields are marked *