ಶಿವಮೊಗ್ಗ: ತುಂಗಾ ನದಿಯಲ್ಲಿ (Tunga River) ಮೀನು ಹಿಡಿಯಲು (Fishing) ತೆರಳಿದ್ದ ಇಬ್ಬರು ಯುವಕರು (Youths) ನೀರು ಪಾಲಾದ ಘಟನೆ ಶಿವಮೊಗ್ಗದ (Shivamogga) ಕುರುಬರಪಾಳ್ಯ ಬಳಿ ನಡೆದಿದೆ.
ತುಂಗಾನದಿಯಲ್ಲಿ ನೀರು ಪಾಲಾದವರನ್ನು ಮಹಮ್ಮದ್ ಫೈಸಲ್ (19) ಹಾಗೂ ಅಂಜುಂಖಾನ್ (19) ಎಂದು ಗುರುತಿಸಲಾಗಿದೆ. ಸವಾಯಿಪಾಳ್ಯದ ಮಹಮ್ಮದ್ ಫೈಸಲ್ ಹಾಗೂ ಇಲಿಯಾಜ್ ನಗರದ ಅಂಜುಂಖಾನ್ ಪದವಿ ವಿದ್ಯಾರ್ಥಿಗಳಾಗಿದ್ದು, ಇಬ್ಬರೂ ಸ್ನೇಹಿತರಾಗಿದ್ದರು. ಇದನ್ನೂ ಓದಿ: ಚೈತ್ರಾ ಕುಂದಾಪುರ ಮೇಲೆ ಮತ್ತೊಂದು FIR – ಸನಾತನ ಧರ್ಮ ಬಟ್ಟೆ ಮಳಿಗೆ ಪ್ರಕರಣದಲ್ಲೂ ವಂಚನೆ
ಸೋಮವಾರ ಮಧ್ಯಾಹ್ನ ತುಂಗಾನದಿಯಲ್ಲಿ ಮೀನು ಹಿಡಿಯಲು ತೆರಳಿದ್ದ ವೇಳೆ ಇಬ್ಬರೂ ನೀರು ಪಾಲಾಗಿದ್ದು, ಮಹಮ್ಮದ್ ಫೈಸಲ್ ಮೃತದೇಹ ಪತ್ತೆಯಾಗಿದೆ. ಅಂಜುಂಖಾನ್ ಮೃತದೇಹಕ್ಕಾಗಿ ನದಿಯಲ್ಲಿ ಶೋಧಕಾರ್ಯ ಮುಂದುವರೆದಿದೆ. ಇದನ್ನೂ ಓದಿ: ರಸ್ತೆಬದಿ ನಿಲ್ಲಿಸಿದ್ದ ಕಂಟೈನರ್ಗೆ ಕಾರು ಡಿಕ್ಕಿ – ನಾಲ್ವರು ಸಾವು
ಅಗ್ನಿಶಾಮಕ ಸಿಬ್ಬಂದಿ ಹಾಗೂ ಸ್ಥಳೀಯ ಮೀನುಗಾರರು ನದಿಯಲ್ಲಿ ಶೋಧಕಾರ್ಯ ನಡೆಸುತ್ತಿದ್ದಾರೆ. ಘಟನೆಯಿಂದ ಕುಟುಂಬಸ್ಥರ ರೋದನೆ ಮುಗಿಲು ಮುಟ್ಟಿದೆ. ಈ ಕುರಿತು ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ನಿಂತಿದ್ದ ಲಾರಿಗೆ ಹಿಂಬದಿಯಿಂದ ಟ್ರಕ್ ಡಿಕ್ಕಿ – ಓರ್ವ ಸಾವು, ನಾಲ್ವರು ಗಂಭೀರ
Web Stories