ಜೈಪುರ: ಉದಯಪುರದಲ್ಲಿ ಟೈಲರ್ನನ್ನು ಬರ್ಬರವಾಗಿ ಹತ್ಯೆಗೈದ ಇಬ್ಬರು ಮುಸ್ಲಿಂ ಮೂಲಭೂತವಾದಿ ಯುವಕರನ್ನು ವೀಡಿಯೋ ವೈರಲ್ ಆದ ಕೆಲವೇ ಗಂಟೆಗಳಲ್ಲಿ ರಾಜಸ್ಥಾನದ ರಾಜ್ಸಮಂದ್ ಪ್ರದೇಶದಲ್ಲಿ ಬಂಧಿಸಲಾಗಿದೆ.
ನೂಪರ್ ಶರ್ಮಾಗೆ ಬೆಂಬಲ ವ್ಯಕ್ತಪಡಿಸಿ ವಾಟ್ಸಪ್ ಸ್ಟೇಟಸ್ ಹಾಕಿದ್ದಕ್ಕೆ ಇಬ್ಬರು ಮುಸ್ಲಿಂ ಮೂಲಭೂತವಾದಿ ಯುವಕರು ಟೈಲರ್ ಒಬ್ಬರನ್ನು ಬರ್ಬರವಾಗಿ ಶಿರಚ್ಛೇದ ಮಾಡಿದ ವೀಡಿಯೋವನ್ನು ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಮಧ್ಯಾಹ್ನ 2:30ರ ವೇಳೆಗೆ ಈ ಘಟನೆ ನಡೆದಿತ್ತು. ಸಂಜೆ ವೇಳೆಗೆ ಇಬ್ಬರೂ ಆರೋಪಿಗಳನ್ನು ರಾಜಾಸ್ಥಾನದಲ್ಲಿ ಬಂಧಿಸಲಾಗಿದೆ.
ಆರೋಪಿಗಳ ವಿರುದ್ಧ ಶೀಘ್ರವೇ ತನಿಖೆ ನಡೆಸಿ, ಕಠಿಣ ಶಿಕ್ಷೆಗೆ ಗುರಿಪಡಿಸುವುದಾಗಿ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.
It's a sad & shameful incident. There's tense atmosphere in the nation today. Why don't PM & Amit Shah ji address the nation? There is tension among people. PM should address the public&say that such violence won't be tolerated & appeal for peace: Rajasthan CM on Udaipur murder pic.twitter.com/rkX0VRJPk0
— ANI (@ANI) June 28, 2022
ಇಂಟರ್ನೆಟ್ ಸೇವೆ ಸ್ಥಗಿತ: ಟೈಲರ್ ಶಿರಚ್ಛೇದನ ವೀಡಿಯೋ ಜಾಲತಾಣದಲ್ಲಿ ಹರಿದಾಡುತ್ತಿದ್ದಂತೆ ಹಿಂದೂ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ದಾಖಲಿಸಿವೆ. ಪರಿಸ್ಥಿತಿ ಕೈ ಮೀರುತ್ತಿದ್ದು, ಈ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ ಉದಯಪುರದಲ್ಲಿ ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಿದೆ.
ವೀಡಿಯೋದಲ್ಲಿ ಏನಿದೆ?
ನಾನು ರಿಯಾಜ್ ಅಹ್ಮದ್.. ಇವನು ನನ್ನಣ್ಣ ಮೊಹಮ್ಮದ್. ಉದಯಪುರದಲ್ಲಿರುವ ಮಾಲ್ಡಾಸ್ ಸ್ಟ್ರೀಟ್ನಲ್ಲಿರುವ ಹಿಂದೂ ವ್ಯಕ್ತಿಯ ತಲೆಯನ್ನು ಕತ್ತರಿಸಿದ್ದೇವೆ. ನಾವು ಬದುಕುತ್ತಿದ್ದೇವೆ ಪ್ರವಾದಿ ಸಲುವಾಗಿ. ಪ್ರವಾದಿಗಾಗಿ ಜೀವ ಬಿಡಲು ಸಿದ್ದ. ಏಯ್ ನರೇಂದ್ರ ಮೋದಿ ಬೆಂಕಿ ಹಬ್ಬಿಸಿದ್ದು ನೀನು. ಅದನ್ನುಆರಿಸುತ್ತೇವೆ ನಾವು. ನಾನು ಜೀವಂತವಿದ್ದರೆ ಈ ನನ್ನ ಕತ್ತಿ ನಿನ್ನ ಕುತ್ತಿಗೆ ತಲುಪಿ, ನಿನ್ನನ್ನು ಸಂಹಾರ ಮಾಡುತ್ತೇನೆ.