Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ದೇಶೀಯ ಭಯೋತ್ಪಾದನೆಗೆ ಮದರಸಾಗಳೇ ಕಾರಣ – ಹಿಂದೂ ಜಾಗರಣಾ ವೇದಿಕೆ ಕಿಡಿ

Public TV
Last updated: June 30, 2022 4:06 pm
Public TV
Share
2 Min Read
HINDUJAGARANA VEDIKE
SHARE

ಉಡುಪಿ: ದೇಶೀಯ ಭಯೋತ್ಪಾದನೆಗೆ ಮದರಸಾಗಳೇ ಕಾರಣ. ದೇಶಾದ್ಯಂತ ಮದರಸಗಳಿಗೆ ಲಗಾಮು ಹಾಕಿದರೆ ರಾಜಸ್ಥಾನದ ಉದಯಪುರದಲ್ಲಿ ಟೈಲರ್ ಕನ್ಹಯ್ಯ ಲಾಲ್‍ರಂತಹ ದುಷ್ಕೃತ್ಯಗಳನ್ನು ತಡೆಯಬಹುದು. ಮುಸ್ಲಿಂ ಭಯೋತ್ಪಾದನೆ ಸೃಷ್ಟಿಯಾಗಿರುವ ಕೇಂದ್ರವಾಗಿ ಮದರಸಗಳು ಪರಿವರ್ತನೆಯಾಗಿದೆ ಎಂದು ಹಿಂದೂ ಜಾಗರಣ ವೇದಿಕೆ ಮದರಾಸಗಳ ವಿರುದ್ಧ ವಾಗ್ದಾಳಿ ನಡೆಸಿದೆ.

TAILOR

ರಾಜಸ್ಥಾನದ ಉದಯಪುರದಲ್ಲಿ ಟೈಲರ್ ಕನ್ಹಯ್ಯ ಲಾಲ್ ಹತ್ಯೆಯನ್ನು ಖಂಡಿಸಿ, ಉಡುಪಿಯಲ್ಲಿ ಹಿಂದೂ ಜಾಗರಣ ವೇದಿಕೆ ಪ್ರತಿಭಟನೆ ಮಾಡಿದೆ. ನಿರಂತರವಾಗಿ ಧಾರಾಕಾರ ಮಳೆ ಸುರಿಯುತ್ತಿದ್ದರೂ ಸುಮಾರು ಎರಡು ಕಿಲೋಮೀಟರ್‌ಗಳ ಕಾಲ ನೂರಾರು ಹಿಂದೂ ಕಾರ್ಯಕರ್ತರು ಘಟನೆಯ ವಿರುದ್ಧ ಧಿಕ್ಕಾರ ಕೂಗುತ್ತಾ ಸಾಗಿದರು. ಬಿಜೆಪಿಯ ನೂಪುರ್ ಶರ್ಮ ಹೇಳಿಕೆಯನ್ನು ಬೆಂಬಲಿಸಿದ ಕಾರಣಕ್ಕೆ ಉದಯಪುರದಲ್ಲಿ ಕನ್ಹಯ್ಯ ಲಾಲ್ ಹತ್ಯೆಯಾಗಿದೆ. ಈ ಬೆಳವಣಿಗೆಯನ್ನು ಖಂಡಿಸಿ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿದೆ. ಕರಾವಳಿಯಲ್ಲಿ ಹಿಂದೂ ಜಾಗರಣ ವೇದಿಕೆ ಮುಂದಾಳತ್ವದಲ್ಲಿ ಹಿಂದೂ ಪರ ಸಂಘಟನೆ ಕಾರ್ಯಕರ್ತರು ಬಿಜೆಪಿ ಪದಾಧಿಕಾರಿಗಳು ಪ್ರತಿಭಟನೆ ಮಾಡುವ ಮೂಲಕ ಘಟನೆಯನ್ನು ಖಂಡಿಸಿದರು. ಇದನ್ನೂ ಓದಿ: ಕನ್ಹಯ್ಯಾ ಲಾಲ್ ಕುಟುಂಬಕ್ಕೆ ನೆರವು – 24 ಗಂಟೆಯಲ್ಲಿ ಬಂತು 1 ಕೋಟಿ

HINDUJAGARANA VEDDIKE PROTEST

ಹಿಂದೂ ಜಾಗರಣ ವೇದಿಕೆ ಮುಖಂಡ ಪ್ರಕಾಶ್ ಕುಕ್ಕೆಹಳ್ಳಿ ಮಾತನಾಡಿ, ಇಸ್ಲಾಂನ ಭಯೋತ್ಪಾದನೆ ಮತ್ತು ಕ್ರೌರ್ಯತೆ ಮಿತಿಮೀರಿದ ಹಿನ್ನೆಲೆಯಲ್ಲಿ ನಡೆದ ಘಟನೆ ಇದು. ಹಿಂದೂ ಜಾಗರಣ ವೇದಿಕೆ ಇದನ್ನು ಖಂಡಿಸುತ್ತದೆ. ದೇಶಾದ್ಯಂತ ಮದರಸಗಳಿಗೆ ಲಗಾಮು ಹಾಕಿದರೆ ಇಂತಹ ದುಷ್ಕೃತ್ಯಗಳನ್ನು ತಡೆಯಬಹುದು. ಮುಸ್ಲಿಂ ಭಯೋತ್ಪಾದನೆ ಸೃಷ್ಟಿಯಾಗಿರುವ ಕೇಂದ್ರವಾಗಿ ಮದರಸಗಳು ಪರಿವರ್ತನೆಯಾಗಿದೆ. ಆ ಬಗ್ಗೆ ನಿಗಾವಹಿಸಬೇಕು. ಕೇಂದ್ರ ಸರ್ಕಾರಕ್ಕೆ ಒತ್ತಾಯ ಮಾಡುತ್ತಿದ್ದೇವೆ, ಸಮಾಜದಲ್ಲಿ ಅನ್ಯಾಯ ಅಹಿತಕರ ಘಟನೆಗಳನ್ನು ಈ ಭಯೋತ್ಪಾದನಾ ಕೃತ್ಯವನ್ನು ತಡೆಗಟ್ಟಿ. ಸಾಧ್ಯವಾಗದಿದ್ದರೆ ಹಿಂದೂ ಸಮಾಜ ಇಂತಹ ದುಷ್ಟರನ್ನು ಮಟ್ಟಹಾಕುತ್ತದೆ. ಆರೋಪಿಗಳ ಬಂಧನ ಆಗಿದೆ. ಆದರೆ ಆರೋಪಿಗಳು ಎಲ್ಲದಕ್ಕೂ ಕೂಡ ಸಿದ್ಧತೆ ಮಾಡಿಕೊಂಡು ಈ ಕೃತ್ಯ ಎಸಗಿದ್ದು ಎಂಬುದು ಜಗಜ್ಜಾಹೀರಾಗಿದೆ. ಒಂದು ಕೊಲೆಯನ್ನು ಮೊಬೈಲ್ ಶೂಟಿಂಗ್ ಮಾಡಿ ಲೈವ್ ಮಾಡುವ ತನಕ ಮನಸ್ಥಿತಿ ಬಂದಿದೆ ಎಂದರೆ ಇದು ಭಯೋತ್ಪಾದನೆ ಹೊರತು ಮತ್ತೇನು ಅಲ್ಲ. ಕೊಲೆಯ ನಂತರ ಮತ್ತೊಂದು ವೀಡಿಯೋ ಮಾಡಿ ತಾವು ಮಾಡಿರುವ ಕೃತ್ಯವನ್ನು ಹೆಮ್ಮೆಯಿಂದ ಹೇಳಿಕೊಂಡಿದ್ದಾರೆ. ಇಬ್ಬರಿಗೆ ಮರಣದಂಡನೆ ಕೊಟ್ಟರು ಅದಕ್ಕೂ ಅವರು ಸಿದ್ಧರಾಗಿರುತ್ತಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: 4 ವರ್ಷದ ಮಗುವಿನ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿಗೆ ಗಲ್ಲು

ಉದಯಪುರದ ಇಬ್ಬರೂ ಭಯೋತ್ಪಾದಕರಂತೆ ದೇಶಾದ್ಯಂತ ಭಯೋತ್ಪಾದಕರು ಹುಟ್ಟಿದ್ದಾರೆ. ಆರಂಭಿಕ ಹಂತದಿಂದಲೇ ಇಂತಹದ್ದನ್ನು ಕಿತ್ತು ಹಾಕುವ ಕೆಲಸ ಆಗಬೇಕಾಗಿದೆ. ಇಸ್ಲಾಮ್‌ನ ಮುಖ ಏನು ಎಂಬುದನ್ನು ತೋರಿಸಲು ಅವರಿಬ್ಬರು ಹೊರಟಿದ್ದಾರೆ. ಕ್ರೌರ್ಯದ ಮುಖಾಂತರ ಭಯವನ್ನು ಹುಟ್ಟಿಸುವ ಪ್ರಯತ್ನ ಮಾಡಲಾಗುತ್ತಿದೆ. ಮುಸಲ್ಮಾನರು ಮತ್ತು ಇಸ್ಲಾಮ್‌ನ ಬಗ್ಗೆ ಯಾರಾದರೂ ಮಾತನಾಡಿದರೆ ಇದೇ ಗತಿ ಎಂಬ ಸಂದೇಶವನ್ನು ಕೊಡಲು ಹೊರಟಿದ್ದಾರೆ. ಇಂತಹ ಘಟನೆಗಳು ಜಗತ್ತಿನ ಬೇರೆ ಬೇರೆ ದೇಶಗಳಲ್ಲಿ ಇದೆ. ಭಾರತದಲ್ಲಿ ಇದು ಪಸರಿಸಲು ಶುರುವಾಗಿದೆ. ಇಂತಹ ಶಕ್ತಿಗಳನ್ನು ಪ್ರಾರಂಭದಲ್ಲೇ ಮಟ್ಟಹಾಕಬೇಕು ಎಂದರು.

HINDU JAGARANAVEDIKE PROTEST

ಉಡುಪಿ ನಗರದ ಪ್ರಮುಖ ರಸ್ತೆಗಳಲ್ಲಿ ಸಾಗಿದ ಮೆರವಣಿಗೆ ಅಜ್ಜರಕಾಡು ಹುತಾತ್ಮ ವೇದಿಕೆಯ ಬಳಿ ಸಮಾಪನಗೊಂಡಿತು ಸಭೆಯಲ್ಲಿ ಘಟನೆಯನ್ನು ಖಂಡಿಸಲಾಯಿತು. ಇಂತಹ ಘಟನೆ ಮರುಕಳಿಸುವಂತೆ ಕೇಂದ್ರ ಮತ್ತು ಆಯಾಯ ರಾಜ್ಯ ಸರ್ಕಾರಗಳು ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಲಾಯಿತು.

Live Tv

TAGGED:Hindu jagarana vedikeKanhaiyaLalUdaipurudupiಉಡುಪಿಉದಯಪುರಕನ್ಹಯ್ಯ ಲಾಲ್‌ಹಿಂದೂ ಜಾಗರಣ ವೇದಿಕೆ
Share This Article
Facebook Whatsapp Whatsapp Telegram

Cinema Updates

Kamal Haasan
ಕಮಲ್ `ಕನ್ನಡ’ ವಿವಾದ – ಜೂ.20ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್
11 hours ago
Kangana Ranaut to bengaluru
ಬೆಂಗಳೂರಿನ ಶಿವೋಹಂ ಶಿವ ದೇವಸ್ಥಾನಕ್ಕೆ ಭೇಟಿ ನೀಡಿದ ಕಂಗನಾ ರಣಾವತ್‌
12 hours ago
Timmana Mottegalu
ಜೂ.27ಕ್ಕೆ `ತಿಮ್ಮನ ಮೊಟ್ಟೆಗಳು’ ರಿಲೀಸ್
15 hours ago
Karisma Kapoor Sunjay Kapur
ನಟಿ ಕರಿಷ್ಮಾ ಕಪೂರ್‌ ಮಾಜಿ ಪತಿ ಸಂಜಯ್‌ ಹೃದಯಾಘಾತದಿಂದ ನಿಧನ
1 day ago

You Might Also Like

Haveri Car Bus Accident
Crime

ಹಾವೇರಿ | ಸಾರಿಗೆ ಬಸ್‌ಗೆ ಕಾರು ಡಿಕ್ಕಿ – ಇಬ್ಬರು ದುರ್ಮರಣ, ಓರ್ವ ಗಂಭೀರ

Public TV
By Public TV
7 minutes ago
Narayanapura Dam
Districts

ನಾರಾಯಣಪುರ ಜಲಾಶಯಕ್ಕೆ ಒಳಹರಿವು ಹೆಚ್ಚಳ – ಕೃಷ್ಣಾ ನದಿಗೆ 29,226 ಕ್ಯೂಸೆಕ್ ನೀರು ಬಿಡುಗಡೆ

Public TV
By Public TV
31 minutes ago
Ahmedabad Air India Plane Crash 2
Latest

ಏರ್‌ ಇಂಡಿಯಾ ವಿಮಾನ ದುರಂತ – ಸಾವಿನ ಸಂಖ್ಯೆ 274ಕ್ಕೆ ಏರಿಕೆ

Public TV
By Public TV
37 minutes ago
Ahmedabad Air India Plane Crash 1
Latest

ಅಹಮದಾಬಾದ್ ವಿಮಾನ ಪತನ – 5 ತಂಡಗಳಿಂದ ತನಿಖೆ

Public TV
By Public TV
44 minutes ago
Ahmedabad Plane Crash 1 1
Latest

ಬ್ಲ್ಯಾಕ್‌ಬಾಕ್ಸ್‌ನಲ್ಲಿ ಅಡಗಿದೆ ವಿಮಾನ ದುರಂತದ ರಹಸ್ಯ – ನಾಳೆಯೊಳಗೆ ಅಪಘಾತಕ್ಕೆ ಅಸಲಿ ಕಾರಣ ಸಿಗುತ್ತಾ?

Public TV
By Public TV
1 hour ago
Jagannath Rath Yatra
Latest

ಬೆಂಗಳೂರು ಕಾಲ್ತುಳಿತ ಬೆನ್ನಲ್ಲೇ ಎಚ್ಚೆತ್ತ ಗುಜರಾತ್‌; ರಥಯಾತ್ರೆಯಲ್ಲಿ ಕಾಲ್ತುಳಿತ ತಪ್ಪಿಸಲು ನಯಾ ಪ್ಲ್ಯಾನ್‌ – AI ಟೆಕ್ನಾಲಜಿ ಮೊರೆ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?