ಸಾನ್ಯ-ಜಶ್ವಂತ್ ಬಗ್ಗೆ ಕೆಟ್ಟದಾಗಿ ಮಾತನಾಡಿ, ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಉದಯ್ ಸೂರ್ಯ

Public TV
1 Min Read
sanya 1 1

ದೊಡ್ಮನೆ ಬಿಗ್ ಬಾಸ್‌ನಲ್ಲಿ ಸಾಕಷ್ಟು ವಿಚಾರಗಳಿಂದ ಸದ್ದು ಮಾಡುತ್ತಿದೆ. ಸ್ಪರ್ಧಿಗಳು ಸಾಕಷ್ಟು ವಿಚಾರಗಳಿಂದ ನೋಡುಗರ ಗಮನ ಸೆಳೆಯುತ್ತಿದ್ದಾರೆ. ಸದ್ಯ ಉದಯ್ ಸೂರ್ಯ, ಸಾನ್ಯ ಮತ್ತು ಜಶ್ವಂತ್ ಆಡಿರುವ ಮಾತು ಮನಸ್ತಾಪಕ್ಕೆ ಕಾರಣವಾಗಿದೆ. ಉದಯ್ ಆಡಿರುವ ಮಾತಿನಿಂದ ಮನೆಯ ಕಲಹಕ್ಕೆ ಕಾರಣವಾಗಿದೆ.‌

uday surya 1 1ಬಿಗ್ ಬಾಸ್ ಶೋ ಆರಂಭವಾದ ದಿನದಿಂದಲೂ ಸಾನ್ಯ ಮತ್ತು ರೂಪೇಶ್, ಸಾನ್ಯ ಮತ್ತು ಜಶ್ವಂತ್ ಬೋಪಣ್ಣ ಒಳ್ಳೆಯ ಸ್ನೇಹಿತರು ಆದರೆ ಇವರ ಸ್ನೇಹ, ಸಂಬಂಧದ ಬಗ್ಗೆ ಕೆಟ್ಟಾಗಿ ಉದಯ್ ಮಾತನಾಡಿದ್ದರು. ಈ ಎಲ್ಲಾ ವಿಚಾರಗಳು ಉದಯ್ ಸೂರ್ಯಗೆ ಮುಳುವಾಗಿದೆ. ಮನೆ ಮಂದಿ ಉದಯ್ ವಿರುದ್ಧ ತಿರುಗಿ ಬಿದ್ದಿದ್ದಾರೆ. ಉದಯ್‌ಗೆ ಕ್ಲಾಸ್ ತರಟೆಗೆ ತೆಗೆದುಕೊಂಡಿದ್ದಾರೆ.

bigg boss 1 2

ಒಳ ಉಡುಪಿನ ವಿಚಾರಕ್ಕೆ ಸಂಬಂಧಿಸಿ ಸಾನ್ಯಾ ಹಾಗೂ ಉದಯ್ ನಡುವೆ ಒಂದು ಹಾಸ್ಯಮಯ ಸಂಭಾಷಣೆ ನಡೆದಿತ್ತು. ಆ ಸಂದರ್ಭದಲ್ಲಿ ಉದಯ್‌ಗೆ ಚೈತ್ರಾ ಕ್ಲೋಸ್ ಇದ್ದರು. ಹಾಸ್ಯದ ರೀತಿಯಲ್ಲಿ ನಡೆದ ಒಳ ಉಡುಪಿನ ವಿಚಾರವನ್ನು ಅಶ್ಲೀಲ ಅರ್ಥ ಬರುವ ರೀತಿಯಲ್ಲಿ ಚೈತ್ರಾ ಎದುರು ಬಣ್ಣಿಸಿದ್ದರು ಉದಯ್. ಇದು ಚೈತ್ರಾಗೆ ಇಷ್ಟವಾಗಿರಲಿಲ್ಲ.

uday surya 1ಗರ್ಲ್‌ಫ್ರೆಂಡ್ ನಂದು ಇದ್ದಾಗ ಜಶ್ವಂತ್ ಒಂದು ರೀತಿಯಲ್ಲಿ ಇರುತ್ತಾನೆ. ಅವಳು ಇಲ್ಲದ್ದಾಗ ಸಾನ್ಯ ಅಯ್ಯರ್ ಬಳಿ ಬೇರೆ ರೀತಿಯಲ್ಲಿ ಇರುತ್ತಾನೆ. ಕ್ಯಾಮೆರಾ ಇಲ್ಲದಿದ್ದರೆ ಇಲ್ಲಿ ಬೇರೆಯದೇ ಆಗುತ್ತಿತ್ತು. ಸಾನ್ಯಾಳನ್ನು ಬೀಳಿಸಿಕೊಳ್ಳಬೇಕು ಎಂಬುದು ರೂಪೇಶ್‌ಗೆ ಇದೆ ಎಂಬುದನ್ನೂ ಚೈತ್ರಾ ಎದುರು ಉದಯ್ ಹೇಳಿದ್ದರು. ಇದೀಗ ಉದಯ್‌ ಮಾತು ಸಾನ್ಯ ಕೋಪಕ್ಕೆ ಕಾರಣವಾಗಿದೆ. ಇದನ್ನೂ ಓದಿ:ಆರ್ಯವರ್ಧನ್ ಪಾತ್ರವನ್ನು ಮತ್ತೆ ಅನಿರುದ್ಧ ಮಾಡ್ತಾರಾ? ಕುತೂಹಲ ಮೂಡಿಸಿದೆ ‘ಜೊತೆ ಜೊತೆಯಲಿ’ ಟೀಮ್ ನಡೆ

sanya iyer 1 7

ಇದೀಗ ಚೈತ್ರಾ, ಜಶ್ವಂತ್, ಸಾನ್ಯ, ಜಶ್ವಂತ್, ರೂಪೇಶ್, ನಂದು ಚರ್ಚಿಸಿದ ಬಳಿಕ ಎಲ್ಲರ ಎದುರಲ್ಲೇ ರೆಡ್ ಹ್ಯಾಂಡ್ ಆಗಿ ಉದಯ್ ಸಿಕ್ಕಿಹಾಕಿಕೊಂಡಿದ್ದಾರೆ. ಉದಯ್ ನಡೆಗೆ ಎಲ್ಲರೂ ಛೀಮಾರಿ ಹಾಕಿದ್ದಾರೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *