Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಉದಯಗಿರಿ ಗಲಭೆ ಕೇಸ್‌ – ಓಲೈಕೆ ಕಾರಣದಿಂದ ರಾಜ್ಯಕ್ಕೇ ಬೆಂಕಿ: ಛಲವಾದಿ ನಾರಾಯಣಸ್ವಾಮಿ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಉದಯಗಿರಿ ಗಲಭೆ ಕೇಸ್‌ – ಓಲೈಕೆ ಕಾರಣದಿಂದ ರಾಜ್ಯಕ್ಕೇ ಬೆಂಕಿ: ಛಲವಾದಿ ನಾರಾಯಣಸ್ವಾಮಿ ಕಿಡಿ

Karnataka

ಉದಯಗಿರಿ ಗಲಭೆ ಕೇಸ್‌ – ಓಲೈಕೆ ಕಾರಣದಿಂದ ರಾಜ್ಯಕ್ಕೇ ಬೆಂಕಿ: ಛಲವಾದಿ ನಾರಾಯಣಸ್ವಾಮಿ ಕಿಡಿ

Public TV
Last updated: February 11, 2025 4:58 pm
Public TV
Share
2 Min Read
Chalavadi Narayanaswamy
SHARE

ಬೆಂಗಳೂರು: ಗಾಡ್, ಗಾಡ್ಸ್ ಗ್ರೇಸ್, ಗಾಡ್ ಬ್ಲೆಸ್ ಯು ಎಂದು ಕೆಲವು ನಾಯಕರ ದೇಹದ ಮೇಲೆ ಬರೆದುದನ್ನು ಪ್ರತಿಭಟಿಸಿ ಸುಮಾರು 800 ಜನರು ಮೈಸೂರಿನಲ್ಲಿ ಪೊಲೀಸ್ ಸ್ಟೇಶನ್‍ಗೆ ನುಗ್ಗಿ ಡಿಸಿಪಿ ವ್ಯಾನ್‍ಗೆ ಬೆಂಕಿ ಹಚ್ಚಿದ್ದಾರೆ. ರಾಜ್ಯದಲ್ಲಿ ಸರ್ಕಾರ ಬದುಕಿದೆಯೇ? ಕರ್ನಾಟಕದಲ್ಲಿ (Karnataka) ಕಾನೂನು- ಸುವ್ಯವಸ್ಥೆ ಇದೆ ಎಂದು ಒಪ್ಪಿಕೊಳ್ಳಬೇಕೇ ಎಂದು ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ (Chalavadi Narayanaswamy) ಆಕ್ರೋಶ ವ್ಯಕ್ತಪಡಿಸಿದರು.

ಕೆಜಿ ಹಳ್ಳಿ ಘಟನೆಯಲ್ಲಿ ಹತ್ತಾರು ವಾಹನ ಸುಟ್ಟು ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿ ಪೊಲೀಸರ ಮೇಲೆ ಕಲ್ಲು ತೂರಲಾಗಿತ್ತು. ಆದರೆ ನೀವು ಅನೇಕರನ್ನು ಕೇಸಿನಿಂದ ಬಿಡಲು ಮುಂದಾದಿರಿ ಎಂದು ಛಲವಾದಿ ಟೀಕಿಸಿದರು.

ಹುಬ್ಬಳ್ಳಿಯಲ್ಲೂ (Hubballi) ಪೊಲೀಸರ ಮೇಲೆ ಕಲ್ಲು ತೂರಲಾಗಿತ್ತು. ಕೇಸ್‌ ವಾಪಸ್ ಪಡೆಯಲಾಯಿತು. ಈ ಓಲೈಕೆ ಕಾರಣದಿಂದ ರಾಜ್ಯಕ್ಕೆ ಬೆಂಕಿ ಬೀಳುತ್ತಿದೆಯಲ್ಲವೇ? ಕಾಂಗ್ರೆಸ್ ನಾಯಕತ್ವ, ಕಾಂಗ್ರೆಸ್ ಸರ್ಕಾರ ಮತ್ತು ಮುಖ್ಯಮಂತ್ರಿಗಳು ಇದಕ್ಕೆ ಕಾರಣವಲ್ಲವೇ ಎಂದು ಪ್ರಶ್ನಿಸಿದರು. ನಿಮ್ಮ ಓಲೈಕೆ ರಾಜ್ಯದ ಜನರನ್ನು ನೆಮ್ಮದಿಯಿಂದ ಇರಲು ಬಿಡುತ್ತಿಲ್ಲ ಎಂದು ಆಕ್ಷೇಪಿಸಿದರು.

ಬಸ್ ಪ್ರಯಾಣದರ, ಮೆಟ್ರೋ ಪ್ರಯಾಣದರ ಹೆಚ್ಚಳವನ್ನೂ ಅವರು ಖಂಡಿಸಿದರು. ರಾಜ್ಯ ಸರ್ಕಾರ ಬರಿ ಸುಳ್ಳು ಹೇಳುತ್ತಿದೆ. ಜನರ ಪೂರ್ತಿ ತಲೆ ಬೋಳಿಸಿದ್ದೀರಿ. ಇನ್ನೇನು ಬೋಳಿಸಲು ಹೊರಟಿದ್ದೀರಿ ಎಂದು ಕಿಡಿಕಾರಿದರು.

 

ರಾಜ್ಯದಲ್ಲಿ ಒಂದು ಕಾಸಿನ ಅಭಿವೃದ್ಧಿ ಇಲ್ಲ, ಅಭಿವೃದ್ಧಿಗೆ ಹಣವೂ ಇಲ್ಲ. ಗ್ಯಾರಂಟಿಗಳ ಹೆಸರಿನಲ್ಲಿ ಇಡೀ ರಾಜ್ಯದ ಲೂಟಿ ಮಾಡುತ್ತಿರುವಂತಿದೆ. ಎಲ್ಲದರ ಬೆಲೆ ಏರಿಸುತ್ತಿದ್ದಾರೆ. ಇಷ್ಟಾದರೂ ಅವರ ದರಿದ್ರ ತಪ್ಪಿಲ್ಲ. ಇದೊಂದು ದರಿದ್ರ ಸರ್ಕಾರ ಎಂದು ಜನರೇ ಹೇಳುತ್ತಿದ್ದಾರೆ ಎಂದು ದೂರಿದರು. ಇದನ್ನೂ ಓದಿ: ಟ್ರಂಪ್ ತೆರಿಗೆ ದರ ಇಫೆಕ್ಟ್ – 1 ಸಾವಿರ ಅಂಕ ಇಳಿಕೆ ಕಂಡ ಸೆನ್ಸೆಕ್ಸ್

ಮಂತ್ರಿಗಳು, ಶಾಸಕರು ಸೇರಿ ಪುಂಡಾಟಿಕೆಯಲ್ಲಿ ತೊಡಗಿದ್ದಾರೆ. ಅಭಿವೃದ್ಧಿ ಆಗದುದನ್ನು ಮರೆಮಾಚಲು, ಗುಂಪುಗಾರಿಕೆ, ಅಧಿಕಾರ ದಾಹ, ಒಳಜಗಳ ಮರೆಮಾಚುವ ಉದ್ದೇಶದಿಂದ ಚರಿತ್ರೆ ತಿದ್ದುವ ಕೆಲಸ ನಡೆದಿದೆ. ರಾಮಾಯಣ, ವಾಲ್ಮೀಕಿ, ಕುಂಭಮೇಳ ಕುರಿತು ಮಾತನಾಡುತ್ತಿದ್ದು, ನಾಲಿಗೆ ಹೊಲಸು ಮಾಡಿಕೊಳ್ಳುತ್ತಿದ್ದಾರೆ ಎಂದು ಟೀಕಿಸಿದರು. ಒಂದು ದಿನ ಮಾತ್ರೆ, ಇಂಜೆಕ್ಷನ್ ಕೊಡದ ಮಹದೇವಪ್ಪ ಅವರೇನೋ ಡಾಕ್ಟರೇ ಆಗಿದ್ದಾರೆ. ಇತರರೂ ಪಿಎಚ್‍ಡಿ ಮಾಡುತ್ತಿದ್ದಾರೆ ಎಂದು ಛಲವಾದಿ ವ್ಯಂಗ್ಯವಾಡಿದರು.

ಡಾಕ್ಟರ್ ಪ್ರಿಯಾಂಕ್ ಖರ್ಗೆ ಪಿಎಚ್‍ಡಿ ಮಾಡಿದ್ದಾರಾ? ಅವರ ಶಿಕ್ಷಣ ಎಲ್ಲರಿಗೂ ಗೊತ್ತಾಗಿದೆ. ವಾಲ್ಮೀಕಿ ರಾಮಾಯಣದ ಬಗ್ಗೆಯೂ ಹೇಳಿದ್ದಾರೆ. ಆ ರಾಮಾಯಣ ಬೇರೆಯಂತೆ; ಈ ರಾಮಾಯಣ ಬೇರೆ ಅಂತೆ. ಹನುಮಾನ್ ಚಾಲೀಸ ಗೊತ್ತಾ ಎಂದು ಬೇಜವಾಬ್ದಾರಿ ಹೇಳಿಕೆ ಕೊಟ್ಟಿದ್ದಾರೆ. ಅವರ ಕಚೇರಿ ಮುಂದೆ ಜನರು ವಿಷ ತೆಗೆದುಕೊಳ್ಳಲು ಹೋಗಿದ್ದರು. 400 ಕೋಟಿ ಬಾಕಿ ಸಂಬಂಧ ವೆಂಡರ್ಸ್ ಅಸೋಸಿಯೇಶನ್‍ನವರು ಪ್ರತಿಭಟನೆ ಮಾಡಲು ಮುಂದಾಗಿದ್ದರು. ದುಡ್ಡು ಕೊಡುವುದು ಬಿಟ್ಟು ಇವರು ರಾಮಾಯಣ ಕಲಿಸಲು ಹೋಗುತ್ತಿದ್ದಾರೆ ಎಂದು ಆರೋಪಿಸಿದರು.

ವಾಲ್ಮೀಕಿ ನಿಗಮ ಬರಿದು ಮಾಡಿದ್ದಾರೆ. ನಾಲಿಗೆ ಬರುವಷ್ಟು ಆಚೆಗೆ ಹಾಕಿ ನೆಕ್ಕಿದ್ದಾರೆ. ಮಹರ್ಷಿ ವಾಲ್ಮೀಕಿಯವರ ಹೆಸರು ಹೇಳಲು ನಿಮಗೆ ಯೋಗ್ಯತೆ ಇದೆಯೇ? ಹಣ ದೋಚಿದ ನಿಮಗೆ ನಾಚಿಕೆ ಆಗುವುದಿಲ್ಲವೇ ಎಂದು ಕೇಳಿದರು.

ಕುಂಭಮೇಳದಲ್ಲಿ ಸ್ನಾನ ಮಾಡಿದರೆ ಬಡತನ ಹೋಗುತ್ತದೆಯೇ ಎಂದು ಕೇಳಿದ್ದನ್ನೂ ಅವರು ಆಕ್ಷೇಪಿಸಿದರು. ಹಿಂದುತ್ವದಲ್ಲಿ ನಂಬಿಕೆ ಇಲ್ಲದ ನೀವು ಯಾಕೆ ರಾಮಾಯಣ, ಮಹಾಭಾರತದ ಬಗ್ಗೆ ಮಾತನಾಡುತ್ತೀರಿ ಎಂದು ಛಲವಾದಿ ಪ್ರಶ್ನೆಯನ್ನು ಮುಂದಿಟ್ಟರು.

 

TAGGED:bengaluruchalavadi narayanaswamykarnatakamysurupoliceಕರ್ನಾಟಕಛಲವಾದಿ ನಾರಾಯಣಸ್ವಾಮಿಮೈಸೂರು
Share This Article
Facebook Whatsapp Whatsapp Telegram

Cinema news

Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema
shreyas manju
ಶ್ರೇಯಸ್ ಮಂಜುಗೆ ʻದಿಲ್‌ದಾರ್ʼ ಬರ್ತ್‌ಡೇ ಟೀಸರ್ ಗಿಫ್ಟ್‌!
Cinema Latest Sandalwood

You Might Also Like

Israel Strikes Iran
Latest

ಕದನ ವಿರಾಮಕ್ಕೆ ಒಪ್ಪದ ಇರಾನ್‌ ಮೇಲೆ ಮಿಸೈಲ್‌ ಮಳೆಗರೆದ ಇಸ್ರೇಲ್‌ – ಹಲವೆಡೆ ಸ್ಫೋಟ

Public TV
By Public TV
3 minutes ago
Aviation Indian Airlines
Latest

ಇರಾನ್, ಇಸ್ರೇಲ್-ಅಮೆರಿಕ ವಾರ್ ಎಫೆಕ್ಟ್ – ಭಾರತದ ವಿಮಾನಯಾನ ಉದ್ಯಮಕ್ಕೆ 2,500 ಕೋಟಿ ನಷ್ಟ

Public TV
By Public TV
8 minutes ago
daily horoscope dina bhavishya
Astrology

ದಿನ ಭವಿಷ್ಯ: 07-04-2026

Public TV
By Public TV
41 minutes ago
PBKS
Cricket

ಮಳೆಯಿಂದ ಕೋಲ್ಕತ್ತಾ vs ಪಂಜಾಬ್‌ ಪಂದ್ಯ ರದ್ದು – ಆರ್‌ಸಿಬಿ ಹಿಂದಿಕ್ಕಿ ನಂ.1 ಸ್ಥಾನಕ್ಕೆ ಜಿಗಿದ ಶ್ರೇಯಸ್‌ ಪಡೆ

Public TV
By Public TV
8 hours ago
Donald Trump 1
Latest

ಒಂದೇ ರಾತ್ರಿಯಲ್ಲಿ ಇಡೀ ಇರಾನ್‌ನ ಸರ್ವನಾಶ ಮಾಡಬಹುದು, ಅದು ಮಂಗಳವಾರ ಇರಬಹುದು: ಟ್ರಂಪ್‌ ಮತ್ತೆ ಎಚ್ಚರಿಕೆ

Public TV
By Public TV
8 hours ago
udupi rescue
Latest

ಬಾವಿಗೆ ಬಿದ್ದ ವೃದ್ಧ ಮೂರು ದಿನ ಸಾವು-ಬದುಕಿನ ಮಧ್ಯೆ ಹೋರಾಟ; ಪ್ರಾಣ ಉಳಿಸಿದ ಗ್ಯಾಸ್ ಸಿಲಿಂಡರ್ ಒಟಿಪಿ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?