ಉದಯಗಿರಿ ದಾಂಧಲೆ ಕೇಸ್- ಪ್ರಚೋದನಕಾರಿ ಭಾಷಣ ಮಾಡಿದ್ದ ಮೌಲ್ವಿಗೆ ನ್ಯಾಯಾಂಗ ಬಂಧನ

Public TV
1 Min Read
mysuru udayagiri

ಮೈಸೂರು: ಉದಯಗಿರಿ ಪೊಲೀಸ್ ಠಾಣೆ (Udayagiri Police Station) ದಾಂಧಲೆ ಪ್ರಕರಣ ಸಂಬಂಧ ಪ್ರಚೋದನಕಾರಿ ಭಾಷಣ ಮಾಡಿದ್ದ ಮೌಲ್ವಿ ಮುಫ್ತಿ (Moulvi) ಮುಸ್ತಾಕ್ ಮಕ್ಬೋಲಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ (Court) ಆದೇಶ ನೀಡಿದೆ.

2ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಆದೇಶ ಹೊರಡಿಸಿದ್ದು, ಆರೋಪಿಯನ್ನು ಸಿಸಿಬಿ ಪೊಲೀಸರು ಮೈಸೂರು ಜೈಲಿನತ್ತ ಕರೆದೊಯ್ದಿದ್ದಾರೆ. ಇದನ್ನೂ ಓದಿ: ಪುತಿನ, ಕೆಎಸ್‌ನ ಟ್ರಸ್ಟ್‌ಗಳ ಚಟುವಟಿಕೆಗಳಿಗೆ ಸರ್ಕಾರದ ನೆರವು: ಸಚಿವ ಚಲುವರಾಯಸ್ವಾಮಿ

ಫೆ. 10ರಂದು ಉದಯಗಿರಿ ಪೊಲೀಸ್ ಠಾಣೆ ಮೇಲೆ ಮುಸ್ಲಿಂ ಯುವಕರ ಗುಂಪು ಕಲ್ಲು ತೂರಾಟ ನಡೆಸಿತ್ತು. ಇದಕ್ಕೂ ಮುನ್ನ ಆರೋಪಿ ಮೌಲ್ವಿ ಮುಫ್ತಿ ಮಕ್ಬೋಲಿ ಪ್ರಚೋದನಕಾರಿ ಭಾಷಣ ಮಾಡಿದ್ದ ವೀಡಿಯೋ ವೈರಲ್ ಆಗಿತ್ತು. ಇದನ್ನೂ ಓದಿ: ಸ್ಟಾರ್ಕ್‌ ದಾಖಲೆ ಉಡೀಸ್‌ – ಕಡಿಮೆ ಎಸೆತಗಳಲ್ಲಿ 200 ವಿಕೆಟ್‌ ಪಡೆದು ಶಮಿ ರೆಕಾರ್ಡ್‌

ಪ್ರಕರಣ ನಡೆದ 11 ದಿನಗಳ ಬಳಿಕ ಆರೋಪಿ ಮೌಲ್ವಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಇದನ್ನೂ ಓದಿ: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬ್ಲ್ಯಾಕ್ ಪೇಪರ್ ಬಿಡುಗಡೆ: ಬೊಮ್ಮಾಯಿ

Share This Article