Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ದರ್ಶನ್ ಅಭಿಮಾನಿಯಂತೆ ಉದ್ಘರ್ಷ ಹೀರೋ ಅನೂಪ್!

Public TV
Last updated: September 24, 2018 10:55 am
Public TV
Share
2 Min Read
Takur Anoop Sing Darshan
SHARE

ಬೆಂಗಳೂರು: ವಿಭಿನ್ನ ಪೋಸ್ಟರ್ ಮೂಲಕವೇ ಚಂದನವನದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಉದ್ಘರ್ಷ ಸಿನಿಮಾ ಹೊಸ ಆಲೋಚನೆಗಳನ್ನು ಪ್ರೇಕ್ಷಕರಲ್ಲಿ ಹುಟ್ಟು ಹಾಕಿತ್ತು. ಈ ಕುತೂಹಲಗಳನ್ನು ಮತ್ತಷ್ಟು ಹೆಚ್ಚು ಮಾಡಿ ಮೊದಲ ಬಾರಿಗೆ ಚಿತ್ರದ ತಂಡ ಮಾಧ್ಯಮಗಳ ಮುಂದೇ ಬಂದಿತ್ತು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಿರ್ದೇಶಕ ಸುನಿಲ್ ದೇಸಾಯಿ ಅವರು, ಚಿತ್ರದ ಬಗ್ಗೆ ಈ ಸಂದರ್ಭದಲ್ಲಿ ಕಡಿಮೆ ಮಾತನಾಡುತ್ತೇನೆ. ಏಕೆಂದರೆ ಚಿತ್ರದ ನಾಯಕ ನಟ ಠಾಕೂರ್ ಅನೂಪ್ ಸಿಂಗ್ ಪರಿಚಯ ಮಾಡಬೇಕಿದೆ. ಅಲ್ಲದೇ ಚಿತ್ರಕ್ಕಾಗಿ ನಾನು ಅನೂಪ್ ಸಿಂಗ್ ಆಯ್ಕೆ ಮಾಡಿದ ಕುರಿತು ಹೇಳಬೇಕಿದೆ ಎಂದು ಮಾತು ಆರಂಭಿಸಿದರು.

37658231 662081764168680 4485706630406602752 n

ಚಿತ್ರ ಕಥೆ ಸಿದ್ಧಗೊಂಡ ಬಳಿಕ ನಾಯಕನ ಹುಡುಕಾಟದಲ್ಲಿದ್ದೆ. ಆಕಸ್ಮಿಕವಾಗಿ ಠಾಕೂರ್ ಅನೂಪ್ ಸಿಂಗ್ ನಾನು ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡೆವು. ಒಂದೇ ನೋಟದಲ್ಲಿ ನನ್ನ ಕಥೆಯ ನಾಯಕ ಅವರಲ್ಲಿ ಕಾಣಿಸಿದರು. ನನ್ನ ಸಿನಿಮಾಗೆ ನೀವು ನಾಯಕನಟರಾಗ ಬೇಕು ಎಂದು ಹೇಳುತ್ತಿದಂತೆ ಅನೂಪ್ ಅಚ್ಚರಿಗೊಳಗಾದರು. ಆದರೆ ಚಿತ್ರದ ಕಥೆ ಕೇಳಿದ ಮರುಕ್ಷಣದಲ್ಲಿ ಒಪ್ಪಿಕೊಂಡರು ಎಂದು ಚಿತ್ರ ನಾಯಕ ನಟನ ಹುಡುಕಾಟದ ಹಿಂದಿನ ಕುತೂಹಲ ಕಥೆ ಬಿಚ್ಚಿಟ್ಟರು.

41192033 2683746641849883 5126332012268879872 n

ಚಿತ್ರದ ಕಥೆಗೆ ಅಭಿನಯ ಮಾತ್ರವಲ್ಲದೇ ವಿಲನ್ ಲುಕ್ ಕೂಡ ಬೇಕಾಗಿದ್ದರಿಂದ ಅವರನ್ನೇ ಆಯ್ಕೆ ಮಾಡಲಾಯಿತು. ಚಿತ್ರದ ಕುರಿತು ಬಹಳ ಆತ್ಮವಿಶ್ವಾಸ ಇದ್ದು, ಸಿನಿ ರಸಿಕರು ನಮಗೇ ಬೆಂಬಲ ನೀಡುತ್ತಾರೆ. ಅನುಪ್ ಕೂಡ ನಾನು ಬಯಸಿದ್ದ ಅಂಶಗಳಿಗಿಂತ ಹೆಚ್ಚಿನದನ್ನು ಚಿತ್ರಕ್ಕೆ ನೀಡಿದ್ದಾರೆ. ಅವರ ಈ ಕೆಲಸ ಶೈಲಿ ಹಾಗೂ ಅವರಿಗೆ ಕೆಲಸ ಮಾಡಲು ಇರುವ ಹಠ ಎಲ್ಲರಿಗೂ ಇಷ್ಟವಾಗುತ್ತದೆ. ಚಿತ್ರೀಕರಣ ವೇಳೆ ಅವರು ಹಲವು ಬಾರಿ ಡ್ಯೂಪ್ ಇಲ್ಲದೇ ಸಾಹಸ ದೃಶ್ಯಗಳನ್ನು ನಡೆಸಿದ್ದಾರೆ. ಸಿನಿಮಾ ನೋಡಿದಾಗ ಅವರ ಶ್ರಮ ನಿಜವಾಗಿ ಅರಿವಾಗುತ್ತದೆ ಎಂದರು.

28871032 2517522421805640 3852596333210763264 n

ಇದೇ ವೇಳೆ ದರ್ಶನ್ ಬಗ್ಗೆ ಹಾಡಿ ಹೊಗಳಿದ ನಾಯಕ ಠಾಕೂರ್ ಅನೂಪ್ ಸಿಂಗ್, ನಾನು ದರ್ಶನ್ ಅವರ ದೊಡ್ಡ ಅಭಿಮಾನಿ. ಅವರ ಜೊತೆ ಯಜಮಾನ ಚಿತ್ರದಲ್ಲಿ ಅಭಿನಯಿಸಿದ್ದು ತುಂಬಾ ಖುಷಿ ತಂದಿದೆ. ಅವರು ಚಿತ್ರೀಕರಣಕ್ಕೆ ರಾಜನ ಹಾಗೆಯೇ ಬರುತ್ತಾರೆ, ರಾಜನ ಹಾಗೆಯೇ ಹೋಗುತ್ತಾರೆ. ಬಾಲಿವುಡ್‍ನ ಸಲ್ಮಾನ್ ಖಾನ್ ರೀತಿ, ಬಾದ್ ಷಾ ಅವರು. ನನ್ನ ಚಿತ್ರವನ್ನು ನೋಡಿ ಎಂದಿದ್ದಕ್ಕೆ, ತಮ್ಮ ಮೊಬೈಲ್ ನಂಬರ್ ಕೊಟ್ಟು ನಿನಗಾಗಿ ಬರುತ್ತೇನೆ ಎಂದು ಹೇಳಿದರು. ಅವರ ಸರಳ ವ್ಯಕ್ತಿತ್ವ ಕಂಡು ನನಗೆ ಹೆಮ್ಮೆಯಾಯಿತು ಎಂದು ಹೇಳಿದರು.

34673626 2580916325466249 66103794408095744 n

ಉದ್ಘರ್ಷ ಚಿತ್ರ ಕನ್ನಡ ಮಾತ್ರವಲ್ಲದೇ ತೆಲುಗು, ತಮಿಳು ಹಾಗು ಮಲಯಾಳಂನಲ್ಲಿ ಏಕಕಾಲದಲ್ಲಿ ಬಿಡುಗಡೆ ಮಾಡಲು ನಿರ್ದೇಶಕರು ಚಿಂತನೆ ನಡೆಸಿದ್ದಾರೆ. ಅದ್ದರಿಂದಲೇ ನಾಲ್ಕು ಭಾಷೆಗಳಲ್ಲಿ ನಟಿಸಿರುವ ಕಲಾವಿದರನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಅನೂಪ್ ಈಗಾಗಲೇ ದಕ್ಷಿಣ ಭಾರತದ ಚಿತ್ರರಂಗಕ್ಕೆ ಪರಿಚಿತರಾಗಿದ್ದು, ಕನ್ನಡ, ತಮಿಳು, ತೆಲುಗು ಸೇರಿದಂತೆ ಹಲವು ಸಿನಿಮಾಗಳಲ್ಲಿ ನಡೆಸಿದ್ದಾರೆ. ಕಬಾಲಿ ಚಿತ್ರದಲ್ಲಿ ರಜಿನಿಕಾಂತ್ ಪಕ್ಕ ಮಿಂಚಿದ್ದ ಧನ್ಸಿಕಾ, ತಾನ್ಯಾ ಹೋಪ್, ಕಬೀರ್ ಸಿಂಗ್ ದುಹಾನ್ ಹಾಗೂ ಬಾಹುಬಲಿ ಚಿತ್ರದಲ್ಲಿ ಕಾಲಕೇಯ ಪಾತ್ರದಲ್ಲಿ ನಟಿಸಿದ್ದ ಪ್ರಭಾಕರ್, ಶ್ರದ್ಧಾ ದಾಸ್ ಮುಂತಾದ ನಟರ ಬಹುದೊಡ್ಡ ಪಟ್ಟಿಯೇ ಈ ಚಿತ್ರದಲ್ಲಿ ಇದೆ.

37713932 2633731796851368 4245939312308256768 n

ಉಳಿದಂತೆ ಉದ್ಘರ್ಷ ಚಿತ್ರದಲ್ಲಿ ಚಿತ್ರದಲ್ಲಿ ಹರ್ಷಿಕಾ ಪೂಣಚ್ಚ ಅವರು ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ದೇವರಾಜ್ ನಿರ್ಮಾಣ ಮಾಡುತ್ತಿದ್ದಾರೆ. ಮಂಜುನಾಥ್, ತಿರುಮಲೈ, ರಾಜೇಂದ್ರ ಕುಮಾರ್ ಸಹ ನಿರ್ಮಾಪಕರಾಗಿ ಕೈ ಜೋಡಿಸಿದ್ದಾರೆ. ಚಿತ್ರಕ್ಕೆ ಸಂಜೋಯ್ ಚೌಧರಿ ಸಂಗೀತ, ವಿಷ್ಣು ವರ್ಧನ್ ಛಾಯಾಗ್ರಹಣ, ಕೆಂಪರಾಜು ಸಂಕಲನ ಹಾಗೂ ಖ್ಯಾತ ಸಾಹಸ ನಿರ್ದೇಶಕ ರವಿವರ್ಮ ಸಾಹಸ ಮಾಡಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

TAGGED:Anoop SingDhansikaHarshik PoonachchaPublic TVSunil Kumar DesaiTanya HopeUdgharshaಅನೂಪ್ ಸಿಂಗ್ಉದ್ಘರ್ಷತಾನ್ಯಾ ಹೋಪ್ಧನ್ಸಿಕಾಪಬ್ಲಿಕ್ ಟಿವಿಸುನಿಲ್ ಕುಮಾರ್ ದೇಸಾಯಿಹರ್ಷಿಕಾ ಪೂಣಚ್ಚ
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

mammootty
ಅನಾರೋಗ್ಯದಿಂದ ಚೇತರಿಸಿಕೊಂಡ ಮಮ್ಮುಟ್ಟಿ; ಚೇತರಿಕೆ ಬೆನ್ನಲ್ಲೇ ಗುಡ್‌ನ್ಯೂಸ್
Cinema Latest South cinema Top Stories
Prabhas Anuksha
ಫ್ಯಾನ್ಸ್‌ಗೆ ಗುಡ್‌ನ್ಯೂಸ್ ಕೊಟ್ಟ ಪ್ರಭಾಸ್-ಅನುಷ್ಕಾ
Cinema Latest South cinema Top Stories
Chahal Dhanashree
ಚಹಲ್‌ಗೆ ಟಕ್ಕರ್ ಕೊಟ್ಟ ಮಾಜಿ ಪತ್ನಿ ಧನಶ್ರೀ
Cinema Cricket Latest Top Stories
amitabh bacchan house
ಮುಂಬೈನಲ್ಲಿ ನಿಲ್ಲದ ವರುಣಾರ್ಭಟ – ಬಾಲಿವುಡ್ ನಟ, ನಟಿಯರ ಮನೆಗಳು ಜಲಾವೃತ
Cinema Latest National Top Stories
Rukmini Vasanth Pot Making
ಕೈಯ್ಯಾರೆ ಮಣ್ಣಿನ ಮಡಿಕೆ ಮಾಡಿದ ಕಾಂತಾರ ಕನಕವತಿ ರುಕ್ಮಿಣಿ ವಸಂತ್
Cinema Latest Sandalwood Top Stories

You Might Also Like

Rekha Gupta 2
Latest

ಸಾರ್ವಜನಿಕ ಹಿತದೃಷ್ಟಿಗೆ ಸೇವೆ ಸಲ್ಲಿಸುವ ನಮ್ಮ ಸಂಕಲ್ಪದ ಮೇಲೆ ಹೇಡಿತನದ ಕೃತ್ಯ: ಹಲ್ಲೆ ಬಗ್ಗೆ ದೆಹಲಿ ಸಿಎಂ ರಿಯಾಕ್ಷನ್‌

Public TV
By Public TV
3 hours ago
Vijayapura
Districts

ಮಳೆಯಿಂದ ನಷ್ಟ ಅನುಭವಿಸಿದ 2 ಕುಟುಂಬಗಳಿಗೆ ಆರ್ಥಿಕ ನೆರವು ನೀಡಿದ ಎಂ.ಬಿ ಪಾಟೀಲ್

Public TV
By Public TV
3 hours ago
c.n.manjunath nirmala sitharaman
Latest

ಇಮ್ಯೂನೋಥೆರಪಿಗೆ ಬಳಸುವ ಔಷಧ & ರೇಡಿಯೋಥೆರಪಿ ಉಪಕರಣಗಳ ಮೇಲಿನ ಕಸ್ಟಮ್ಸ್‌ ಸುಂಕಕ್ಕೆ ವಿನಾಯಿತಿಗೆ ಮನವಿ

Public TV
By Public TV
3 hours ago
Amit shah
Latest

ಉತ್ತರ ಪ್ರದೇಶದ ಜಲಾಲಾಬಾದ್ ಪಟ್ಟಣಕ್ಕೆ ಪರಶುರಾಮಪುರಿ ಎಂದು ಮರುನಾಮಕರಣ

Public TV
By Public TV
4 hours ago
big bulletin 20 August 2025 part 1
Big Bulletin

ಬಿಗ್‌ ಬುಲೆಟಿನ್‌ 20 August 2025 ಭಾಗ-1

Public TV
By Public TV
4 hours ago
big bulletin 20 August 2025 part 2
Big Bulletin

ಬಿಗ್‌ ಬುಲೆಟಿನ್‌ 20 August 2025 ಭಾಗ-2

Public TV
By Public TV
4 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?