Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Search
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ತೋಟದಲ್ಲಿ ದೊಡ್ಡ ಬಲೂನ್, ರಿಸೀವರ್ ಪತ್ತೆ- ಆತಂಕಕ್ಕೀಡಾದ ಉಡುಪಿ ಜನ

Public TV
Last updated: November 17, 2019 11:32 am
Public TV
Share
2 Min Read
UDP BALUNE FIVER
SHARE

ಉಡುಪಿ: ದೊಡ್ಡದೊಂದು ಬಲೂನ್, ಅದರ ಪಕ್ಕದಲ್ಲೇ ಒಂದು ರಿಸೀವರ್. ಅದರೊಳಗೊಂದು ಚಿಪ್ ತೋಟವೊಂದರಲ್ಲಿ ಕಾಣಿಸಿಕೊಂಡು ಗ್ರಾಮಸ್ಥರಲ್ಲಿ ಆತಂಕ ಉಂಟುಮಾಡಿದ ಘಟನೆ ಉಡುಪಿಯಲ್ಲಿ ನಡೆದಿದೆ.

ಕಾರ್ಕಳ ತಾಲೂಕಿನ ಬೋಳ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಬೋಳ ಗ್ರಾಮದ ಕಿಶೋರ್ ಮೂಲ್ಯ ಎಂಬವರ ಮನೆಯ ತೋಟದಲ್ಲಿ ಈ ಗಾಳಿ ಯಂತ್ರ ಪತ್ತೆಯಾಗಿದೆ. ಕಿಶೋರ್ ಅವರ ಮನೆಯ ತೋಟದಲ್ಲಿ ದೊಡ್ಡ ಬಿಳಿ ಬಣ್ಣದ ಬಲೂನ್ ನೇತಾಡುತ್ತಿತ್ತು. ರಿಸೀವರ್ ಹೋಲುವ ಉಪಕರಣ ನೆಲಕ್ಕೆ ಬಿದ್ದಿತ್ತು.

UDP BALUNE FIVER 1

ಬೆಳ್ಳಂಬೆಳಗ್ಗೆ ಇದನ್ನೆಲ್ಲಾ ಕಂಡ ಮನೆ ಮಂದಿ ಶಾಕ್ ಆಗಿದ್ದಾರೆ. ಇದೆಲ್ಲ ಏನು ಅಂತ ಗೊತ್ತಾಗದೆ ಭಯಭೀತರಾಗಿದ್ದಾರೆ. ಕೂಡಲೇ ಪೋಲೀಸ್ ಠಾಣೆ ಮತ್ತು ಕಂದಾಯ ಅಧಿಕಾರಿಗಳಿಗೆ ಮಾಹಿತಿ ತಿಳಿಸಿದ್ದಾರೆ. ಎರಡೂ ಇಲಾಖಾ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಇದರ ನಿಜ ವಿಷಯ ಅನಾವರಣವಾಗಿದೆ.

ಬೋಳ ಗ್ರಾಮದ ಮನೆಯ ತೋಟದಲ್ಲಿ ಬಂದು ಬಿದ್ದಿದ್ದು ಆರ್ ಎಸ್ ಜಿ-20 ಎ ಯ ಜಿಪಿಎಸ್ ರೇಡಿಯೋ ಅನ್ವೇಷಕ ಎಂಬ ಸಾಧನ. ಗಾಳಿಯ ಗುಣಮಟ್ಟ ಅಳೆಯಲು ಹವಾಮಾನ ಇಲಾಖೆ ಬಳಕೆ ಮಾಡುತ್ತದೆ. ದೊಡ್ಡದಾದ ಗಾಳಿ ಬಲೂನಿಗೆ ಅನ್ವೇಷಕ ಉಪಕರಣವನ್ನು ಕಟ್ಟಿ ಗಾಳಿಯಲ್ಲಿ ತೇಲಿ ಬಿಡಲಾಗುತ್ತದೆ. ಇದು ನೆಲದಿಂದ ಮೇಲಕ್ಕೆ ಹಾರಾಡುತ್ತಾ ವಿವಿಧ ಸ್ಥರಗಳ ಹವಾಮಾನ, ಗಾಳಿಯ ವೇಗ, ಉಷ್ಣಾಂಶ, ಆದ್ರತೆ, ಗಾಳಿಯ ಒತ್ತಡವನ್ನು ಲೆಕ್ಕಾಚಾರ ಹಾಕಿ ತನ್ನ ಕೇಂದ್ರಕ್ಕೆ ಕಳುಹಿಸಿಕೊಡುತ್ತದೆ. ಕರ್ನಾಟಕದ ಎರಡು ಕಡೆ ಈ ಉಪಕರಣವನ್ನು ಹಾರಿ ಬಿಡಲಾಗುತ್ತದೆ.

ಮಂಗಳೂರು ಮತ್ತು ಬೆಂಗಳೂರಿನಲ್ಲಿ ಮಾತ್ರ ಈ ಉಪಕರಣ ಗಾಳಿಯಲ್ಲಿ ತೇಲಲು ಬಿಟ್ಟು ಹವಾಮಾನದ ಮಾಹಿತಿ ಸಂಗ್ರಹಿಸಲಾಗುತ್ತದೆ. ಈ ಎರಡು ಕೇಂದ್ರದಲ್ಲಿ ಹವಾಮಾನ ಇಲಾಖೆಗೆ ಸೇರಿದ ಕೇಂದ್ರವಿದೆ. ದೇಶವ್ಯಾಪಿಯಾಗಿ ಒಟ್ಟು 36 ಹವಾಮಾನ ಕೇಂದ್ರಗಳಿದ್ದು, ಏಕಕಾಲದಲ್ಲಿ ಬೆಳಗ್ಗೆ 4.30ಕ್ಕೆ ಈ ಉಪಕರಣವನ್ನು ಹಾರಿ ಬಿಡಲಾಗುತ್ತದೆ. ಈ ಮೂಲಕ ಮಾಹಿತಿ ಪಡೆದುಕೊಳ್ಳಲಾಗುತ್ತದೆ.

collage udp

ಸಾಮಾನ್ಯವಾಗಿ ಈ ಉಪಕರಣಗಳು ಸಮುದ್ರ ಅಥವಾ ಜನವಸತಿ ರಹಿತ ಸ್ಥಳಗಳಲ್ಲಿ ಪತನಗೊಳ್ಳುತ್ತದೆ. ಹೀಗೆ ಜನವಸತಿ ಪ್ರದೇಶಗಳಲ್ಲಿ ಅಪರೂಪಕ್ಕೊಮ್ಮೊಮ್ಮೆ ಬೀಳುತ್ತದೆ. ಈ ಹಿಂದೆ ಮಂಗಳೂರಿನ ನಂತೂರು, ಎಡ್ತೂರಿನಲ್ಲೂ ಇದೇ ರೀತಿ ಜನವಸತಿ ಸ್ಥಳದಲ್ಲಿ ಪತನವಾಗಿ ಆತಂಕ ಸೃಷ್ಟಿಯಾಗಿತ್ತು. ಸ್ಥಳಕ್ಕೆ ಕಾರ್ಕಳ ಗ್ರಾಮಾಂತರ ಪೊಲೀಸರು, ಗ್ರಾಮ ಕಂದಾಯ ನಿರೀಕ್ಷಕರು ಭೇಟಿ ನೀಡಿದರು. ನಂತರ ಕಂದಾಯ ಇಲಾಖೆಗೆ ಇದನ್ನು ಹಸ್ತಾಂತರಿಸುವ ಮೂಲಕ ಜನ ನೆಮ್ಮದಿಯ ನಿಟ್ಟುಸಿರು ಬಿಟ್ಟರು.

TAGGED:BalloonGardenpeoplePublic TVRadio Finderudupiಉಡುಪಿಜನರುತೋಟಪಬ್ಲಿಕ್ ಟಿವಿಬಲೂನ್ರೇಡಿಯೋ ಅನ್ವೇಷಕ
Share This Article
Facebook Whatsapp Whatsapp Telegram

You Might Also Like

WTC SA 3
Cricket

ಚೋಕರ್ಸ್‌ ಹಣೆಪಟ್ಟಿ ಕಳಚಿದ ಹರಿಣರು – ದ. ಆಫ್ರಿಕಾಗೆ ವಿಶ್ವ ಟೆಸ್ಟ್‌ ಚಾಂಪಿಯನ್‌ ಕಿರೀಟ, ದಶಕಗಳ ಕನಸು ನನಸು

Public TV
By Public TV
10 minutes ago
M.P Renukacharya
Davanagere

ಜಾತಿಗಣತಿ ವರದಿ ಬಿಡುಗಡೆ ಮಾಡ್ತೀನಿ ಎಂದಿದ್ದ ಸಿಎಂ ಪೌರುಷ ಏನಾಯ್ತು? – ರೇಣುಕಾಚಾರ್ಯ

Public TV
By Public TV
16 minutes ago
Forever Naveen Kumar Kannada Cinema Sandalwood
Cinema

ಸೆಲೆಬ್ರಿಟಿ ವಸ್ತ್ರವಿನ್ಯಾಸಕ ನವೀನ್ ಕುಮಾರ್‌ಗೆ ಅಮೆರಿಕ ಗೌರವ

Public TV
By Public TV
35 minutes ago
Mangaluru Rain
Dakshina Kannada

ಮಂಗಳೂರಿನಲ್ಲಿ ಭಾರೀ ಮಳೆ – ಪಂಪ್‌ವೆಲ್ ಸರ್ಕಲ್ ಮತ್ತೆ ಮುಳುಗಡೆ

Public TV
By Public TV
48 minutes ago
ED 1
Bengaluru City

Exclusive | ವಾಲ್ಮೀಕಿ ಹಗರಣ: ಬಳ್ಳಾರಿ ಚುನಾವಣೆಗೆ 27 ಕೋಟಿ ಬಳಕೆಯಾಗಿದ್ದು ಹೇಗೆ? – 87 ಕೋಟಿ ಎಲ್ಲೆಲ್ಲಿ ಹಂಚಿಕೆಯಾಯ್ತು?

Public TV
By Public TV
53 minutes ago
Siddaramaiah 4
Districts

ನಮ್ಮ ನಿರೀಕ್ಷೆಗಳಿಗೆ ವಿರುದ್ಧವಾಗಿ ಕೆಲವು ಘಟನೆಗಳು ನಡೆಯುತ್ತವೆ – ಕಾಲ್ತುಳಿತ ಪ್ರಕರಣಕ್ಕೆ ಸಿಎಂ ಬೇಸರ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?