ಡಿಕೆಶಿ ಬಿಡುಗಡೆಗೆ ಕೊಲ್ಲೂರಿನಲ್ಲಿ ಚಂಡಿಕಾ ಹೋಮ – ಹೆಬ್ಬಾಳ್ಕರ್ ಹರಕೆ

Public TV
1 Min Read
UDP DKSHI CHANDIKA HOMA AV 3

ಉಡುಪಿ: ಇಡಿಯಿಂದ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಶೀಘ್ರ ಬಿಡುಗಡೆ ಆಗುವಂತೆ ಕೊಲ್ಲೂರಿನಲ್ಲಿ ಚಂಡಿಕಾ ಹೋಮ ನಡೆಸಲಾಯ್ತು.

ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಪ್ರಸಿದ್ಧ ಕೊಲ್ಲೂರು ಮೂಕಾಂಬಿಕಾ ಕ್ಷೇತ್ರದಲ್ಲಿ ಇವತ್ತು ಬೆಳಗ್ಗಿನಿಂದಲೇ ಚಂಡಿಕಾಹೋಮ ನೆರವೇರಿತು. ಮುಂಜಾನೆಯೇ ಡಿ.ಕೆ.ಶಿಯವರ ದೊಡ್ಡಪ್ಪ ಮತ್ತು ಚಿಕ್ಕಪ್ಪನ ಮಕ್ಕಳು ಮೂಕಾಂಬಿಕಾ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.

UDP DKSHI CHANDIKA HOMA AV 11

ಚಂಡಿಕಾ ಹೋಮದ ಹರಕೆಯನ್ನು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೊಂಡಿದ್ದರು ಎನ್ನಲಾಗಿದೆ. ಲಕ್ಷ್ಮೀ ಹೆಬ್ಬಾಳ್ಕರ್ ಆಪ್ತ ಕಾರ್ಯದರ್ಶಿ ಚಂಡಿಕಾಹೋಮ ಬುಕ್ಕಿಂಗ್ ಮಾಡಿದ್ದರು. ಡಿಕೆಶಿ ಫೋಟೋ ಮುಂದಿಟ್ಟು ಚಂಡಿಕಾಹೋಮ ನಡೆಸಲಾಯ್ತು. ಶಿವಕುಮಾರ್ ಅವರ ಸಂಕಷ್ಟಗಳೆಲ್ಲ ಪರಿಹಾರವಾಗಿ ಶೀಘ್ರ ಬಂಧಮುಕ್ತರಾಗುವಂತೆ ದೇವರಲ್ಲಿ ವಿಶೇಷ ಪ್ರಾರ್ಥನೆಯೂ ನಡೆಯಿತು. ರಾಜ್ಯ ಕಾಂಗ್ರೆಸ್‍ನ ಪದಾಧಿಕಾರಿಗಳು, ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಮುಖರು ಭಾಗಿಯಾಗಿ ವಿಶೇಷ ಪೂಜೆ ಸಲ್ಲಿಸಿದರು.

Share This Article
Leave a Comment

Leave a Reply

Your email address will not be published. Required fields are marked *