ಮುಸ್ಲಿಮರು ಭಾರತ ಮಾತೆಯ ಮಕ್ಕಳು: ರಮೇಶ್ ಕುಮಾರ್

Public TV
1 Min Read
UDP 21

ಉಡುಪಿ: ನಗರದಲ್ಲಿ ಪೌರತ್ವ ಕಿಚ್ಚು ಸದ್ದುಮಾಡಿದೆ. ಸಹಬಾಳ್ವೆ ಸಂಘಟನೆ ನಗರದ ಕ್ರಿಶ್ಚಿಯನ್ ಹೈಸ್ಕೂಲ್ ಮೈದಾನದಲ್ಲಿ ಸಿಎಎ ವಿರುದ್ಧ ಸಮಾವೇಶ ನಡೆಯಿತು. ಪ್ರಗತಿಪರ, ದಲಿತ ಮುಸಲ್ಮಾನ ಮತ್ತು ಕಾಂಗ್ರೆಸ್ ಜಂಟಿಯಾಗಿ ಕೇಂದ್ರದ ಪೌರತ್ವ ಕಾಯ್ದೆ ವಿರುದ್ಧ ಸಮಾವೇಶ ಆಯೋಜಿಸಿತು.

ಕಾರ್ಯಕ್ರಮದ ದಿಕ್ಸೂಚಿ ಭಾಷಣ ಮಾಡಿದ ಮಾಜಿ ಸ್ಪೀಕರ್ ರಮೇಶ್ ಕುಮಾರ್, ಕಾಯ್ದೆ ತಂದ ಮೋದಿ ಸರ್ಕಾರಕ್ಕೆ ವ್ಯಂಗ್ಯವಾಗಿ ಧನ್ಯವಾದ ಹೇಳಿದರು. ಸ್ವಾತಂತ್ರ್ಯ ಹೋರಾಟ ನೋಡಿಲ್ಲ, ಸಾಯೋ ಕಾಲಕ್ಕೆ ಇಷ್ಟು ಧ್ವಜಗಳನ್ನು ನೋಡುವ ಅವಕಾಶವಾಗಿದೆ. ಕೇಸರಿ ಬಟ್ಟೆ ಧ್ವಜ ನೋಡಿ ಸಾಕಾಗಿತ್ತು ಎಂದು ಕುಟುಕಿದರು.

UDP 1 8

ಮುಸ್ಲಿಮರನ್ನು ಅನುಮಾನದಿಂದ ನೋಡಬೇಡಿ, ಭಾರತ ಮಾತೆ ಕಣ್ಣೀರು ಹಾಕುತ್ತಾಳೆ. ಮುಸ್ಲಿಮರು ಭಾರತ ಮಾತೆಯ ಮಕ್ಕಳು ಎಂದು ಭಾವನಾತ್ಮಕವಾಗಿ ಮಾತನಾಡಿದರು.

ಬಿಜೆಪಿಯವರಿಗೆ ಭಾರತದ ಇತಿಹಾಸದ ಪರಿಚಯ ಇಲ್ಲ. ಭಾರತದ ಇತಿಹಾಸ ಬಿಜೆಪಿಗರಿಗೆ ಬೇಕಾಗಿಯೂ ಇಲ್ಲ, ನಾಥುರಾಮ ಗೋಡ್ಸೆ ಸಂಸ್ಕೃತಿಯನ್ನು ನಮ್ಮ ಮಕ್ಕಳಿಗೆ ಕಲಿಸಲು ನಾವು ಬಿಡಲ್ಲ ಎಂದು ಗುಡುಗಿದರು.

UDP 2 6

ಅಮೆರಿಕದಲ್ಲಿ ಜನಿಸಿದ್ರೆ ಪೌರತ್ವ ಸಿಗುತ್ತದೆ. ನಮ್ಮ ದೇಶದ ಜನಕ್ಕೆ ಪೌರತ್ವ ಗಗನ ಕುಸುಮವಾಗುತ್ತಿದೆ. 1955ರಲ್ಲಿ ಜಾತಿ ಧರ್ಮದ ವಿಚಾರದಲ್ಲಿ ಪೌರತ್ವ ಕಾಯ್ದೆ ಮಾಡಿಲ್ಲ, ನಿರಾಶ್ರಿತರು ನುಸುಳುಕೋರರು ಎಂಬ ಎರಡು ವಿಧ ಇದೆ. ಪೌರತ್ವ ಕಾಯ್ದೆಯನ್ನು ಧರ್ಮಾಧಾರಿತ ಮಾಡಿದ್ದಾರೆ. ಮೋದಿ ಸರ್ಕಾರ ಸಂವಿಧಾನ ವಿರೋಧಿ ಎಂದು ಟೀಕಿಸಿದರು.

ಸ್ವಾತಂತ್ರ್ಯ ನಂತರ ಸಂವಿಧಾನ ಮತ್ತು ಜನರ ನಡುವೆ ತಿಕ್ಕಾಟ ಶುರುವಾಗಿದೆ. ಇದೇ ತರ ಮುಂದುವರಿದರೆ ದೇಶದ ಜಾತಕವನ್ನು ಜನರೇ ಬದಲು ಮಾಡುತ್ತಾರೆ ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿದರು.

UDP 3 3

ಪ್ರಥಮ ಬಾರಿಗೆ ಸಾವಿರಾರು ಸಂಖ್ಯೆಯಲ್ಲಿ ಮುಸ್ಲಿಂ ಮಹಿಳೆಯರು ಪ್ರತಿಭಟನೆಯಲ್ಲಿ ಪಾಲ್ಗೊಂಡರು. ಮೆರವಣಿಗೆ ಪೊಲೀಸ್ ಪರ್ಮಿಷನ್ ಇರಲಿಲ್ಲ. ಆದರೂ ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿದ್ದರು.

Share This Article
Leave a Comment

Leave a Reply

Your email address will not be published. Required fields are marked *