Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಉಡುಪಿ ಅಪಘಾತ: ಬಂಡೆಗೆ ಉಜ್ಜಿಕೊಂಡೇ 50 ಮೀ. ಸಾಗಿದ ಬಸ್- 9 ಸಾವು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಉಡುಪಿ ಅಪಘಾತ: ಬಂಡೆಗೆ ಉಜ್ಜಿಕೊಂಡೇ 50 ಮೀ. ಸಾಗಿದ ಬಸ್- 9 ಸಾವು

Districts

ಉಡುಪಿ ಅಪಘಾತ: ಬಂಡೆಗೆ ಉಜ್ಜಿಕೊಂಡೇ 50 ಮೀ. ಸಾಗಿದ ಬಸ್- 9 ಸಾವು

Public TV
Last updated: February 16, 2020 12:36 am
Public TV
Share
2 Min Read
UDP Accident F.jpg
SHARE

-ಬಸ್ ಬಲಭಾಗದಲ್ಲಿ ಕುಳಿತಿದ್ದವರ ಸಾವು
-ಅಪಘಾತಕ್ಕೆ ಕಾರಣ ಏನು?

ಉಡುಪಿ: ಜಿಲ್ಲೆಯ ಕಾರ್ಕಳ ತಾಲೂಕಿನ ಎಸ್.ಕೆ ಬಾರ್ಡರ್ ಬಳಿ ಭೀಕರ ಅಪಘಾತ ಸಂಭವಿಸಿದೆ. ಮೈಸೂರಿನಿಂದ ಪ್ರವಾಸ ಬಂದಿದ್ದ ಒಂಬತ್ತು ಮಂದಿ ಅಪಘಾತದಲ್ಲಿ ಅಸುನೀಗಿದ್ದಾರೆ. 25 ಮಂದಿ ಗಾಯಗೊಂಡಿದ್ದು ಓರ್ವನ ಸ್ಥಿತಿ ಗಂಭೀರವಾಗಿದೆ.

UDP Accident 1

ಕುದುರೆಮುಖದ ಸುಂದರ ಪರ್ವತ ಶ್ರೇಣಿಯ ನಡುವಿನ ಹೆದ್ದಾರಿಯಲ್ಲಿ ನಡೆದ ಅಪಘಾತದಲ್ಲಿ 9 ಮಂದಿ ಸ್ಥಳದಲ್ಲೇ ಅಸುನೀಗಿದ್ದಾರೆ. ಮೃತರನ್ನು ಮೈಸೂರಿನ ನಂಜನಗೂಡು ಸಮೀಪದ ಸೆಂಚುರಿ ವೈಟಲ್ ರೆಕಾರ್ಡ್ಸ್ ಕಂಪನಿಯ ನೌಕರರು ಎಂದು ಗುರುತಿಸಲಾಗಿದೆ. ಈ ಕಂಪನಿಯ ನೌಕರರು ಫೆಬ್ರುವರಿ 14ರಂದು ಮೈಸೂರಿನಿಂದ ಪ್ರವಾಸ ಹೊರಟು ಶೃಂಗೇರಿ, ಹೊರನಾಡು, ಕಳಸ ಸುತ್ತಾಡಿದ್ದಾರೆ. ಉಡುಪಿ ಜಿಲ್ಲೆಯ ಮಲ್ಪೆಗೆ ಸಮುದ್ರ ನೋಡಲು ಹೊರಟಿದ್ದರು. ಆದರೆ ಮಾರ್ಗಮಧ್ಯದಲ್ಲೇ ಒಂಬತ್ತು ಮಂದಿಯ ಪ್ರವಾಸ ದುರಂತ ಕಂಡಿದೆ.

UDP Accident A 1

ಶನಿವಾರ ಸಂಜೆ ಐದು ಮೂವತ್ತರ ಸುಮಾರಿಗೆ ಖಾಸಗಿ ಮಿನಿ ಬಸ್ ಘಾಟಿಯಿಂದಿಳಿದು ಬರುತ್ತಿದ್ದಾಗ ಎಡಗಡೆಯ ತಡೆಗೋಡೆಗೆ ಗುದ್ದಿದೆ. ಚಾಲಕ ಒಂದೇ ಸಮನೆ ಬಲಕ್ಕೆ ತಿರುಗಿಸಿದ್ದರಿಂದ ಬಂಡೆಗೆ ಅಪ್ಪಳಿಸಿದೆ. ಅಪಘಾತದ ತೀವ್ರತೆಗೆ 9 ಮಂದಿ ಸ್ಥಳದಲ್ಲೇ ಮೃತರಾಗಿದ್ದಾರೆ. ಘಟನೆಯಲ್ಲಿ 25 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕಾರ್ಕಳದ ಸಿಟಿ ಆಸ್ಪತ್ರೆ, ಸರ್ಕಾರಿ ಆಸ್ಪತ್ರೆ, ಮಣಿಪಾಲದ ಕೆಎಂಸಿಗೆ ದಾಖಲಿಸಲಾಗಿದೆ. ಗಾಯಗೊಂಡವರ ಪೈಕಿ ಓರ್ವನ ಸ್ಥಿತಿ ಗಂಭೀರವಾಗಿದೆ ಎಸ್‍ಪಿ, ಎಎಸ್‍ಪಿ, ಸರ್ಕಲ್ ಇನ್‍ಸ್ಪೆಕ್ಟರ್ ಗಳ ತಂಡ ಆಸ್ಪತ್ರೆಯಲ್ಲಿ ಮೊಕ್ಕಾಂ ಹೂಡಿದ್ದು ಗಾಯಾಳುಗಳು ಮತ್ತು ಮೃತರ ವಿವರ ಸಂಗ್ರಹಿಸಿ ಕುಟುಂಬಗಳಿಗೆ ಮಾಹಿತಿ ನೀಡುತ್ತಿದ್ದಾರೆ.

UDP Accident A 2

ಕರಾವಳಿ ಭಾಗದಲ್ಲಿ ಇತ್ತೀಚಿನ ವರ್ಷಗಳಲ್ಲಿ ನಡೆದ ಭೀಕರ ಅಪಘಾತವಿದು. ನಂಜನಗೂಡಿನ ವೈಟಲ್ ರೆಕಾರ್ಡ್ ಕಂಪನಿಯಲ್ಲಿ ಡಾಟಾ ಎಂಟ್ರಿ ಮಾಡುವ ಯುವಕರ ತಂಡವಿದು. ಪ್ರವಾಸದ ಸಂತೋಷದಲ್ಲಿದ್ದ ಯುವಕ-ಯುವತಿಯರ ತಂಡಕ್ಕೆ ಈ ಅಪಘಾತ ಬರಸಿಡಿಲಿನಂತೆ ಹೊಡೆದಿದೆ. ಬಸ್ ನಲ್ಲಿ ಮೋಜು-ಮಸ್ತಿ ಮಾಡಿಕೊಂಡು ಅಂತ್ಯಕ್ಷರಿ ಹಾಡುತ್ತಾ ಯುವಕರ ತಂಡ ಖುಷಿಖುಷಿಯಾಗಿ ಬರುತ್ತಿದ್ದರು. ಗೌಜು, ಗಲಾಟೆ ತಾರಕಕ್ಕೇರಿದಾಗ ಚಾಲಕನ ಗಮನ ಬೇರೆಡೆಗೆ ಹೋಗಿದೆ ಇದರಿಂದ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

UDP Accident

ಒಂಬತ್ತು ಮೃತರ ಪೈಕಿ ಎಂಟು ಮಂದಿಯ ಗುರುತು ಪತ್ತೆಯಾಗಿದ್ದು ಮೃತರನ್ನು ಗುರುತಿಸಲಾಗಿದೆ. ಅನಜ್ಞಾ (21,) ರಂಜಿತಾ ಪಿ, ಯೋಗೆಂದ್ರ (21), ರಾಧಾ ರವಿ(22), ಪ್ರೀತಂ ಗೌಡ ಶಾರೋಲ್(21), ಅಡುಗೆ ಸಹಾಯಕ ಬಸವರಾಜ್ (22), ಬಸ್ ಚಾಲಕ ಮಾರುತಿ ಎಂದು ಗುರುತಿಸಲಾಗಿದೆ. ಶವಗಳನ್ನು ಮರಣೋತ್ತರ ಶವ ಪರೀಕ್ಷೆಗಾಗಿ ಕಾರ್ಕಳದ ಸರ್ಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ.

ಭಾನುವಾರ ಮೈಸೂರಿನಿಂದ ಮೃತರ ಕುಟುಂಬದವರು ಬಂದ ನಂತರ ಶವ ಪರೀಕ್ಷೆ ನಡೆಸಿ ಹಸ್ತಾಂತರಿಸಲಾಗುತ್ತದೆ. ಎಸ್.ಕೆ.ಬಾರ್ಡರ್ ಬಳಿಯ ಅಬ್ಬಾಸ್ ಕಟ್ಟಿಂಗ್ ಬಳಿ ಅಪಘಾತ ನಡೆದಿದ್ದು ಈ ಭಾಗದಲ್ಲಿ ತುಂಬಾ ಕಿರಿದಾದ ತಿರುವಿನ ರಸ್ತೆ ಅಪಘಾತಕ್ಕೆ ಕಾರಣ ಎನ್ನುವುದು ಸ್ಥಳೀಯರ ಆಕ್ರೋಶವಾಗಿದೆ.

UDP Accident 2

ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸುವಂತೆ ಅಪಘಾತ ಸ್ಥಳದಲ್ಲಿದ್ದ ಬಸ್ ತೆರವು ಮಾಡಲಾಗಿದೆ. ಕಂಪನಿ ಎಚ್.ಆರ್. ಸೇರಿದಂತೆ 20 ವರ್ಷದೊಳಗಿನ ತರುಣ-ತರುಣಿಯರು ಬಸ್ ನ ಪ್ರಯಾಣಿಕರಾಗಿದ್ದರು. ಇದೊಂದು ಧಾರುಣ ಘಟನೆ ಮಲೆನಾಡು ಕರಾವಳಿ ಭಾಗದ ಜನರನ್ನು ಬೆಚ್ಚಿಬೀಳಿಸಿದೆ. ಭೀಕರ ಘಟನೆಗೆ ನಿಖರ ಕಾರಣ ತನಿಖೆಯಿಂದ ಗೊತ್ತಾಗಲಿದೆ.

TAGGED:mysurunanjanaguduPublic TVTourist Bus AccidentudupiYouthsಉಡುಪಿಪಬ್ಲಿಕ್ ಟಿವಿಪ್ರವಾಸಿ ಬಸ್ಬಸ್ ಅಪಘಾತಯುವಕ
Share This Article
Facebook Whatsapp Whatsapp Telegram

Cinema news

darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru City Cinema Court Latest Main Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru City Crime Districts Karnataka Latest Sandalwood Top Stories
Rishab Shetty
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ – `ಕಾಂತಾರ’ ಮತ್ತೊಂದು ಅಧ್ಯಾಯದ ಬಗ್ಗೆ ಚರ್ಚಿಸಿದ್ರಾ ಶೆಟ್ರು?
Cinema Latest Main Post National Sandalwood
chetan 13 2
ಡಾ.ರಾಜ್ ಸಮಾಧಿಯ ಪೋಸ್ಟ್ ಪ್ರಶ್ನಿಸಿ ಮನೆಗೆ ಮುತ್ತಿಗೆ ಹಾಕಿದ್ದವರ ವಿರುದ್ಧ ಚೇತನ್ ದೂರು
Bengaluru City Cinema Districts Karnataka Latest Sandalwood Top Stories

You Might Also Like

Hassan Illicit Relation Murder
Crime

ಲೈಂಗಿಕ ಕ್ರಿಯೆಗೆ ಒಪ್ಪದಿದ್ದಕ್ಕೆ ಮಹಿಳೆ ಮೇಲೆ ಹಲ್ಲೆ – ಕಳ್ಳಸಂಬಂಧ ಕೊಲೆಯಲ್ಲಿ ಅಂತ್ಯ

Public TV
By Public TV
5 minutes ago
Kolar Forest Fire
Crime

ಕೋಲಾರದ ಅಂತರಗಂಗೆ ತಪ್ಪಲಿನಲ್ಲಿ ಬೆಂಕಿ – ಅಪಾರ ಪ್ರಮಾಣದ ಅರಣ್ಯ ನಾಶ

Public TV
By Public TV
16 minutes ago
DK Shivakumar
Districts

ಡಿಕೆಶಿ, ಕಿಚ್ಚ ಸುದೀಪ್‌ ಭಾಗವಹಿಸಿದ್ದ ಕಾರ್ಯಕ್ರಮದ ವೇದಿಕೆಯಲ್ಲಿ ಬೆಂಕಿ ಅವಘಡ – ತಪ್ಪಿದ ದುರಂತ

Public TV
By Public TV
35 minutes ago
Sudeep 2
Districts

ಡಿಕೆಶಿ ಲ್ಯಾಂಡ್‌ ಆಗಬೇಕಿದ್ದ ಸ್ಥಳದಲ್ಲಿ ಸುದೀಪ್ ಹೆಲಿಕಾಪ್ಟರ್ ಲ್ಯಾಂಡಿಗ್‌ – ಅಧಿಕಾರಿಗಳಲ್ಲಿ ಕೆಲಕಾಲ ಆತಂಕ

Public TV
By Public TV
52 minutes ago
BWSSB Bengaluru Water Board
Bengaluru City

ಜಲಮಂಡಳಿಯ ಒನ್ ಟೈಮ್ ಸೆಟಲ್ಮೆಂಟ್ ಯೋಜನೆಗೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ

Public TV
By Public TV
53 minutes ago
Jeevaraj 3
Chikkamagaluru

ಶೃಂಗೇರಿ | ಅಂಚೆ ಮತಗಳ ಮರು ಎಣಿಕೆಯಲ್ಲಿ ಬಿಜೆಪಿ ಮೇಲುಗೈ – ಶಾರದಾಂಬೆ ದರ್ಶನ ಪಡೆದ ಅಭ್ಯರ್ಥಿ ಜೀವರಾಜ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?