ಉಡುಪಿ: ಕೇಸರಿ ಧ್ವಜ ತೋರಿಸಿ ಪರ್ಯಾಯ ಮೆರವಣಿಗೆಗೆ ಚಾಲನೆ ನೀಡಿದ ಡಿಸಿ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ಆಕ್ಷೇಪ ವ್ಯಕ್ತವಾಗಿದೆ.
ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಕೇಸರಿ ಧ್ವಜ ತೋರಿಸಿ ಚಾಲನೆ ನೀಡಿದ್ದಕ್ಕೆ ವಿರೋಧದ ಮಾತುಗಳು ಕೇಳಿಬರುತ್ತಿವೆ. ಶಾಸಕ ಯಶ್ ಪಾಲ್ ಸುವರ್ಣ ಅವರು ಡಿಸಿಗೆ ಕೇಸರಿ ಧ್ವಜ ಹಸ್ತಾಂತರಿಸಿದ್ದರು. ಶಾಸಕರಿಂದ ಕೇಸರಿ ಧ್ವಜ ಪಡೆದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಮೆರವಣಿಗೆಗೆ ಚಾಲನೆ ನೀಡಿದ್ದರು. ಇದನ್ನೂ ಓದಿ: ಕಚೇರಿಯಲ್ಲೇ ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ – ವಿಡಿಯೋ ವೈರಲ್
ಆಕ್ಷೇಪಗಳು ಕೇಳಿ ಬಂದ ಬಗ್ಗೆ ಜಿಲ್ಲಾಧಿಕಾರಿ ಕೇಸರಿ ಅವರು ಪ್ರತಿಕ್ರಿಯಿಸಿದ್ದಾರೆ. ಪರ್ಯಾಯ ಮಹೋತ್ಸವದ ವೇಳೆ ನಗರಸಭೆಯ ಆಡಳಿತಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದೇನೆ. ಆಡಳಿಧಿಕಾರಿ ಆಗಿರುವ ಹಿನ್ನೆಲೆಯಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದೇನೆ. ಅದನ್ನು ಹೊರತುಪಡಿಸಿ ಯಾವುದೇ ರಾಜಕೀಯ ಪ್ರೇರಿತ ಭಾಗವಹಿಸುವಿಕೆ ಅಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಪುರಪ್ರವೇಶಕ್ಕೂ ನಗರಸಭೆಯ ಆಡಳಿತಾಧಿಕಾರಿಯಾಗಿ ಭಾಗವಹಿಸಿದ್ದೇನೆ. ಯತಿಗಳ ಪೌರ ಸಮ್ಮಾನ ಹಾಗೂ ಸರ್ವಜ್ಞ ಪೀಠ ಏರಿದ ನಂತರ ದರ್ಬಾರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದೇನೆ. ಈ ವಿಚಾರವನ್ನು ಸಾರ್ವಜನಿಕರು ಗಮನಿಸಬೇಕು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನೂರಕ್ಕೆ ನೂರು ಸಿದ್ದರಾಮಯ್ಯ ಬಜೆಟ್ ಮಂಡಿಸುತ್ತಾರೆ: ಬೋಸರಾಜು

