Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪೇಜಾವರಶ್ರೀ ಮಧ್ವಪೀಠವೇರಿ 80 ವರ್ಷ ಪೂರ್ಣ- ರಾಷ್ಟ್ರಪತಿ ಕೋವಿಂದ್, ಉಮಾಭಾರತಿಯಿಂದ ಗುರುವಾರ ಗುರುವಂದನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಪೇಜಾವರಶ್ರೀ ಮಧ್ವಪೀಠವೇರಿ 80 ವರ್ಷ ಪೂರ್ಣ- ರಾಷ್ಟ್ರಪತಿ ಕೋವಿಂದ್, ಉಮಾಭಾರತಿಯಿಂದ ಗುರುವಾರ ಗುರುವಂದನೆ

Districts

ಪೇಜಾವರಶ್ರೀ ಮಧ್ವಪೀಠವೇರಿ 80 ವರ್ಷ ಪೂರ್ಣ- ರಾಷ್ಟ್ರಪತಿ ಕೋವಿಂದ್, ಉಮಾಭಾರತಿಯಿಂದ ಗುರುವಾರ ಗುರುವಂದನೆ

Public TV
Last updated: December 26, 2018 5:11 pm
Public TV
Share
2 Min Read
udp pejavar shri 1 1
SHARE

ಉಡುಪಿ: ಅಷ್ಟಮಠದ ಹಿರಿಯಶ್ರೀಗಳಾದ ಪೇಜಾವರ ಶ್ರೀಗಳು ಮಧ್ವಪೀಠವೇರಿ 80 ವರ್ಷ ಪೂರ್ಣಗೊಂಡಿದ್ದು, ಸ್ವತಃ ರಾಷ್ಟ್ರಪತಿಗಳು ಹಾಗೂ ಶ್ರೀಗಳ ಶಿಷ್ಯೆ ಕೇಂದ್ರ ಸಚಿವೆ ಉಮಾಭಾರತಿಯವರು ಗುರುವಂದನೆ ಮಾಡಲಿದ್ದು ಉಡುಪಿಯಲ್ಲಿ ಕಾರ್ಯಕ್ರಮದ ಸಿದ್ಧತೆ ಜೋರಾಗಿದೆ.

ಪೇಜಾವರ ಶ್ರೀಗಳು ಬ್ರಾಹ್ಮಣ ಯತಿಯಾದ್ರೂ ದಲಿತ ಕೇರಿಗೆ ಹೋದ ಕ್ರಾಂತಿಕಾರಿ. ಸರ್ವಸಂಘ ಪರಿತ್ಯಾಗಿಯಾದ್ರೂ ರಾಜಕೀಯ ಪಂಡಿತ. ಪ್ರಪಂಚ ಅರಿಯದ ವಯಸ್ಸಿನಲ್ಲಿ ಪೀಠವೇರಿ ಸನ್ಯಾಸಿಯಾದ್ರು ಶ್ರೀ ಪೇಜಾವರ ಶ್ರೀಗಳು. 80 ವರ್ಷದ ಹಿಂದೆ ಇವರ ಹೆಸರು ವೆಂಕಟರಮಣ. ಆಗಿನ್ನೂ ಅವರು 8 ವರ್ಷದ ಬಾಲಕ. ದಕ್ಷಿಣ ಕನ್ನಡ ಜಿಲ್ಲೆಯ ಸರಕಾರಿ ಶಾಲೆಯಲ್ಲಿ ಎರಡನೇ ತರಗತಿ ವ್ಯಾಸಂಗ ಮಾಡುತ್ತಿದ್ದರು. ಪುಟ್ಟ ಬಾಲಕನಿಗೆ ಅದೇನು ಕನಸಿತ್ತೋ, ಮುಂದೇನು ಆಗಬೇಕೆಂಬ ಮನಸ್ಸಿತ್ತೋ ಗೊತ್ತಿಲ್ಲ. ಆದ್ರೆ ಮಧ್ವಾಚಾರ್ಯರಿಂದ ಸ್ಥಾಪಿತವಾದ ಅಷ್ಟಮಠಗಳ ಪೈಕಿ ಒಂದಾಗ ಪೇಜಾವರ ಮಠಕ್ಕೆ ಉತ್ತರಾಧಿಕಾರಿಯಾಗಿ ಧೀಕ್ಷೆ ಕೊಡಲಾಯ್ತು. ಬಳಿಕ ಮಾಣಿ ವೆಂಕಟರಮಣ ಶ್ರೀ ಶ್ರೀ ವಿಶ್ವೇಶತೀರ್ಥ ಶ್ರೀಪಾದರಾದರು.

udp pejavara shri

ಪೇಜಾವರ ಸ್ವಾಮೀಜಿ ಸನ್ಯಾಸಿಯಾಗಿ 80 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಗುರುವಂದನಾ ಕಾರ್ಯಕ್ರಮ ನೆರವೇರುತ್ತಿದೆ. ಆದರಿಂದ ಪೇಜಾವರಶ್ರೀ ಶಿಷ್ಯೆ ಉಮಾಭಾರತಿ ಗುರುವಂದನೆ ಮಾಡಲಿದ್ದಾರೆ. ಡಿಸೆಂಬರ್ 27ರಂದು ನಡೆಯುವ ಕಾರ್ಯಕ್ರಮಕ್ಕೆ ಭಾರತದ ಪ್ರಥಮ ಪ್ರಜೆ ರಾಮನಾಥ ಕೋವಿಂದ್ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. ಹಾಗೆಯೇ ಕರ್ನಾಟಕ ರಾಜ್ಯಪಾಲ ವಜೂಭಾಯಿ ವಾಲಾ, ನಾಗಾಲ್ಯಾಂಡ್ ರಾಜ್ಯಪಾಲ ಪಿ.ಬಿ ಆಚಾರ್ಯ ಸ್ವಾಮೀಜಿಯವರ ಎಂಬತ್ತನೇ ಸನ್ಯಾಸ ಉತ್ಸವದಲ್ಲಿ ಭಾಗಿಯಾಗಲಿದ್ದಾರೆ.

udp pejavar shri 3 1

ಪೇಜಾವರ ಶ್ರೀಗಳಿಗೆ ಈಗ 89 ವಯಸ್ಸು. ಹೆಸರಿಗೆ 89, ಆದ್ರೆ ಶ್ರೀಗಳ ಓಡಾಟ, ಚುರುಕುತನ, ಪೂಜೆ, ಯೋಗ, ಭಾಷಣ, ಪ್ರವಚನ ಕೇಳಿದ್ರೆ ಇನ್ನೂ ಮೂವತ್ತೊಂಬತ್ತು ಅನ್ನಿಸುತ್ತದೆ. ಕಾವಿ ಉಟ್ಟು ಕೇವಲ ಧಾರ್ಮಿಕವಾಗಿ ತೊಡಗಿಸಿಕೊಳ್ಳದೆ ಸಾಮಾಜಿಕ ಚಟುವಟಿಕೆಯಲ್ಲೂ ಪೇಜಾವರಶ್ರೀ ಮುಂಚೂಣಿಯಲ್ಲಿದ್ದಾರೆ. 60ರ ದಶಕದಲ್ಲಿ ದಲಿತ ಕೇರಿಗೆ ಭೇಟಿಕೊಟ್ಟು ಅಸ್ಪೃಶ್ಯತೆಯನ್ನು ಹೋಗಲಾಡಿಸುವ ದಿಟ್ಟ ಹೆಜ್ಜೆಯನ್ನು ಶ್ರೀಗಳು ಇಟ್ಟಿದ್ದರು. ಬ್ರಾಹ್ಮಣರಿಂದ ವಿರೋಧ ಬಂದರೂ, ಲೆಕ್ಕಕ್ಕೆ ತೆಗೆದುಕೊಳ್ಳದೆ ಮುಂದುವರಿದವರು. ಇತ್ತೀಚಿನ ಮಡೆಸ್ನಾನಕ್ಕೆ ಪರಿಹಾರ ನೀಡಿ ಪರ್ಯಾಯ ಸಂದರ್ಭದಲ್ಲಿ ಇಫ್ತಾರ್ ಕೂಟ ಮಾಡಿ ವಿರೋಧ ಕಟ್ಟಿಕೊಂಡ ಶ್ರೀಗಳು, ಎಲ್ಲವನ್ನೂ ಯಶಸ್ವಿಯಾಗಿ ನಿಭಾಯಿಸುತ್ತಾ, ಉಡುಪಿ ಕೃಷ್ಣನಿಗೆ ಅತೀಹೆಚ್ಚು ಪೂಜೆ ಮಾಡಿದ ಸಂತ ಎಂಬ ಕೀರ್ತಿಗೂ ಸ್ವಾಮೀಜಿ ಪಾತ್ರವಾಗಿದ್ದಾರೆ. ರಾಮಮಂದಿರ ನಿರ್ಮಾಣ ಆಗಬೇಕೆಂಬ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಪೇಜಾವರ ಶ್ರೀಗಳಿಗೆ ಇದೀಗ ತನ್ನ ಶಿಷ್ಯೆ ಹಾಗೂ ದೇಶದ ಮೊದಲ ಪ್ರಜೆಯಿಂದ ಸನ್ಯಾಸದ 80ನೇ ವರ್ಷದ ಸಂದರ್ಭ ಗುರುವಂದನೆಯಲ್ಲಿ ಪಡೆಯಲ್ಲಿದ್ದಾರೆ.

udp pejarvar shri 4

ಪಲಿಮಾರು ವಿದ್ಯಾಧೀಶತೀರ್ಥ ಸ್ವಾಮೀಜಿ ಅವರು ಮಾತನಾಡಿ, ಹಿರಿಯ ಶ್ರೀಗಳಿಗೆ ನಮ್ಮ ಪರ್ಯಾಯ ಸಂದರ್ಭದಲ್ಲಿ 80ರ ಗುರುವಂದನೆ ನಡೆಯುತ್ತಿರುವುದು ಮನಸ್ಸಿಗೆ ಬಹಳ ಖುಷಿ ಕೊಟ್ಟಿದೆ. ಅವರ ನೂರನೇ ಗುರುವಂದನಾ ಕಾರ್ಯಕ್ರಮ ನೋಡುವ ಅವಕಾಶವನ್ನು ಭಗವಂತ ಕರುಣಿಸಲಿ. ಕೃಷ್ಣಮಠಕ್ಕೆ ರಾಷ್ಟ್ರಪತಿಗಳು ಆಗಮಿಸಲಿದ್ದು ದೇವರ ದರ್ಶನ ಮತ್ತು ಅವರ ಗೌರವಕ್ಕೆ ಸಿದ್ಧತೆ ನಡೆಸಿದ್ದೇವೆ ಎಂದರು.

ಪೇಜಾವರಶ್ರೀಗಳಿಗೆ ದೇಶಾದ್ಯಂತ ಭಕ್ತರಿದ್ದಾರೆ. ಬಾಬ್ರಿ ಮಸೀದಿ ಧ್ವಂಸ, ಸಂವಿಧಾನ ತಿದ್ದುಪಡಿ ಮುಂತಾದ ಕೆಲ ಘಟನೆಗಳ ನಂತರ ಅವರನ್ನು ಟೀಕಿಸುವವರೂ ಹೆಚ್ಚಿದ್ದಾರೆ. ಒಟ್ಟಿನಲ್ಲಿ ಸನ್ಯಾಸ ಜೀವನದಲ್ಲಿ 80 ವರ್ಷಗಳನ್ನು ಪೂರೈಸಿರುವುದು ಹಾಗೂ ಸಮಾಜದ ಎಲ್ಲಾ ವರ್ಗಗಳನ್ನು ಮುಟ್ಟುವುದು ಸಾಮಾನ್ಯ ವಿಷಯವಲ್ಲ. 1940ರಿಂದ ಪೀಠವನ್ನು ನಿಭಾಯಿಸಿಕೊಂಡು ಬಂದು ಈಗಲೂ ಪ್ರಸಿದ್ಧರಾಗಿರುವುದು ಸುಲಭದ ಮಾತಲ್ಲ ಅನ್ನುವುದು ಎಲ್ಲರೂ ಒಪ್ಪಿಕೊಳ್ಳುವ ಸತ್ಯಂಶವಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:Guruvandana programMadhvapeetaPejavara shriPresident Ramanath kovindPublic TVudupiUmabharathiಉಡುಪಿಉಮಾಭಾರತಿಗುರುವಂದನಾ ಕಾರ್ಯಕ್ರಮಪಬ್ಲಿಕ್ ಟಿವಿಪೇಜಾವರ ಶ್ರೀಗಳುಮಾಧ್ವಪೀಠರಾಷ್ಟ್ರಪತಿ ರಾಮನಾಥ ಕೋವಿಂದ
Share This Article
Facebook Whatsapp Whatsapp Telegram

Cinema news

Salman Khan
ಸಲ್ಮಾನ್ ಖಾನ್ ಅಭಿನಯದ `ಬ್ಯಾಟಲ್ ಆಫ್ ಗಲ್ವಾನ್’ ಈಗ `ಮಾತೃಭೂಮಿ’
Bollywood Cinema Latest Top Stories
Oscars 2026 Michael B Jordan Jessie Buckley
Oscars 2026: ಮೈಕೆಲ್ ಬಿ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ
Cinema Latest Top Stories World
Dhurandhar 2 Trailer
ರಿಲೀಸ್‌ಗೂ ಮುನ್ನವೇ 100 ಕೋಟಿ ಬಾಚಿದ ಧುರಂಧರ್‌-2
Bollywood Cinema Latest Top Stories
chandanavana film critics academy awards
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ – ಅತಿ ಹೆಚ್ಚು ನಾಮನಿರ್ದೇಶಿತರು ಯಾರು?
Cinema Latest Sandalwood Top Stories

You Might Also Like

Traffic Rules Violation Chikkamagaluru Court
Chikkamagaluru

ಟ್ರಾಫಿಕ್ ರೂಲ್ಸ್ ಬ್ರೇಕ್ – ಬೋರ್ಡ್ ಹಿಡಿದು ಇಡೀ ದಿನ ರಸ್ತೆ ಮಧ್ಯೆ ನಿಲ್ಲುವ ಶಿಕ್ಷೆ!

Public TV
By Public TV
26 minutes ago
LPG Cylinders Jagalur
Davanagere

ಜಗಳೂರು | ಹೋಟೆಲ್‍ಗಳ ಮೇಲೆ ತಹಶೀಲ್ದಾರ್ ದಾಳಿ – 20 ಗೃಹ ಬಳಕೆ ಸಿಲಿಂಡರ್ ವಶಕ್ಕೆ

Public TV
By Public TV
52 minutes ago
kabul hospital pak strikes
Latest

ಅನಾಗರಿಕ, ಹೇಡಿತನದ ಕೃತ್ಯ: ಕಾಬೂಲ್‌ ಆಸ್ಪತ್ರೆ ಮೇಲಿನ ಪಾಕ್‌ ದಾಳಿ ಖಂಡಿಸಿದ ಭಾರತ

Public TV
By Public TV
1 hour ago
Four workers fall ill due to chemical reaction in Hubballi
Dharwad

ಹುಬ್ಬಳ್ಳಿ | ಫ್ಲೈವುಡ್‌ ಕೆಲಸದ ವೇಳೆ ಕೆಮಿಕಲ್ ರಿಯಾಕ್ಷನ್ – ನಾಲ್ವರು ಕಾರ್ಮಿಕರು ಅಸ್ವಸ್ಥ

Public TV
By Public TV
1 hour ago
congress leader pm modi
Chikkamagaluru

ಸ್ವಪಕ್ಷದ ಮುಖಂಡನ ವಿರುದ್ಧವೇ ದೂರು – ನ್ಯಾಯಕ್ಕಾಗಿ ಪ್ರಧಾನಿ ಮೋದಿ ಕಚೇರಿ ಕದ ತಟ್ಟಿದ ಕಾಂಗ್ರೆಸ್ ನಾಯಕಿ

Public TV
By Public TV
2 hours ago
DK Shivakumar 9
Bengaluru City

ಬಾಕಿ ಇರುವ ರಾಜ್ಯದ ನೀರಾವರಿ ಯೋಜನೆಗಳಿಗೆ ಅನುಮತಿ ಬಗ್ಗೆ ಕರ್ನಾಟಕ ಸಂಸದರ ಜೊತೆ ಚರ್ಚೆ: ಡಿಕೆಶಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?