Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪೇಜಾವರಶ್ರೀ ಮಧ್ವಪೀಠವೇರಿ 80 ವರ್ಷ ಪೂರ್ಣ- ರಾಷ್ಟ್ರಪತಿ ಕೋವಿಂದ್, ಉಮಾಭಾರತಿಯಿಂದ ಗುರುವಾರ ಗುರುವಂದನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಪೇಜಾವರಶ್ರೀ ಮಧ್ವಪೀಠವೇರಿ 80 ವರ್ಷ ಪೂರ್ಣ- ರಾಷ್ಟ್ರಪತಿ ಕೋವಿಂದ್, ಉಮಾಭಾರತಿಯಿಂದ ಗುರುವಾರ ಗುರುವಂದನೆ

Districts

ಪೇಜಾವರಶ್ರೀ ಮಧ್ವಪೀಠವೇರಿ 80 ವರ್ಷ ಪೂರ್ಣ- ರಾಷ್ಟ್ರಪತಿ ಕೋವಿಂದ್, ಉಮಾಭಾರತಿಯಿಂದ ಗುರುವಾರ ಗುರುವಂದನೆ

Public TV
Last updated: December 26, 2018 5:11 pm
Public TV
Share
2 Min Read
udp pejavar shri 1 1
SHARE

ಉಡುಪಿ: ಅಷ್ಟಮಠದ ಹಿರಿಯಶ್ರೀಗಳಾದ ಪೇಜಾವರ ಶ್ರೀಗಳು ಮಧ್ವಪೀಠವೇರಿ 80 ವರ್ಷ ಪೂರ್ಣಗೊಂಡಿದ್ದು, ಸ್ವತಃ ರಾಷ್ಟ್ರಪತಿಗಳು ಹಾಗೂ ಶ್ರೀಗಳ ಶಿಷ್ಯೆ ಕೇಂದ್ರ ಸಚಿವೆ ಉಮಾಭಾರತಿಯವರು ಗುರುವಂದನೆ ಮಾಡಲಿದ್ದು ಉಡುಪಿಯಲ್ಲಿ ಕಾರ್ಯಕ್ರಮದ ಸಿದ್ಧತೆ ಜೋರಾಗಿದೆ.

ಪೇಜಾವರ ಶ್ರೀಗಳು ಬ್ರಾಹ್ಮಣ ಯತಿಯಾದ್ರೂ ದಲಿತ ಕೇರಿಗೆ ಹೋದ ಕ್ರಾಂತಿಕಾರಿ. ಸರ್ವಸಂಘ ಪರಿತ್ಯಾಗಿಯಾದ್ರೂ ರಾಜಕೀಯ ಪಂಡಿತ. ಪ್ರಪಂಚ ಅರಿಯದ ವಯಸ್ಸಿನಲ್ಲಿ ಪೀಠವೇರಿ ಸನ್ಯಾಸಿಯಾದ್ರು ಶ್ರೀ ಪೇಜಾವರ ಶ್ರೀಗಳು. 80 ವರ್ಷದ ಹಿಂದೆ ಇವರ ಹೆಸರು ವೆಂಕಟರಮಣ. ಆಗಿನ್ನೂ ಅವರು 8 ವರ್ಷದ ಬಾಲಕ. ದಕ್ಷಿಣ ಕನ್ನಡ ಜಿಲ್ಲೆಯ ಸರಕಾರಿ ಶಾಲೆಯಲ್ಲಿ ಎರಡನೇ ತರಗತಿ ವ್ಯಾಸಂಗ ಮಾಡುತ್ತಿದ್ದರು. ಪುಟ್ಟ ಬಾಲಕನಿಗೆ ಅದೇನು ಕನಸಿತ್ತೋ, ಮುಂದೇನು ಆಗಬೇಕೆಂಬ ಮನಸ್ಸಿತ್ತೋ ಗೊತ್ತಿಲ್ಲ. ಆದ್ರೆ ಮಧ್ವಾಚಾರ್ಯರಿಂದ ಸ್ಥಾಪಿತವಾದ ಅಷ್ಟಮಠಗಳ ಪೈಕಿ ಒಂದಾಗ ಪೇಜಾವರ ಮಠಕ್ಕೆ ಉತ್ತರಾಧಿಕಾರಿಯಾಗಿ ಧೀಕ್ಷೆ ಕೊಡಲಾಯ್ತು. ಬಳಿಕ ಮಾಣಿ ವೆಂಕಟರಮಣ ಶ್ರೀ ಶ್ರೀ ವಿಶ್ವೇಶತೀರ್ಥ ಶ್ರೀಪಾದರಾದರು.

udp pejavara shri

ಪೇಜಾವರ ಸ್ವಾಮೀಜಿ ಸನ್ಯಾಸಿಯಾಗಿ 80 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಗುರುವಂದನಾ ಕಾರ್ಯಕ್ರಮ ನೆರವೇರುತ್ತಿದೆ. ಆದರಿಂದ ಪೇಜಾವರಶ್ರೀ ಶಿಷ್ಯೆ ಉಮಾಭಾರತಿ ಗುರುವಂದನೆ ಮಾಡಲಿದ್ದಾರೆ. ಡಿಸೆಂಬರ್ 27ರಂದು ನಡೆಯುವ ಕಾರ್ಯಕ್ರಮಕ್ಕೆ ಭಾರತದ ಪ್ರಥಮ ಪ್ರಜೆ ರಾಮನಾಥ ಕೋವಿಂದ್ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. ಹಾಗೆಯೇ ಕರ್ನಾಟಕ ರಾಜ್ಯಪಾಲ ವಜೂಭಾಯಿ ವಾಲಾ, ನಾಗಾಲ್ಯಾಂಡ್ ರಾಜ್ಯಪಾಲ ಪಿ.ಬಿ ಆಚಾರ್ಯ ಸ್ವಾಮೀಜಿಯವರ ಎಂಬತ್ತನೇ ಸನ್ಯಾಸ ಉತ್ಸವದಲ್ಲಿ ಭಾಗಿಯಾಗಲಿದ್ದಾರೆ.

udp pejavar shri 3 1

ಪೇಜಾವರ ಶ್ರೀಗಳಿಗೆ ಈಗ 89 ವಯಸ್ಸು. ಹೆಸರಿಗೆ 89, ಆದ್ರೆ ಶ್ರೀಗಳ ಓಡಾಟ, ಚುರುಕುತನ, ಪೂಜೆ, ಯೋಗ, ಭಾಷಣ, ಪ್ರವಚನ ಕೇಳಿದ್ರೆ ಇನ್ನೂ ಮೂವತ್ತೊಂಬತ್ತು ಅನ್ನಿಸುತ್ತದೆ. ಕಾವಿ ಉಟ್ಟು ಕೇವಲ ಧಾರ್ಮಿಕವಾಗಿ ತೊಡಗಿಸಿಕೊಳ್ಳದೆ ಸಾಮಾಜಿಕ ಚಟುವಟಿಕೆಯಲ್ಲೂ ಪೇಜಾವರಶ್ರೀ ಮುಂಚೂಣಿಯಲ್ಲಿದ್ದಾರೆ. 60ರ ದಶಕದಲ್ಲಿ ದಲಿತ ಕೇರಿಗೆ ಭೇಟಿಕೊಟ್ಟು ಅಸ್ಪೃಶ್ಯತೆಯನ್ನು ಹೋಗಲಾಡಿಸುವ ದಿಟ್ಟ ಹೆಜ್ಜೆಯನ್ನು ಶ್ರೀಗಳು ಇಟ್ಟಿದ್ದರು. ಬ್ರಾಹ್ಮಣರಿಂದ ವಿರೋಧ ಬಂದರೂ, ಲೆಕ್ಕಕ್ಕೆ ತೆಗೆದುಕೊಳ್ಳದೆ ಮುಂದುವರಿದವರು. ಇತ್ತೀಚಿನ ಮಡೆಸ್ನಾನಕ್ಕೆ ಪರಿಹಾರ ನೀಡಿ ಪರ್ಯಾಯ ಸಂದರ್ಭದಲ್ಲಿ ಇಫ್ತಾರ್ ಕೂಟ ಮಾಡಿ ವಿರೋಧ ಕಟ್ಟಿಕೊಂಡ ಶ್ರೀಗಳು, ಎಲ್ಲವನ್ನೂ ಯಶಸ್ವಿಯಾಗಿ ನಿಭಾಯಿಸುತ್ತಾ, ಉಡುಪಿ ಕೃಷ್ಣನಿಗೆ ಅತೀಹೆಚ್ಚು ಪೂಜೆ ಮಾಡಿದ ಸಂತ ಎಂಬ ಕೀರ್ತಿಗೂ ಸ್ವಾಮೀಜಿ ಪಾತ್ರವಾಗಿದ್ದಾರೆ. ರಾಮಮಂದಿರ ನಿರ್ಮಾಣ ಆಗಬೇಕೆಂಬ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಪೇಜಾವರ ಶ್ರೀಗಳಿಗೆ ಇದೀಗ ತನ್ನ ಶಿಷ್ಯೆ ಹಾಗೂ ದೇಶದ ಮೊದಲ ಪ್ರಜೆಯಿಂದ ಸನ್ಯಾಸದ 80ನೇ ವರ್ಷದ ಸಂದರ್ಭ ಗುರುವಂದನೆಯಲ್ಲಿ ಪಡೆಯಲ್ಲಿದ್ದಾರೆ.

udp pejarvar shri 4

ಪಲಿಮಾರು ವಿದ್ಯಾಧೀಶತೀರ್ಥ ಸ್ವಾಮೀಜಿ ಅವರು ಮಾತನಾಡಿ, ಹಿರಿಯ ಶ್ರೀಗಳಿಗೆ ನಮ್ಮ ಪರ್ಯಾಯ ಸಂದರ್ಭದಲ್ಲಿ 80ರ ಗುರುವಂದನೆ ನಡೆಯುತ್ತಿರುವುದು ಮನಸ್ಸಿಗೆ ಬಹಳ ಖುಷಿ ಕೊಟ್ಟಿದೆ. ಅವರ ನೂರನೇ ಗುರುವಂದನಾ ಕಾರ್ಯಕ್ರಮ ನೋಡುವ ಅವಕಾಶವನ್ನು ಭಗವಂತ ಕರುಣಿಸಲಿ. ಕೃಷ್ಣಮಠಕ್ಕೆ ರಾಷ್ಟ್ರಪತಿಗಳು ಆಗಮಿಸಲಿದ್ದು ದೇವರ ದರ್ಶನ ಮತ್ತು ಅವರ ಗೌರವಕ್ಕೆ ಸಿದ್ಧತೆ ನಡೆಸಿದ್ದೇವೆ ಎಂದರು.

ಪೇಜಾವರಶ್ರೀಗಳಿಗೆ ದೇಶಾದ್ಯಂತ ಭಕ್ತರಿದ್ದಾರೆ. ಬಾಬ್ರಿ ಮಸೀದಿ ಧ್ವಂಸ, ಸಂವಿಧಾನ ತಿದ್ದುಪಡಿ ಮುಂತಾದ ಕೆಲ ಘಟನೆಗಳ ನಂತರ ಅವರನ್ನು ಟೀಕಿಸುವವರೂ ಹೆಚ್ಚಿದ್ದಾರೆ. ಒಟ್ಟಿನಲ್ಲಿ ಸನ್ಯಾಸ ಜೀವನದಲ್ಲಿ 80 ವರ್ಷಗಳನ್ನು ಪೂರೈಸಿರುವುದು ಹಾಗೂ ಸಮಾಜದ ಎಲ್ಲಾ ವರ್ಗಗಳನ್ನು ಮುಟ್ಟುವುದು ಸಾಮಾನ್ಯ ವಿಷಯವಲ್ಲ. 1940ರಿಂದ ಪೀಠವನ್ನು ನಿಭಾಯಿಸಿಕೊಂಡು ಬಂದು ಈಗಲೂ ಪ್ರಸಿದ್ಧರಾಗಿರುವುದು ಸುಲಭದ ಮಾತಲ್ಲ ಅನ್ನುವುದು ಎಲ್ಲರೂ ಒಪ್ಪಿಕೊಳ್ಳುವ ಸತ್ಯಂಶವಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:Guruvandana programMadhvapeetaPejavara shriPresident Ramanath kovindPublic TVudupiUmabharathiಉಡುಪಿಉಮಾಭಾರತಿಗುರುವಂದನಾ ಕಾರ್ಯಕ್ರಮಪಬ್ಲಿಕ್ ಟಿವಿಪೇಜಾವರ ಶ್ರೀಗಳುಮಾಧ್ವಪೀಠರಾಷ್ಟ್ರಪತಿ ರಾಮನಾಥ ಕೋವಿಂದ
Share This Article
Facebook Whatsapp Whatsapp Telegram

Cinema news

Kichcha Sudeep
ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ʻರಣ ಹದ್ದುʼ ತಂದ ಸಂಕಷ್ಟ – ಅರಣ್ಯಾಧಿಕಾರಿಗೆ ದೂರು
Cinema Districts Karnataka Latest Ramanagara Top Stories TV Shows
Romanchaka song release from the movie Landlord Ritanya Vijay
ಲ್ಯಾಂಡ್‌ಲಾರ್ಡ್ ಸಿನಿಮಾದ ರೋಮಾಂಚಕ ಸಾಂಗ್ ರಿಲೀಸ್
Cinema Latest Sandalwood
Mallamma Bigg Boss Kannada 12
ಬಿಗ್‌ಬಾಸ್ ಮನೆಗೆ ಮತ್ತೆ ಮರಳಿದ ಮಲ್ಲಮ್ಮ – ಧ್ರುವಂತ್‌ಗೆ ಶಾಕ್
Latest Top Stories TV Shows
Bigg Boss Rashika raghu
BBK 12 | ಫಿನಾಲೆ ವಾರಕ್ಕೆ ಕೊನೆಯ ಸ್ಪರ್ಧಿಯಾಗಿ ರಘು ಎಂಟ್ರಿ – ರಾಶಿಕಾ ಔಟ್
Cinema Districts Karnataka Latest Main Post TV Shows

You Might Also Like

SIDDARAMAIAH DK SHIVAKUMAR MALLIKARJUN KHARGE
Bengaluru City

ಸಿಎಂ-ಡಿಸಿಎಂ ನಡ್ವೆ ಕಾಂಪ್ರಮೈಸ್ ಥಿಯರಿ – ʻಕೈʼ ಹೈಕಮಾಂಡ್ ಧರ್ಮಸಂಕಟದಿಂದ ಪಾರಾಗುತ್ತಾ..?

Public TV
By Public TV
13 minutes ago
Trump Modi
Latest

ನಾವು ನಿಜವಾದ ಸ್ನೇಹಿತರು, ಮುಂದಿನ ವರ್ಷದ ಒಳಗಡೆ ಭಾರತಕ್ಕೆ ಬರಲಿದ್ದಾರೆ ಟ್ರಂಪ್‌: ಅಮೆರಿಕ

Public TV
By Public TV
21 minutes ago
DK Shivakumar 11
Bengaluru City

ಸಂಕ್ರಾಂತಿ ಮಾರನೇ ದಿನವೇ ಡಿಕೆಶಿ ಡೆಲ್ಲಿ ಟೂರ್ – ರಾಹುಲ್ ಭೇಟಿಗೆ ಸಮಯ ಕೇಳಿದ ಡಿಕೆಶಿ

Public TV
By Public TV
21 minutes ago
Ganga River
Latest

ಮಕರ ಸಂಕ್ರಾಂತಿ 2026: ಗಂಗೆ ಭಗಿರಥನಿಗೊಲಿದ ದಿನ – ಪವಿತ್ರ ಸ್ನಾನದಿಂದ ಕೋಟಿ ಪುಣ್ಯ!

Public TV
By Public TV
38 minutes ago
Artist creates a portrait of Prahlad Joshi using grains 1
Bagalkot

ಧವಸ-ಧಾನ್ಯ ಬಳಸಿ ಕಲಾವಿದನಿಂದ ಪ್ರಹ್ಲಾದ್‌ ಜೋಶಿ ಚಿತ್ರ ರಚನೆ

Public TV
By Public TV
1 hour ago
Bheemanna Khandre Eshwar Khandre
Bidar

ನಮ್ಮ ತಂದೆ ಆರೋಗ್ಯ ಸ್ಥಿತಿ ಗಂಭೀರವಾಗಿದೆ, ವೈದ್ಯರು ಸತತವಾಗಿ ಚಿಕಿತ್ಸೆ ನೀಡುತ್ತಿದ್ದಾರೆ: ಈಶ್ವರ್ ಖಂಡ್ರೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?