ಉಡುಪಿ: ಶ್ರೀಕೃಷ್ಣ ಮಠಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೇಟಿ ನೀಡಿ ಕಡೆಗೋಲು ಶ್ರೀಕೃಷ್ಣನ ವಿಶೇಷ ದರ್ಶನ ಪಡೆದರು.
ಕರಾವಳಿ ಪ್ರವಾಸದಲ್ಲಿರುವ ರಾಜ್ಯಪಾಲರು ಇಂದು ಉಡುಪಿ ಕೃಷ್ಣ ಮಠಕ್ಕೆ ಆಗಮಿಸಿದ್ದರು. ಈ ವೇಳೆ ಮಠದಲ್ಲೇ ಸ್ವಲ್ಪ ಸಮಯ ಸ್ವಾಮೀಜಿ ಹಾಗೂ ರಾಜ್ಯಪಾಲರು ಸಮಾಲೋಚನೆ ನಡೆಸಿದರು. ಈ ಸಂದರ್ಭದಲ್ಲಿ ರಾಜ್ಯಪಾಲರಿಗೆ ಪರ್ಯಾಯ ಅದಮಾರು ಮಠದಿಂದ ಗೌರವಿಸಲಾಯಿತು. ರಾಜ್ಯಪಾಲರು ಸ್ವಾಮೀಜಿಯನ್ನು ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಪರ್ಯಾಯ ಈಶಪ್ರೀಯ ತೀರ್ಥಶ್ರೀಪಾದರ ಭೇಟಿಯಾದರು. ಶಾಸಕ ರಘುಪತಿ ಭಟ್, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ನಂತರ ಕೊಲ್ಲೂರು ದೇವಸ್ಥಾನಕ್ಕೆ ಭೇಟಿ ನೀಡಿದ ರಾಜ್ಯಪಾಲರು ಮೂಕಾಂಬಿಕೆಯ ದರ್ಶನ ಪಡೆದರು. ದೇಗುಲದ ಪ್ರಧಾನ ಅರ್ಚಕರ ನೇತೃತ್ವದಲ್ಲಿ ದೇವಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಇದನ್ನೂ ಓದಿ: ಪೋಷಕರು 2 ಡೋಸ್ ಲಸಿಕೆ ಪಡೆಯದಿದ್ದರೆ ಮಕ್ಕಳು ಶಾಲೆಗೆ ಬರುವಂತಿಲ್ಲ: ಅಶೋಕ್
ಕೊಲ್ಲೂರು ಮೂಕಾಂಬಿಕಾ ದೇವಳ ವತಿಯಿಂದ ರಾಜ್ಯಪಾಲರಿಗೆ ಗೌರವ ಸಲ್ಲಿಸಲಾಯಿತು. ಬೈಂದೂರು ಶಾಸಕ ಸುಕುಮಾರ ಶೆಟ್ಟಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಅಲ್ಲಿಂದ ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರಕ್ಕೆ ರಾಜ್ಯಪಾಲರು ತೆರಳಿದರು. ಇದನ್ನೂ ಓದಿ: ಮಧ್ಯಾಹ್ನ ನಿದ್ದೆ ಮಾಡುವ ಸೊಸೆಗೆ ಗೂಸಾ ಕೊಟ್ಟ ಅತ್ತೆ, ಮಾವ