ಸಿದ್ದರಾಮಯ್ಯ ಸಾವರ್ಕರ್ ಕಾಲಿನ ಧೂಳಿಗೂ ಸಮವಲ್ಲ- ಸುನೀಲ್ ಕುಮಾರ್

Public TV
1 Min Read
collage siddaramahi

ಉಡುಪಿ: ಸಾವರ್ಕರ್ ಬ್ರಿಟಿಷರ ವಿರುದ್ಧ ಹೋರಾಡಿದವರು. ಸಿದ್ದರಾಮಯ್ಯ ಸಾವರ್ಕರ್ ಅವರ ಪಾದದ ಧೂಳಿಗೂ ಸಮವಲ್ಲ ಎಂದು ಬಿಜೆಪಿ ನಾಯಕ ಸುನೀಲ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.

ಉಡುಪಿ ಜಿಲ್ಲೆ ಕಾರ್ಕಳದಲ್ಲಿ ಮಾತನಾಡಿದ ಅವರು, ಮಹಾತ್ಮಾ ಗಾಂಧೀಜಿ ಹತ್ಯೆಗೆ ಸ್ಕೆಚ್ ಹಾಕಿದ್ದ ಸಾವರ್ಕರ್ ಗೆ ಕೇಂದ್ರ ಸರ್ಕಾರ ಭಾರತ ರತ್ನ ಕೊಡಲು ಮುಂದಾಗಿದೆ ಎಂದಿರುವ ಮಾಜಿ ಸಿಎಂ ಸಿದ್ದರಾಮಯ್ಯಗೆ ತಿರುಗೇಟು ನೀಡಿದ್ದಾರೆ. ಸಿದ್ದರಾಮಯ್ಯ ಸಾವರ್ಕರ್ ಬಗ್ಗೆ ಅಗೌರವದ ಮಾತನಾಡಿದ್ದಾರೆ. ಇವರು ಸಾವರ್ಕರ್ ನ ಕಾಲಿನ ಧೂಳಿಗೂ ಸಮವಲ್ಲ ಎಂದರು.

siddaramaiah 2 1

ದೇಶಾಭಿಮಾನಿಗಳಿಗೆ ಗೌರವ ಕೊಡುವ ಗುಣ ಕಾಂಗ್ರೆಸ್ ಅವರ ರಕ್ತದಲ್ಲೇ ಇಲ್ಲ. ನೂರಾರು ಹೋರಾಟಗಾರರಿಗೆ ಕಾಂಗ್ರೆಸ್ ಅಪಮಾನ ಮಾಡುತ್ತಲೇ ಬಂದಿದೆ. ಸಿದ್ದರಾಮಯ್ಯ ಇತಿಹಾಸ ತಿಳಿಯದ ಉಡಾಫೆ ಮಾತನಾಡುವ ವ್ಯಕ್ತಿ. ಈ ರೀತಿಯ ಹೇಳಿಕೆ ನೀಡಿರುವುದು ಸರಿಯಲ್ಲ. ವೀರ ಸಾವರ್ಕರ್ ಬಲಿದಾನ ಯುವ ಪೀಳಿಗೆಗೆ ಮಾರ್ಗದರ್ಶಕ. ಸಿದ್ದರಾಮಯ್ಯನವರು ತಮ್ಮ ಹೇಳಿಕೆ ಹಿಂದಕ್ಕೆ ಪಡೆಯಬೇಕು. ಈ ಕೂಡಲೇ ಕ್ಷಮೆ ಯಾಚಿಸಬೇಕು ಎಂದು ವಿಧಾನಸಭೆಯ ಮುಖ್ಯ ಸಚೇತಕ ಸುನೀಲ್ ಕುಮಾರ್ ಒತ್ತಾಯಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *