ಉಡುಪಿ: ಹುಲಿವೇಷಧಾರಿಗಳ ಟೆಂಪೋ ಪಲ್ಟಿಯಾಗಿ ಓರ್ವ ವೇಷಧಾರಿ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿರುವ ಘಟನೆ ಉಡುಪಿ ಸಂತೆಕಟ್ಟೆ ಸಮೀಪದ ನೇಜಾರಿನಲ್ಲಿ ನಡೆದಿದೆ.
ಘಟನೆಯಲ್ಲಿ ಸಾವನ್ನಪ್ಪಿದ ಹುಲಿವೇಷಧಾರಿಯನ್ನು 22 ವರ್ಷದ ಸುಮಂತ್ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಗಾಯಗೊಂಡ ಮೂವರು ವೇಷಧಾರಿಗಳನ್ನು ಹತ್ತಿರದ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಗಣೇಶ ಚತುರ್ಥಿ ಪ್ರಯುಕ್ತ ಹುಲಿವೇಷ ಹಾಕಿದ್ದ ತಂಡದಲ್ಲಿ ಸ್ಥಳೀಯ ಯುವಕರು ಮತ್ತು ಮಕ್ಕಳು ಕೂಡ ತಂಡದಲ್ಲಿದ್ದರು. ಈ ವೇಳೆ ನೇಜಾರು ಮಾರ್ಗದಲ್ಲಿ ಹೋಗುವಾಗ ಟೆಂಪೋ ಆಯತಪ್ಪಿ ಪಲ್ಟಿಯಾದ ಪರಿಣಾಮ ಈ ಘಟನೆ ಸಂಭವಿಸಿದೆ. ಈ ಸಂಬಂಧ ಮಲ್ಪೆ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.