Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಯುಗಾದಿ ವಿಶೇಷ – ಪಂಚಾಂಗ ಪಠಣ ಮಾಡೋದು ಯಾಕೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಯುಗಾದಿ ವಿಶೇಷ – ಪಂಚಾಂಗ ಪಠಣ ಮಾಡೋದು ಯಾಕೆ?

Latest

ಯುಗಾದಿ ವಿಶೇಷ – ಪಂಚಾಂಗ ಪಠಣ ಮಾಡೋದು ಯಾಕೆ?

Public TV
Last updated: March 28, 2025 11:31 am
Public TV
Share
2 Min Read
ugadi panchanga
SHARE

ಸಂಸ್ಕೃತದ ಯುಗ ಮತ್ತು ಆದಿ ಎಂಬ ಎರಡು ಪದಗಳಿಂದ ‘ಯುಗಾದಿ’ ಎಂಬ ಪದ ವ್ಯುತ್ಪತ್ತಿಯಾಗಿದೆ. ಇದರ ಅರ್ಥ ಹೊಸ ಯುಗದ ಆರಂಭ. ಬ್ರಹ್ಮ ದೇವನು ಈ ದಿನದಿಂದಲೇ ಸೃಷ್ಟಿಯ ಕಾರ್ಯ ಆರಂಭಿಸಿದ. ಬ್ರಹ್ಮನು (Brahma) ಜಗತ್ತನ್ನು ಚೈತ್ರಶುದ್ಧ ಪ್ರತಿಪತೆಯಂದು ಸೂರ್ಯೋದಯ ಕಾಲಕ್ಕೆ ಸೃಷ್ಟಿಸಿದ. ಅಂದೇ ಗ್ರಹ, ನಕ್ಷತ್ರ, ಮಾಸ, ಋತು, ವರ್ಷ, ವರ್ಷಾಧಿಪತಿಗಳನ್ನೂ ಸೃಷ್ಟಿಸಿ ಕಾಲಗಣನೆ ಆರಂಭಿಸಿದ. ರೋಮನ್ನರಿಗೆ ಜನವರಿಯ ಮೊದಲನೇ ದಿನವಿದ್ದಂತೆ, ಹಿಂದೂಗಳಿಗೆ ‘ಯುಗದ’ ಆದಿಯ ದಿನ ಮೊದಲ ದಿನ.

ಒಂದು ಯುಗಾದಿಯಿಂದ (Ugadi) ಮತ್ತೊಂದು ಯುಗಾದಿಗೆ ಭೂಮಿಯು ಸೂರ್ಯನ ಸುತ್ತ ಒಂದು ಸುತ್ತನ್ನು ಪೂರ್ಣಗೊಳಿಸುತ್ತದೆ. ಇದನ್ನು ವಿಜ್ಞಾನ ಕೂಡಾ ಒಪ್ಪಿಕೊಂಡಿದೆ. ನಮ್ಮ ಒಂದು ವರ್ಷವೆಂದರೆ ಬ್ರಹ್ಮನಿಗೆ ಒಂದು ದಿನ. ಈ ಕಾರಣಕ್ಕೆ ಹಿಂದೂಗಳು ಜನವರಿಗೆ ಹೊಸ ವರ್ಷವನ್ನು ಆಚರಿಸದೇ ಯುಗಾದಿಗೆ ಆಚರಿಸಿಕೊಳ್ಳುತ್ತಾರೆ. ಭಾರತದ ಹಣಕಾಸು ವರ್ಷ ಸಹ ಏಪ್ರಿಲ್‌ 1 ರಿಂದ ಆರಂಭವಾಗಿ ಮಾರ್ಚ್‌ 31ಕ್ಕೆ ಮುಕ್ತಾಯವಾಗುತ್ತದೆ. ಇದನ್ನೂ ಓದಿ: ಬ್ರಹ್ಮ ಜಗತ್ತನ್ನು ಸೃಷ್ಟಿಸಿದ ಮಂಗಳಕರ ದಿನ ಯುಗಾದಿ!

vishu kani

ಪಂಚಾಂಗ ಶ್ರವಣ (Ugadi Panchangam) ಮಾಡುವುದು ಯುಗಾದಿ ಹಬ್ಬದ ವಿಶೇಷ ಆಚರಣೆ. ಇಂದು ನಾವು ಪ್ರಯಾಣ ಮಾಡುವಾಗ ಗೂಗಲ್‌ ಮ್ಯಾಪ್‌ ನೋಡಿಕೊಂಡು ಪ್ರಯಾಣ ಮಾಡುತ್ತೇವೆ. ಮಳೆ ಇದೆಯೋ ಇಲ್ವೋ ಎಂಬುದನ್ನು ತಿಳಿಯಲು ಹವಾಮಾನ ವರದಿಯನ್ನು ನೋಡಿಕೊಳ್ಳುತ್ತೇವೆ. ನಾವು ತೆರಳುವ ಜಾಗದಲ್ಲಿ ಜೋರಾಗಿ ಮಳೆ ಬರುವ ಮುನ್ಸೂಚನೆ ಇದ್ದರೆ ಪ್ರಯಾಣವನ್ನು ರದ್ದು ಮಾಡುತ್ತೇವೆ. ಇದೇ ರೀತಿಯಾಗಿ ಮುಂದಿನ ನಮ್ಮ ಯೋಜನೆಗಳು ಯಾವ ದಿನ ಕೈಗೊಂಡರೆ ಯಶಸ್ಸು ಸಿಗುತ್ತದೆ? ಏನೇನು ಸಮಸ್ಯೆಗಳು ಎದುರಾಗಬಹುದು? ಮುಂದಿನ ಯುಗಾದಿಯವರೆಗೆ ಭವಿಷ್ಯ ಹೇಗಿರಲಿದೆ? ಎಂಬುದನ್ನು ಪಂಚಾಂಗದ ಮೂಲಕ ತಿಳಿದುಕೊಳ್ಳುತ್ತೇವೆ.

ಪಂಚಾಂಗದ ಪ್ರಕಾರ ಫಲಾಫಲಗಳನ್ನು, ಉಪಯುಕ್ತ ದಿನಗಳನ್ನೂ ತಿಳಿದುಕೊಂಡ ಬಳಿಕ ವ್ಯಾಪಾರ, ವ್ಯವಸಾಯ, ವ್ಯವಹಾರಗಳನ್ನು ಆರಂಭಿಸಿಕೊಳ್ಳಬಹುದು. ಯುಗಾದಿಯಂದು ಪಾಡ್ಯ ಬರುವಾಗ ಹೊಸಸಂವತ್ಸರದ ತಿಥಿ, ವಾರ, ನಕ್ಷತ್ರಾದಿಗಳು ಉದಯಿಸುತ್ತ ಆದ್ದರಿಂದ ಪಾಡ್ಯಮಿಯಂದು ಹಬ್ಬದ ಆಚರಣೆ, ಬಿದಿಗೆಯಂದು ಚಂದ್ರದರ್ಶನ ಮಾಡಲಾಗುತ್ತದೆ.

ಪಂಚಾಂಗದಲ್ಲಿ ಆ ವರ್ಷದ ಮಳೆ ಬೆಳೆಗಳ ಬಗ್ಗೆ, ಮಾಸಫಲಗಳ ಬಗ್ಗೆ, ರಾಶಿಫಲ ಇತ್ಯಾದಿಗಳ ಬಗ್ಗೆ ತಿಳಿಸಲಾಗಿರುತ್ತದೆ. ಹೀಗೆ ಈ ಎಲ್ಲವನ್ನೂ ಮುಂಚೆಯೇ ತಿಳಿದಿದ್ದಾಗ ಅದಕ್ಕನುಗುಣವಾಗಿ ವರ್ಷದ ವ್ಯವಹಾರ ವಹಿವಾಟುಗಳ ಯೋಜನೆ ರೂಪಿಸಿಕೊಳ್ಳಬಹುದು. ಇದನ್ನೂ ಓದಿ: ಮರೆಯದಂಥ ಸವಿಸವಿ ಗಳಿಗೆ ತಂದಿತು ʻಯುಗಾದಿʼ

ಯಾವ ತಿಥಿಯಲ್ಲಿ ಏನು ಮಾಡಬೇಕು? ಏನು ಮಾಡಬಾರದು? ಯಾವ ವಾರ, ನಕ್ಷತ್ರದಲ್ಲಿ ಏನು ಮಾಡಿದರೆ ಶುಭವಾಗುತ್ತದೆ? ಯಾರಿಗೆ ಯಾವ ಯೋಗವಿದೆ ಎಲ್ಲವೂ ವಿವರವಾಗಿರುತ್ತದೆ. ಇವೆಲ್ಲವನ್ನೂ ಸುತ್ತಲಿನ ಗ್ರಹಗಳು ಹಾಗೂ ನಕ್ಷತ್ರಗಳ ಆಧಾರದಲ್ಲಿಯೇ ಲೆಕ್ಕ ಹಾಕಲಾಗಿರುತ್ತದೆ. ಈ ಲೆಕ್ಕಾಚಾರದ ಆಧಾರದ ಮೇಲೆ ನಾವು ನಮ್ಮ ಮುಂದಿನ ಕೆಲಸಗಳನ್ನು ಮಾಡಲು ಯೋಜನೆ ರೂಪಿಸಿಕೊಳ್ಳಬಹುದು.

ಈ ದಿನ ಈ ಪಂಚಾಂಗ ಪಠಣ ಹಾಗೂ ಶ್ರವಣದಿಂದ ಸುಖ, ಐಶ್ವರ್ಯ, ಯಶಸ್ಸು ಹೆಚ್ಚುತ್ತದೆ ಎಂಬ ನಂಬಿಕೆಯಿದೆ. ಪಂಚಾಂಗ ಶ್ರವಣವು ಮಹಾಭಾರತ ಕಾಲದಿಂದಲೂ ಸಂಪ್ರದಾಯವಾಗಿ ನಡೆದು ಬಂದಿದೆ. ಈಗಲೂ ಹಲವು ದೇವಸ್ಥಾನಗಳಲ್ಲಿ ಯುಗಾದಿಯ ಬೆಳಗ್ಗೆ ಹಾಗೂ ಸಂಜೆ ಸಾಮೂಹಿಕವಾಗಿ ಪಂಚಾಂಗ ಪಠಣ ಕಾರ್ಯಕ್ರಮಗಳು ನಡೆಯುತ್ತವೆ.

TAGGED:hinduPanchangamugadiಪಂಚಾಂಗಯುಗಾದಿಹಿಂದೂ
Share This Article
Facebook Whatsapp Whatsapp Telegram

Cinema news

Rajath Kishan
ಬೆದರಿಕೆ, ನಿಂದನೆ ಆರೋಪ – ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR
Bengaluru City Cinema Districts Karnataka Latest Sandalwood Top Stories
colors kannada New serial rani
ರಾಣಿ – ಅಮ್ಮ ಮಗಳ ಭಾವುಕ ಪಯಣ..!
Cinema Latest Sandalwood Top Stories
Vijay trisha
ಡಿವೋರ್ಸ್ ಕೇಸ್ ಮಧ್ಯೆ ಒಂದೇ ಬಣ್ಣದ ಉಡುಗೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡ ವಿಜಯ್-ತ್ರಿಶಾ
Cinema Latest National Top Stories
Samantha Ruth Prabhu
ಶಿವಮೊಗ್ಗ | ಹೊಸನಗರದಲ್ಲಿ ಹೋಳಿಯಾಡಿದ ಸಮಂತಾ
Cinema Latest Shivamogga South cinema Top Stories

You Might Also Like

Train
Latest

ಟಿ20 ವಿಶ್ವಕಪ್‌ಗೆ ದೆಹಲಿಯಿಂದ ಅಹಮದಾಬಾದ್‌ಗೆ ವಿಶೇಷ ರೈಲು

Public TV
By Public TV
7 minutes ago
Iranian President Masoud Pezeshkian
Latest

ನೆರೆ ರಾಷ್ಟ್ರಗಳ ಮೇಲಿನ ದಾಳಿಗೆ ಕ್ಷಮೆಯಾಚಿಸುತ್ತೇನೆ: ಇರಾನ್‌ ಅಧ್ಯಕ್ಷ ಮಸೌದ್‌

Public TV
By Public TV
26 minutes ago
UP DCM Keshav Prasad Maurya
Latest

ಯುಪಿ ಡಿಸಿಎಂ ಕೇಶವಪ್ರಸಾದ್ ಹೆಲಿಕಾಪ್ಟರ್‌ನಲ್ಲಿ ತಾಂತ್ರಿಕ ಸಮಸ್ಯೆ – ಲಕ್ನೋದಲ್ಲಿ ತುರ್ತು ಭೂಸ್ಪರ್ಶ

Public TV
By Public TV
42 minutes ago
DK Shivakumar 11
Bengaluru City

ಸಿಎಂ ಬಜೆಟ್‌ ಮಂಡನೆ ಬೆನ್ನಲ್ಲೇ ದೆಹಲಿಗೆ ತೆರಳಲಿದ್ದಾರೆ ಡಿಕೆಶಿ

Public TV
By Public TV
42 minutes ago
UPSC Exam Public Hero Sannappas son Kiran Kamate is number 1 for Karnataka
Belgaum

ಯುಪಿಎಸ್‌ಸಿ ಪರೀಕ್ಷೆ| ಪಬ್ಲಿಕ್ ಹೀರೋ ಸಣ್ಣಪ್ಪ ಪುತ್ರ ರಾಜ್ಯಕ್ಕೆ ಮೊದಲ ಸ್ಥಾನ

Public TV
By Public TV
1 hour ago
siddaramaiah
Districts

ಹೈಕಮಾಂಡ್‌ ಅವಕಾಶ ಕೊಟ್ಟರೆ ಮತ್ತೆರಡು ಬಜೆಟ್‌ ಮಂಡನೆ: ಸಿದ್ದರಾಮಯ್ಯ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?