Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಚ್ಚಾ ತೈಲ ಬೆಲೆ ಏರಿಕೆ ಬೆನ್ನಲ್ಲೇ ಭಾರತಕ್ಕೆ ರಷ್ಯಾದಿಂದ ಭಾರೀ ಆಫರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕಚ್ಚಾ ತೈಲ ಬೆಲೆ ಏರಿಕೆ ಬೆನ್ನಲ್ಲೇ ಭಾರತಕ್ಕೆ ರಷ್ಯಾದಿಂದ ಭಾರೀ ಆಫರ್

Latest

ಕಚ್ಚಾ ತೈಲ ಬೆಲೆ ಏರಿಕೆ ಬೆನ್ನಲ್ಲೇ ಭಾರತಕ್ಕೆ ರಷ್ಯಾದಿಂದ ಭಾರೀ ಆಫರ್

Public TV
Last updated: March 7, 2022 4:09 pm
Public TV
Share
3 Min Read
crude oil well petrol
SHARE

ನವದೆಹಲಿ: ಉಕ್ರೇನ್ ವಿರುದ್ಧದ ಯುದ್ಧದಲ್ಲಿ ಯಾವುದೇ ನಿಲುವು ಪ್ರಕಟಿಸದೇ ತಟಸ್ಥ ಧೋರಣೆ ತೋರಿದ ಭಾರತಕ್ಕೆ ರಷ್ಯಾ ಭರ್ಜರಿ ಆಫರ್ ಪ್ರಕಟಿಸಿದೆ.

ಹೌದು. ರಷ್ಯಾ ದಾಳಿಯಿಂದ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಭಾರೀ ಏರಿಕೆ ಕಾಣುತ್ತಿದೆ. ಈ ಬೆನ್ನಲ್ಲೇ ಭಾರೀ ರಿಯಾಯಿತಿ ದರದಲ್ಲಿ ಭಾರತಕ್ಕೆ ಕಚ್ಚಾ ತೈಲ ನೀಡಲು ರಷ್ಯಾ ಮುಂದಾಗಿದೆ ಎಂದು ವರದಿಯಾಗಿದೆ.

Petrol pump e1632889380797

ಬ್ರೆಂಟ್ ಕಚ್ಚಾ ತೈಲ ದರಕ್ಕಿಂತ ಶೇ.25-27 ರಷ್ಟು ರಿಯಾಯಿತಿ ದರದಲ್ಲಿ ತೈಲ ನೀಡಲು ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ. ರಷ್ಯಾದ ಪ್ರತಿಷ್ಠಿತ ಕಚ್ಚಾ ತೈಲ ಕಂಪನಿಗಳಲ್ಲಿ ಒಂದಾದ ರೋಸ್ನೆಫ್ಟ್ ಆಯಿಲ್ ಕಂಪನಿಯೂ ಭಾರತಕ್ಕೆ ಬ್ರೆಂಟ್ ಕಚ್ಚಾ ತೈಲವನ್ನು ನೀಡಲು ಮುಂದಾಗಿದೆ.

ಕಳೆದ ಡಿಸೆಂಬರ್‌ನಲ್ಲಿ ಪುಟಿನ್ ಭಾರತಕ್ಕೆ ಬಂದಾಗ ರೋಸ್ನೆಫ್ಟ್ ಆಯಿಲ್ ಕಂಪನಿ ಹಾಗೂ ಭಾರತದ ತೈಲ ಕಂಪನಿಗಳು ಒಪ್ಪಂದವನ್ನು ಮಾಡಿಕೊಂಡಿತ್ತು. ಈ ಒಪ್ಪಂದದಲ್ಲಿ 2022ರ ಕೊನೆಯವರೆಗೆ ಭಾರತಕ್ಕೆ 2 ಮಿಲಿಯನ್ ಟನ್ ತೈಲವನ್ನು ನೊವೊರೊಸಿಸ್ಕ್ ಬಂದರಿನ ಮೂಲಕ ರಫ್ತು ಮಾಡಲು ಒಪ್ಪಿಕೊಂಡಿತ್ತು.

325702249 1 6 1

ರಷ್ಯಾದ ಆಫರ್ ಭಾರತಕ್ಕೆ ಇಷ್ಟವಾಗಿದ್ದರೂ ಹಣ ವ್ಯವಹಾರ ಮಾಡುವ ಪ್ರಶ್ನೆಗೆ ಉತ್ತರ ಸಿಕ್ಕಿಲ್ಲ. ರುಪಿ- ರೂಬೆಲ್ ಮೂಲಕ ವ್ಯವಹಾರ ನಡೆಸಬಹುದಾದರೂ ಇನ್ನೂ ಅಂತಿಮ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಮೂಲಗಳು ತಿಳಿಸಿವೆ.

ರಷ್ಯಾದಿಂದ ಭಾರತ ಕಚ್ಚಾ ತೈಲವನ್ನು ಆಮದು ಮಾಡುವ ಪ್ರಮಾಣ ಕಡಿಮೆ. ಶೇ.70 ರಷ್ಟು ತೈಲವನ್ನು ಒಪೆಕ್ ದೇಶಗಳಿಂದ ಭಾರತ ಆಮದು ಮಾಡಿಕೊಳ್ಳುತ್ತದೆ. ಇದನ್ನೂ ಓದಿ: ರಷ್ಯಾ, ಉಕ್ರೇನ್ ಯುದ್ಧ – 14 ವರ್ಷದ ಬಳಿಕ ಕಚ್ಚಾತೈಲ ಬೆಲೆ ಭಾರೀ ಏರಿಕೆ

petrol 13

ಈಗ ಯಾಕೆ ಕಷ್ಟ?:
ಉಕ್ರೇನ್ ವಿರುದ್ಧ ರಷ್ಯಾ ಯುದ್ಧ ಸಾರಿರುವ ಮಧ್ಯೆ, ಅಮೆರಿಕ, ಕೆನಡಾ, ಬ್ರಿಟನ್ ಮತ್ತು ಪಶ್ಚಿಮ ದೇಶಗಳು ಅಂತರಾಷ್ಟ್ರೀಯ ಹಣಕಾಸು ವ್ಯವಹಾರ ವಿನಿಮಯ ಸಂಸ್ಥೆ ಸ್ವಿಫ್ಟ್ (Society For Worldwide Interbank Financial Telecommunications) ನಿಂದ ರಷ್ಯಾವನ್ನು ದೂರವಿಟ್ಟಿದೆ. ಇದರಿಂದಾಗಿ ಡಾಲರ್ ಮೂಲಕ ತೈಲವನ್ನು ಖರೀದಿ ಮಾಡುವುದು ಕಷ್ಟವಾಗಿದೆ.

petrol 12

ಏನಿದು ಸ್ವಿಫ್ಟ್ ?
SWIFT ಇದು ಅಂತರಾಷ್ಟ್ರೀಯ ನಗದು ವ್ಯವಹಾರಗಳ ಸಂಸ್ಥೆಯಾಗಿದ್ದು, ವಿವಿಧ ದೇಶಗಳ ನಡುವೆ ವೇಗವಾಗಿ ನಗದು ವ್ಯವಹಾರ ನಡೆಯಲು ನೆರವಾಗುವಂತಹ ವ್ಯವಸ್ಥೆ ಸ್ವಿಫ್ಟ್‍ನಲ್ಲಿದೆ. 1973ರಲ್ಲಿ ಬೆಲ್ಜಿಯಂನಲ್ಲಿ ಆರಂಭವಾದ ಸ್ವಿಫ್ಟ್ ನೆಟ್‍ವರ್ಕನಲ್ಲಿ 200 ದೇಶಗಳ 11 ಸಾವಿರ ಬ್ಯಾಂಕುಗಳು ಪ್ರಸ್ತುತ ಕಾರ್ಯನಿರ್ವಹಿಸುತ್ತಿದೆ. ಸರ್ಕಾರಗಳು, ಸಂಸ್ಥೆಗಳ ಮಧ್ಯೆ ಲಕ್ಷ ಕೋಟಿ ಡಾಲರ್‌ಗಳ ವ್ಯವಹಾರ ನಡೆಯುತ್ತದೆ. ಇದನ್ನೂ ಓದಿ: Russia-Ukraine Crisis: ರಷ್ಯಾಗೆ ಮತ್ತೊಂದು ಶಾಕ್ – SWIFTನಿಂದ ರಷ್ಯಾವನ್ನು ದೂರವಿಡಲು ತೀರ್ಮಾನ

PETROL

ರಷ್ಯಾಗೆ ನಷ್ಟವೇನು?
ಸ್ವಿಫ್ಟ್‌ನ  ಒಟ್ಟು ವ್ಯವಹಾರದಲ್ಲಿ ರಷ್ಯಾ ಪಾಲು ಶೇ.1 ರಷ್ಟಿದ್ದು, ಸ್ವಿಫ್ಟ್ ನೆರವಿಲ್ಲದೇ ಅಂತರಾಷ್ಟ್ರೀಯ ಆರ್ಥಿಕ ವ್ಯವಹಾರ ಕಷ್ಟವಾಗಬಹುದಾಗಿದೆ. ಅಂತರಾಷ್ಟ್ರೀಯ ಆರ್ಥಿಕ ವ್ಯವಸ್ಥೆಯಲ್ಲಿ ರಷ್ಯಾ ಒಬ್ಬಂಟಿಯಾಗಲಿದೆ. ದಿಗ್ಬಂಧನ ತಡೆದುಕೊಳ್ಳಲು ರಷ್ಯಾ ಬಳಿ 600 ಬಿಲಿಯನ್ ಡಾಲರ್‍ಗಳಷ್ಟು ಅಂತರಾಷ್ಟ್ರೀಯ ಮೀಸಲು ನಿಧಿ ಇದೆ. ಈ ಮೀಸಲು ನಿಧಿಯನ್ನು ರಷ್ಯಾದ ಸೆಂಟ್ರಲ್ ಬ್ಯಾಂಕ್ ಬಳಸಿಕೊಳ್ಳದಂತೆ ಬ್ಯಾನ್ ಆಗಲಿದೆ. ಅಲ್ಲದೇ ಸ್ಥಳೀಯ ಕರೆನ್ಸಿಗಾಗಿ ಸೆಂಟ್ರಲ್ ಬ್ಯಾಂಕ್ ಬಳಿಯ ವಿದೇಶಿ ಆಸ್ತಿ ಮಾರಲಾಗುವುದಿಲ್ಲ. ವಿದೇಶಗಳಲ್ಲಿರುವ ರಷ್ಯಾದ ಮೀಸಲು ನಿಧಿ ಫ್ರೀಜ್ ಆಗಲಿದ್ದು, ರೂಬುಲ್ ಕರೆನ್ಸಿ ಮೌಲ್ಯ ಪತನಗೊಳ್ಳಲಿದೆ. ಆಗ ಇದರ ಬಳಕೆ ಕಷ್ಟವಾಗಬಹುದು. ಇದೆಲ್ಲದರ ಜೊತೆಗೆ ತೈಲ, ಅನಿಲ ಮಾರಾಟದಿಂದ ಬರುವ ಆದಾಯ ಗಣನೀಯವಾಗಿ ಕುಸಿಯಲಿದೆ. ರಷ್ಯಾದ ಆದಾಯದಲ್ಲಿ ತೈಲ, ಅನಿಲ ಮಾರಾಟದ ಪಾಲು ಶೇ.40 ರಷ್ಟಿದೆ. 2012ರಲ್ಲಿ ಸ್ವಿಫ್ಟ್‍ನಿಂದ ಇರಾನ್ ದೇಶವನ್ನು ಹೊರಗಿಡಲಾಗಿತ್ತು. ಇದರಿಂದ ಇರಾನ್ ಆರ್ಥಿಕವಾಗಿ ತುಂಬಾ ನಷ್ಟ ಅನುಭವಿಸಿತ್ತು. ಶೇಕಡಾ 50 ರಷ್ಟು ತೈಲಾದಾಯ, ಶೇಕಡಾ 30 ರಷ್ಟು ವಿದೇಶಿ ವ್ಯಾಪಾರ ಕಳೆದುಕೊಂಡಿತ್ತು.

TAGGED:indiarussiaUkraineಉಕ್ರೇನ್ಕಚ್ಚಾ ತೈಲಭಾರತರಷ್ಯಾ
Share This Article
Facebook Whatsapp Whatsapp Telegram

Cinema news

Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood

You Might Also Like

Rajnath Singh
Latest

ಈ ಬಾರಿಯ ಈಶ ಮಹಾಶಿವರಾತ್ರಿಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮುಖ್ಯ ಅತಿಥಿ

Public TV
By Public TV
18 minutes ago
Chikkamagaluru Two Youths Drown In Bhadra River
Chikkamagaluru

ಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವು

Public TV
By Public TV
29 minutes ago
HAL Techie Murder
Bengaluru City

ಬೆಂಗಳೂರಲ್ಲಿ ಪುತ್ರನಿಂದ ತಂದೆ-ತಾಯಿ ಕೊಲೆ ಕೇಸ್;‌ ಕೊಂದ ಮಗನಿಂದಲೇ ಅಂತ್ಯಸಂಸ್ಕಾರಕ್ಕೆ ಕೋರ್ಟ್ ಅವಕಾಶ

Public TV
By Public TV
30 minutes ago
Basanagouda Patil Yatnal
Bengaluru City

ಚುನಾವಣೆಯಲ್ಲಿ ಅಕ್ರಮ ಆರೋಪ – ಯತ್ನಾಳ್ ವಿರುದ್ಧದ ಅರ್ಜಿ ವಜಾಗೊಳಿಸಿದ ಸುಪ್ರೀಂ

Public TV
By Public TV
2 hours ago
Hampi Utsava
Bellary

ಹಂಪಿ ಉತ್ಸವದಲ್ಲಿ ಫಲಪುಷ್ಪ ಪ್ರದರ್ಶನ – ಹೂವಲ್ಲೇ ವಿಜಯನಗರ ಸಾಮ್ರಾಜ್ಯದ ಗತವೈಭವ ಸೃಷ್ಟಿ

Public TV
By Public TV
2 hours ago
zameer ahmed students
Bellary

ಸ್ವಂತ ಖರ್ಚಿನಲ್ಲಿ ಸರ್ಕಾರಿ ಶಾಲಾ ಮಕ್ಕಳನ್ನ ಹೆಲಿಕಾಪ್ಟರ್‌ನಲ್ಲಿ ಸುತ್ತಾಡಿಸಿದ ಸಚಿವ ಜಮೀರ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?