ನವೀನ್ ದೇಹ ತರುವ ಬಗ್ಗೆ ಮಾತುಕತೆ ನಡೀತಿದೆ: ಬೊಮ್ಮಾಯಿ

Public TV
1 Min Read
basavaraj bommai 3

ಬೆಂಗಳೂರು: ಯುಕ್ರೇನ್‍ನಲ್ಲಿರುವ ಭಾರತೀಯರ ಸ್ಥಳಾಂತರ ಅಂತಿಮ ಹಂತಕ್ಕೆ ಬಂದಿದೆ. ನವೀನ್ ದೇಹ ತರುವ ಬಗ್ಗೆ ಮಾತುಕತೆ ನಡೀತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಕ್ರೇನ್‍ನಲ್ಲಿ ಬಾಂಬಿಂಗ್ ಇನ್ನೂ ನಡೀತಿದೆ. ದಾಳಿ ನಿಂತ ನಂತರ ದೇಹ ತರುವ ಬಗ್ಗೆ ಕ್ರಮ ಕೈಗೊಳ್ಳುತ್ತೇವೆ. ಉಕ್ರೇನ್‍ನಲ್ಲಿ ಉಳಿದವರಿಗೂ ಬೇರೆ ಬೇರೆ ರೀತಿಯಲ್ಲಿ ಸಹಾಯ ಮಾಡಲು ಭಾರತ ಮುಂದಾಗಿದೆ ಎಂದು ತಿಳಿಸಿದರು.

NAVEEN

ರಾಜ್ಯದಲ್ಲಿ ಅವಧಿಪೂರ್ವ ಚುನಾವಣೆ ಚರ್ಚೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಅವಧಿಪೂರ್ವ ಚುನಾವಣೆ ಚರ್ಚೆ ಮಾಧ್ಯಮಗಳಲ್ಲಿ ನಡೀತಿದೆ. ನಮ್ಮ  ಪಕ್ಷದಲ್ಲಿ ಅವಧಿಪೂರ್ವ ಚುನಾವಣೆ ಬಗ್ಗೆ ಚರ್ಚೆ ನಡೀತಿಲ್ಲ. ಯಾವುದೇ ಹಂತದಲ್ಲೂ, ಎಲ್ಲೂ ಕೂಡಾ ಪಕ್ಷದಲ್ಲಿ ಚರ್ಚೆ ನಡೀತಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ:  ದೆಹಲಿ ಡಿಸಿಪಿ ಕಾರಿಗೆ ಡಿಕ್ಕಿ ಹೊಡೆದಿದ್ದ Paytm ಸಿಇಒ – ಜಾಮೀನಿನ ಮೇಲೆ ಬಿಡುಗಡೆ

ದೆಹಲಿಗೆ ಹೋಗುವ ವಿಚಾರವಾಗಿ ಮಾತನಾಡಿ, ವರಿಷ್ಠರು ಇನ್ನೂ ಸೂಚನೆ ಕೊಟ್ಟಿಲ್ಲ. ವರಿಷ್ಠರ ಸೂಚನೆ ಕೊಟ್ಟ ಮೇಲೆ ದೆಹಲಿಗೆ ಹೋಗುತ್ತೇನೆ. ವರಿಷ್ಠರು ಯಾವಾಗ ಹೇಳ್ತಾರೋ ಆಗ ಸಚಿವ ಸಂಪುಟ ಪುನಾರಚನೆ ಮಾಡುತ್ತೇವೆ ಎಂದು ಮಾಹಿತಿ ನೀಡಿದರು.

web bjp logo 1538503012658

ನಮ್ಮ ಪಕ್ಷ ಬಿಟ್ಟು ಯಾರೂ ಹೋಗಲ್ಲ. ಇನ್ನೊಂದು ಪಕ್ಷಕ್ಕೆ ಯಾರೂ ನಮ್ಮಿಂದ ಹೋಗಲ್ಲ. ಬೇರೆ ಪಕ್ಷದಿಂದ ಬರುವವರ ಬಗ್ಗೆ ಕಾದು ನೋಡಿ ಎಂದು ಕಾಂಗ್ರೆಸ್, ಜೆಡಿಎಸ್‍ನಿಂದ ಬರುವವರ ಬಗ್ಗೆ ಸುಳಿವು ನೀಡಿದರು. ಇದೇ 30, 31 ರಂದು ರಾಜ್ಯ ಬಿಜೆಪಿಯ ಕಾರ್ಯಕಾರಿಣಿ ಸಭೆ ಇದೆ. ಕಾರ್ಯಕಾರಿಣಿ ಸಭೆಯಲ್ಲಿ ರಾಜ್ಯ ಪ್ರವಾಸ ಸೇರಿ ಎಲ್ಲ ವಿಚಾರಗಳು ಚರ್ಚೆ ಆಗುತ್ತವೆ ಎಂದು ತಿಳಿಸಿದರು. ಇದನ್ನೂ ಓದಿ: ಉಕ್ರೇನ್‍ಗೆ 200 ಮಿಲಿಯನ್ ಡಾಲರ್ ಆರ್ಥಿಕ ನೆರವು ನೀಡಿದ ಅಮೆರಿಕ

Share This Article
Leave a Comment

Leave a Reply

Your email address will not be published. Required fields are marked *