Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಮಿತ್ ಶಾ ಅಪೇಕ್ಷೆ ನಾನು ಚುನಾವಣೆಯಲ್ಲಿ ಸ್ಪರ್ಧಿಸೋದೆ ಆಗಿತ್ತು: ಈಶ್ವರಪ್ಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಅಮಿತ್ ಶಾ ಅಪೇಕ್ಷೆ ನಾನು ಚುನಾವಣೆಯಲ್ಲಿ ಸ್ಪರ್ಧಿಸೋದೆ ಆಗಿತ್ತು: ಈಶ್ವರಪ್ಪ

Districts

ಅಮಿತ್ ಶಾ ಅಪೇಕ್ಷೆ ನಾನು ಚುನಾವಣೆಯಲ್ಲಿ ಸ್ಪರ್ಧಿಸೋದೆ ಆಗಿತ್ತು: ಈಶ್ವರಪ್ಪ

Public TV
Last updated: April 4, 2024 4:14 pm
Public TV
Share
3 Min Read
KSEshwarappa
SHARE

ಶಿವಮೊಗ್ಗ: ಅಮಿತ್ ಶಾ (Amit Shah) ಅವರ ಅಪೇಕ್ಷೆ ನಾನು ಚುನಾವಣೆಗೆ (Lok Sabha Election 2024) ಸ್ಪರ್ಧಿಸೋದೆ ಆಗಿತ್ತು ಎಂದು ಬಿಜೆಪಿ (BJP) ಬಂಡಾಯ ಅಭ್ಯರ್ಥಿ ಕೆ.ಎಸ್ ಈಶ್ವರಪ್ಪ (K.S Eshwarappa) ಹೇಳಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಂತಹ ದೊಡ್ಡ ಮನುಷ್ಯರು ದೆಹಲಿಗೆ ಕರೆದಾಗ ಗೌರವ ಕೊಟ್ಟು ಹೋಗಿದ್ದೆ. ಬಿಜೆಪಿಯ ಸಂಘಟನಾ ಕಾರ್ಯದರ್ಶಿ ರಾಜೇಶ್, ಅಮಿತ್ ಶಾ ಮನೆಗೆ ಹೋಗಲು ಹೇಳಿದ್ದರು. ಅಮಿತ್ ಶಾ ಮನೆಯಲ್ಲಿ ಇರಲಿಲ್ಲ. ಅವರು ಭೇಟಿ ಮಾಡುವ ಅವಶ್ಯಕತೆ ಇಲ್ಲ ಎಂದು ತಿಳಿಸಿದರು. ಬಳಿಕ ದೆಹಲಿಯಿಂದ ವಾಪಸ್ ಹೋಗೋದಾ ಎಂದು ಕೇಳಿದೆ. ಹೌದು ವಾಪಸ್ ಹೋಗು ಎಂದರು. ಅವರ ಅಭಿಪ್ರಾಯ ನಾನು ಬಂದು ಚುನಾವಣೆಗೆ ಸ್ಪರ್ಧಿಸುವುದೇ ಆಗಿತ್ತು. ಅದಕ್ಕೆ ನನ್ನನ್ನು ಅವರು ಭೇಟಿಯಾಗಲಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಕಿಡ್ನಾಪ್ ಉದ್ಯಮಕ್ಕೆ ಹೆಸರಾದವ್ರು ರಾಜ್ಯದಲ್ಲಿ ರಸ್ತೆ ನಿರ್ಮಿಸಲು ಬಿಡ್ಲಿಲ್ಲ- RJD ವಿರುದ್ಧ ಮೋದಿ ವಾಗ್ದಾಳಿ

KSEshwarappa

ಕೇಂದ್ರದಲ್ಲಿ ಕುಟುಂಬ ರಾಜಕಾರಣ ಕಿತ್ತು ಒಗೆಯಬೇಕು ಅಂತಿದ್ದಾರೆ. ರಾಜ್ಯದಲ್ಲಿ ಕುಟುಂಬ ರಾಜಕಾರಣ ಬೆಳೆಯುತ್ತಿದೆ. ಕುಟುಂಬ ರಾಜಕಾರಣ ಕಿತ್ತೊಗೆಯಬೇಕು. ಅನೇಕ ಹಿಂದುತ್ವ ನಾಯಕರನ್ನು ಮೂಲೆಗುಂಪು ಮಾಡುತ್ತಿದ್ದಾರೆ. ಈ ಎಲ್ಲಾ ಅಂಶಗಳನ್ನು ಈ ಹಿಂದೆಯೇ ಅವರ ಜೊತೆ ಪ್ರಸ್ತಾಪ ಮಾಡಿದ್ದೆ. ನಾನು ಎಲ್ಲಾ ಅಂಶಗಳನ್ನು ಅವರ ಜೊತೆ ಚರ್ಚೆ ಮಾಡುವವನಿದ್ದೆ. ನನ್ನ ಪ್ರಶ್ನೆಗಳಿಗೆ ಅವರ ಬಳಿ ಉತ್ತರ ಇರಲಿಲ್ಲ. ಹೀಗಾಗಿಯೇ ಅವರು ನನ್ನ ಮನವೊಲಿಸಲು ಸಾಧ್ಯ ಆಗುತ್ತಿರಲಿಲ್ಲ ಎಂದು ಅವರು ಹೇಳಿದ್ದಾರೆ.

ನಾನು ನನ್ನ ನಿರ್ಧಾರದಂತೆ, ಕಾರ್ಯಕರ್ತರು ಬೆಂಬಲಿಗರ ಅಪೇಕ್ಷೆಯಂತೆ ಚುನಾವಣೆಗೆ ಸ್ಪರ್ಧೆ ಮಾಡುತ್ತೇನೆ. ಇವನು ಚುನಾವಣೆಗೆ ನಿಲ್ಲೋದೇ ಸೂಕ್ತ ಎಂದು ಅವರಿಗೆ ಅನ್ನಿಸಿದೆ. ಅವರ ಅಪೇಕ್ಷೆಯಂತೆ ಚುನಾವಣೆಗೆ ಸ್ಪರ್ಧೆ ಮಾಡುತ್ತೇನೆ. ಅಮಿತ್ ಶಾ ಕರೆದಾಗ ಏನು ಕೇಳ್ತಾರೆ? ಏನು ಉತ್ತರ ಕೊಡಬೇಕು ಎಂದು ತಯಾರಿ ಆಗಿದ್ದೆ. ಅಮಿತ್ ಶಾ ತುಂಬಾ ಚಾಣಕ್ಷ ನಿರ್ಧಾರ ಕೈಗೊಂಡಿದ್ದಾರೆ. ಅವರ ನಿರ್ಧಾರ ಸ್ವಾಗತಿಸುತ್ತೇನೆ. ಅವರ ನಿರ್ಧಾರ ಅಭಿನಂದಿಸುತ್ತೇನೆ ಎಂದಿದ್ದಾರೆ.

Amith

ಜನರು ಇಡೀ ರಾಜ್ಯದಿಂದ ನಾಮಪತ್ರ ವಾಪಸ್ ತೆಗೆದುಕೊಳ್ಳಬೇಡಿ ಎಂದು ಕರೆ ಮಾಡ್ತಿದ್ದಾರೆ. ಹಿರಿಯರು ಹೇಳಿದ್ರೆ ವಾಪಸ್ ಪಡೆಯುತ್ತಾರೆ ಎನ್ನುವ ಅನುಮಾನ ಕಾರ್ಯಕರ್ತರದ್ದು. ಭಗವಂತನ ನಿರ್ಣಯ ಸಹ ನಾನು ಚುನಾವಣೆಗೆ ಸ್ಪರ್ಧೆ ಮಾಡಬೇಕು ಎಂಬುದೇ ಇದೆ ಎನಿಸುತ್ತದೆ. ಇದಕ್ಕಾಗಿ ನಾನು ಭಗವಂತನಿಗೆ ನಮಸ್ಕರಿಸುತ್ತೇನೆ ಎಂದಿದ್ದಾರೆ.

ವಿಜಯೇಂದ್ರ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಬಿವೈವಿ ಷಡ್ಯಂತ್ರ ರಾಜಕಾರಣ ಮಾಡುತ್ತಿದ್ದಾರೆ. ಅವರ ಅಣ್ಣ ಸೋಲುವ ಭೀತಿ ಕಾಡುತ್ತಿದೆ. ಹೀಗಾಗಿಯೇ ಕಾರ್ಯಕರ್ತರಲ್ಲಿ ಗೊಂದಲ ಉಂಟು ಮಾಡುತ್ತಿದ್ದಾರೆ. ಮುಂದೆ ಯಾರು ಮನವೊಲಿಸುವ ಪ್ರಯತ್ನ ಮಾಡಲ್ಲ. ವಿಜಯೇಂದ್ರ ಪದೇ ಪದೇ ಮನವೊಲಿಸುತ್ತಾರೆ ಎಂದರೆ, ನಾನು ಬೇರೆ ಭಾಷೆಯಲ್ಲಿ ಹೇಳಬೇಕಾಗುತ್ತದೆ ಎಂದು ಅವರು ನೇರ ಎಚ್ಚರಿಕೆ ನೀಡಿದ್ದಾರೆ.

ರಾಜೇಶ್ ಹಾಗೂ ರಾಜ್ಯ ಬಿಜೆಪಿ ಉಸ್ತುವಾರಿ ರಾಧ ಮೋಹನ್ ದಾಸ್ ಅಗರ್ವಾಲ್ ನಮ್ಮ ಮನೆಗೆ ಬಂದಿದ್ದರು. ಅವರಿಗೆ ನನ್ನ ಎಲ್ಲಾ ಸಮಸ್ಯೆ ತಿಳಿಸಿದೆ. ನನಗೆ ಚುನಾವಣೆಗೆ ಸ್ಪರ್ಧೆ ಮಾಡಬೇಡಿ ಎಂದರು. ನಾನು ಪಕ್ಷ ಶುದ್ಧೀಕರಣಕ್ಕಾಗಿ ಸ್ಪರ್ಧೆ ಮಾಡುತ್ತೇನೆ. ಯತ್ನಾಳ್ ನನ್ನ ಬೇಡಿಕೆ ಸರಿ ಇದೆ ಎಂದಿದ್ದು, ಅವರೆಲ್ಲಾ ಅಪೇಕ್ಷೆಯಂತೆ ಸ್ಪರ್ಧೆ ಮಾಡಿ ಗೆಲ್ಲುತ್ತೇನೆ ಎಂದಿದ್ದಾರೆ.

ಕಾಂಗ್ರೆಸ್‍ನಿಂದ ಕಣಕ್ಕಿಳಿದ ಗೀತಾ ಶಿವರಾಜ್‍ಕುಮಾರ್ ನನ್ನ ಸಹೋದರಿ ಇದ್ದ ಹಾಗೆ. ಅವರ ಬಗ್ಗೆ ಯಾವುದೇ ವಿರೋಧವಿಲ್ಲ. ಯಡಿಯೂರಪ್ಪ ಹಾಗೂ ಅವರ ಮಕ್ಕಳು ಹೊಂದಾಣಿಕೆ ರಾಜಕಾರಣ ಮಾಡುತ್ತಾರೆ. ಈ ಬಾರಿಯೂ ಹೊಂದಾಣಿಕೆ ರಾಜಕಾರಣ ಮಾಡಿಕೊಂಡಿದ್ದಾರೆ. ಈ ಹೊಂದಾಣಿಕೆ ರಾಜಕಾರಣ ಕೊನೆಯಾಗಬೇಕು. ನನಗೆ ಮತದಾರರೇ ಸ್ಟಾರ್ ಪ್ರಚಾರಕರು ಎಂದಿದ್ದಾರೆ.

ಮೋದಿ ಭಾವಚಿತ್ರ ಬಳಕೆ ವಿಚಾರವಾಗಿ, ಮೋದಿ ಏನು ಅವರಪ್ಪನ ಮನೆ ಆಸ್ತಿನಾ? ಮೋದಿ ವಿಶ್ವನಾಯಕ, ನನ್ನ ಎದೆ ಬಗೆದರೆ ಮೋದಿ ಕಾಣ್ತಾರೆ. ಅವರ ಎದೆ ಬಗೆದರೆ ಯಾರು ಕಾಣ್ತಾರೆ? ನಾನು ಗೆದ್ದ ನಂತರ ಮೋದಿಯವರಿಗೆ ಕೈ ಎತ್ತುವವನೇ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಸಿಎಂ ಸ್ಥಾನದಿಂದ ಕೇಜ್ರಿವಾಲ್ ಕೆಳಗಿಳಿಸುವಂತೆ ಕೋರಿ ಸಲ್ಲಿಸಿದ್ದ ಪಿಐಎಲ್ ವಜಾ

TAGGED:2024 ಲೋಕಸಭಾ ಚುನಾವಣೆAmit Shahbjpk s eshwarappaLok Sabha Election 2024ಕೆ.ಎಸ್.ಈಶ್ವರಪ್ಪಬಿಜೆಪಿಶಿವಮೊಗ್ಗ
Share This Article
Facebook Whatsapp Whatsapp Telegram

Cinema news

dhanush bigg boss
ಕೊನೆಯ ಕ್ಯಾಪ್ಟನ್ಸಿ ಆಟದಲ್ಲಿ ಮೋಸ ಮಾಡಿದ್ರಾ ಧನುಷ್‌? – ಯಾರಾಗ್ತಾರೆ ಮನೆಯ ಕ್ಯಾಪ್ಟನ್?
Cinema Latest Top Stories TV Shows
RAM CHARAN
ರಂಗಸ್ಥಳಂ ಬಳಿಕ ಒಂದಾಗ್ತಿರೋ ಸೂಪರ್ ಹಿಟ್ ಕಾಂಬಿನೇಷನ್..!
Latest South cinema Top Stories
rashmika mandanna 6
ರಶ್ಮಿಕಾ ಮೇಲೆ ಮತ್ತೆ ಕನ್ನಡ ಫ್ಯಾನ್ಸ್ ಗರಂ
Cinema Latest Sandalwood
Yash
ಹೊಸ ವರ್ಷಕ್ಕೆ ಯಶ್‌ ವಿಶ್‌ – ಈ ಬಾರಿ ಫ್ಯಾನ್ಸ್‌ ಜೊತೆ ಬರ್ತ್‌ಡೇ ಆಚರಿಸಿಕೊಳ್ತಾರಾ?
Cinema Latest Sandalwood Top Stories

You Might Also Like

PM Modi In Mangaluru
Districts

ಫೆ.23ಕ್ಕೆ ಆದಿಚುಂಚನಗಿರಿಗೆ ಪ್ರಧಾನಿ ಮೋದಿ ಭೇಟಿ

Public TV
By Public TV
1 hour ago
Indian Student Germany
Latest

ಜರ್ಮನಿಯ ಮನೆಯಲ್ಲಿ ಬೆಂಕಿ ಅವಘಡ; ಹೊಸ ವರ್ಷದಂದೇ ಭಾರತೀಯ ವಿದ್ಯಾರ್ಥಿ ಸಾವು

Public TV
By Public TV
1 hour ago
Dharmasthala
Dakshina Kannada

ಬುರುಡೆ ಕೇಸ್‌ಗೆ ಧರ್ಮಸ್ಥಳ ಎಂಟ್ರಿ – SIT ವರದಿ ವಿಚಾರಣೆಗೆ ಪ್ರತಿವಾದಿಯಾಗಿಸಲು ಅರ್ಜಿ, ನಾಳೆ ಕೋರ್ಟ್‌ನಲ್ಲಿ ನಿರ್ಧಾರ

Public TV
By Public TV
2 hours ago
DOCTOR
Crime

ಮದುವೆ ಆಗ್ತೀನಿ ಅಂತ ನಂಬಿಸಿ ನರ್ಸಿಂಗ್‌ ವಿದ್ಯಾರ್ಥಿನಿ ಮೇಲೆ ಸರ್ಕಾರಿ ವೈದ್ಯನಿಂದ ಅತ್ಯಾಚಾರ

Public TV
By Public TV
2 hours ago
pm modi suresh kumar
Bengaluru City

ಬೆಂಗಳೂರಿಂದ ಕನ್ಯಾಕುಮಾರಿವರೆಗೆ 702 ಕಿಮೀ ಸೈಕಲ್‌ ತುಳಿದ ಶಾಸಕ ಸುರೇಶ್‌ ಕುಮಾರ್‌; ಮೋದಿ ಮೆಚ್ಚುಗೆ

Public TV
By Public TV
3 hours ago
Ballary Banner Riot
Bellary

ಬ್ಯಾನರ್ ಗಲಾಟೆ – ಶಾಸಕ ಜನಾರ್ದನ ರೆಡ್ಡಿ, ಶ್ರೀರಾಮುಲು ಸೇರಿ 11 ಜನರ ವಿರುದ್ಧ FIR

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?