ಕುಕ್ಕರ್ ಬಾಂಬ್ ಆತಂಕದ ನಡುವೆ ಮಂಗ್ಳೂರಿನ ಬಸ್ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್ ಪತ್ತೆ

Public TV
1 Min Read
MANGALURU KSRTC BUS STAND BAG

ಮಂಗಳೂರು: ಕಳೆದೆರಡು ದಿನಗಳ ಹಿಂದೆ ನಗರದಲ್ಲಿ ಕುಕ್ಕರ್ ಬಾಂಬ್ ಸ್ಫೋಟದ ಬೆನ್ನಲ್ಲೇ ಇಂದು ಬಿಜೈನಲ್ಲಿರುವ ಕೆಎಸ್‍ಆರ್‌ಟಿಸಿ (KSRTC) ಬಸ್ ನಿಲ್ದಾಣದಲ್ಲಿ (Bus Stand) ಅನುಮಾನಾಸ್ಪದ ಬ್ಯಾಗ್‍ವೊಂದು (Bag) ಆತಂಕ ಸೃಷ್ಟಿಸಿದ ಘಟನೆ ನಡೆದಿದೆ.

Mangaluru 1

ಬಿಜೈನಲ್ಲಿರುವ ಕೆಎಸ್‍ಆರ್‌ಟಿಸಿ ಬಸ್ ನಿಲ್ದಾಣದ ಬಳಿ ವಾರಸುದಾರರಿಲ್ಲದ ಬ್ಯಾಗ್ ಒಂದು ಇರುವ ಬಗ್ಗೆ ಸ್ಥಳೀಯರು ಮಾಹಿತಿ ನೀಡುತ್ತಿದ್ದಂತೆ ಕೂಡಲೇ ಸ್ಥಳಕ್ಕೆ ಬಾಂಬ್ ಸ್ಕ್ವಾಡ್, ಶ್ವಾನದಳ ಆಗಮಿಸಿ ಪರಿಶೀಲನೆ ನಡೆಸಿತು. ಈ ವೇಳೆ ಬ್ಯಾಗ್‍ನಲ್ಲಿ ಯಾವುದೇ ಸ್ಫೋಟಕ ವಸ್ತುಗಳ ಪತ್ತೆಯಾಗಲಿಲ್ಲ. ಬಳಿಕ ಬ್ಯಾಗ್‍ನ ವಾರಸುದಾರರು ಪತ್ತೆಯಾಗಿದ್ದು, ಬಸ್ ಪ್ರಯಾಣಿಕರೊಬ್ಬರು ನಿಲ್ದಾಣದಲ್ಲಿ ಇಟ್ಟು ಹೋಗಿದ್ದರು ಎಂದು ತಿಳಿದಿದೆ. ಈ ವಿಷಯ ತಿಳಿಯುತ್ತಿದ್ದಂತೆ ಬಸ್ ನಿಲ್ದಾಣದಲ್ಲಿದ್ದವರು ನಿರಾಳರಾದರು. ಇದನ್ನೂ ಓದಿ: ಕುಕ್ಕರ್ ಬಾಂಬ್ ಬ್ಲಾಸ್ಟ್- ಜಾಗತಿಕ ಉಗ್ರ ಸಂಘಟನೆಯಿಂದ ಪ್ರಭಾವಿತನಾಗಿದ್ದ ಶಾರೀಕ್: ಅಲೋಕ್‌ಕುಮಾರ್

ನ.19 ರಂದು ಸಂಜೆ ಮಂಗಳೂರಿನ ಪಂಪ್‍ವೆಲ್‍ನಿಂದ ನಾಗುರಿ ಕಡೆ ಚಲಿಸುತ್ತಿದ್ದ ಆಟೋ ಒಂದರ ಒಳಗಿಂದ ಇದ್ದಕ್ಕಿದ್ದ ಹಾಗೇ ನಿಗೂಢ ಸ್ಫೋಟವಾಗಿತ್ತು. ಆ ಬಳಿಕ ಪರಿಶೀಲನೆ ನಡೆಸಿದ ವೇಳೆ ಅದು ಕುಕ್ಕರ್ ಬಾಂಬ್ ಸ್ಫೋಟವಾಗಿರುವುದು ಪತ್ತೆಯಾಗಿತ್ತು. ಈಗಾಗಲೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ತೀರ್ಥಹಳ್ಳಿಯ ಶಾರೀಕ್ ಎಂಬಾತ ಪೊಲೀಸ್ ವಶದಲ್ಲಿದ್ದಾನೆ. ಇದನ್ನೂ ಓದಿ: ಗ್ರಾಮ ದೈವಗಳೇ ನಮ್ಮ ಊರನ್ನು ಕಾಪಾಡಿವೆ- ಕುಕ್ಕರ್ ಬ್ಲಾಸ್ಟ್ ಆದ ಆಟೋ ಚಾಲಕನ ಸಹೋದರನ ಮಾತು

ಇದೀಗ ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಫೋಟದ ಬಳಿಕ ಉಗ್ರರ ಕರಿಛಾಯೆ ಆವರಿಸಿದೆ. ಈಗಾಗಲೇ ಜಿಲ್ಲೆಯಾದ್ಯಂತ ಪೊಲೀಸರು ಹೈ ಅಲರ್ಟ್ ಘೋಷಿಸಿದ್ದಾರೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *