ಮೈಸೂರು: ಮೈಸೂರಿನ (Mysuru) ಪ್ರತಿಷ್ಠಿತ ಖಾಸಗಿ ಆಸ್ಪತ್ರೆಗೆ (Hospital) ಬೀಗ ಹಾಕಲು ನ್ಯಾಯಾಲಯ (Court) ಆದೇಶಿಸಿದೆ. ಆಸ್ಪತ್ರೆ ವೈದ್ಯನ (Doctor) ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸುವಂತೆ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಗೋಕುಲಂನಲ್ಲಿರುವ ಖಾಸಗಿ ಆಸ್ಪತ್ರೆಗೆ ಬೀಗ ಹಾಕಿ ವೈದ್ಯ ಡಾ.ಚಂದ್ರಶೇಖರ್ ವಿರುದ್ಧ ಪ್ರಕರಣ ದಾಖಲಿಸುವಂತೆ ಸೂಚಿಸಲಾಗಿದ್ದು, ತಕ್ಷಣ ಆಸ್ಪತ್ರೆಯಲ್ಲಿರುವ ರೋಗಿಗಳನ್ನ ಸ್ಥಳಾಂತರಿಸುವಂತೆ ಕೆಪಿಎಂಇ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ನೋಡೆಲ್ ಅಧಿಕಾರಿಗಳು ಜಂಟಿಯಾಗಿ ಆದೇಶಿಸಿದ್ದಾರೆ. ಮೈಸೂರಿನ ರವಿಗೌಡ ಎಂಬವರು ಆಸ್ಪತ್ರೆ ವಿರುದ್ಧ ದೂರು ದಾಖಲಿಸಿದ್ದರು. ಇದನ್ನೂ ಓದಿ: ಸೋಮವಾರದಿಂದ ಟಫ್ ರೂಲ್ಸ್ – ಪಿಜಿಗಳಿಗಾಗಿಯೇ ಹೊಸ ವೆಬ್ ಪೋರ್ಟಲ್
ರವಿಗೌಡ ಅವರ ಚಿಕ್ಕಪ್ಪ ಶಿವಣ್ಣ 2016ರಲ್ಲಿ ರಸ್ತೆ ಅಪಘಾತದಲ್ಲಿ ಗಾಯಗೊಂಡು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ನಂತರ 2017ರಲ್ಲಿ ನಗರದ ಖಾಸಗಿ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಒಂದು ಆಪರೇಷನ್ಗಾಗಿ ನಾಲ್ಕು ತಿಂಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಸಿದ್ದರು. ಆಸ್ಪತ್ರೆಯಲ್ಲಿದ್ದ ವೇಳೆ ಕೇವಲ ಒಂದು ಆಪರೇಷನ್ಗೆ ಕುಟುಂಬಸ್ಥರ ಬಳಿ ಅನುಮತಿ ಪಡೆದು ಸತತ ನಾಲ್ಕು ಆಪರೇಷನ್ ಮಾಡಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಶಿವಣ್ಣ ಸಾವ್ನಪ್ಪಿದ್ದರು. ನಂತರ 2017ರಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಆರೋಪದ ಮೇಲೆ ರವಿ ಕೆಪಿಎಂಎಯಲ್ಲಿ ದೂರು ದಾಖಲಿಸಿದ್ದರು. ಇದನ್ನೂ ಓದಿ: ಸುಳ್ಳು ಜಾಹೀರಾತು ನೀಡಿದರೆ ಪತಂಜಲಿ ಉತ್ಪನ್ನಕ್ಕೆ 1 ಕೋಟಿ ದಂಡ ಹಾಕಬೇಕಾಗುತ್ತೆ: ಸುಪ್ರೀಂ ಎಚ್ಚರಿಕೆ
2021ರಲ್ಲಿ ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಸುವಂತೆ ಆರೋಗ್ಯ ಇಲಾಖೆಯ ಜಾಗೃತಕೋಷದ ಜಾಗೃತಾಧಿಕಾರಿಗೆ ದೂರು ಸಲ್ಲಿಸಿದ್ದರು. ಪರಿಹಾರ ಕೊಡಿಸುವಂತೆ 2018ರಲ್ಲಿ ಗ್ರಾಹಕರ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದರು. ಆಸ್ಪತ್ರೆ ಹಾಗೂ ವೈದ್ಯರ ವಿರುದ್ಧ ಸಮರ ಸಾರಿದ್ದ ರವಿ ಗೌಡರಿಗೆ ಗೆಲುವಾಗಿತ್ತು. ಇದರಲ್ಲೂ 15 ಲಕ್ಷ ರೂ. ಕೊಡುವಂತೆ ಆದೇಶ ಮಾಡಲಾಗಿತ್ತು. ಇದನ್ನೂ ಓದಿ: ನಿಗಮ ಮಂಡಳಿ ಅಧ್ಯಕ್ಷರ ಆಯ್ಕೆ ಕಸರತ್ತು – ಅಧ್ಯಕ್ಷರ ಮೊದಲ ಪಟ್ಟಿ ಫೈನಲ್: ಸಭೆಯಲ್ಲಿ ಏನಾಯ್ತು?