Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶಿಕ್ಷಣ ಪಡೆಯದ ಜನರು ದೇಶಕ್ಕೆ ಹೊರೆ, ಉತ್ತಮ ಪ್ರಜೆಗಳಾಗಲು ಸಾಧ್ಯವಿಲ್ಲ: ಅಮಿತ್‌ ಶಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಶಿಕ್ಷಣ ಪಡೆಯದ ಜನರು ದೇಶಕ್ಕೆ ಹೊರೆ, ಉತ್ತಮ ಪ್ರಜೆಗಳಾಗಲು ಸಾಧ್ಯವಿಲ್ಲ: ಅಮಿತ್‌ ಶಾ

Latest

ಶಿಕ್ಷಣ ಪಡೆಯದ ಜನರು ದೇಶಕ್ಕೆ ಹೊರೆ, ಉತ್ತಮ ಪ್ರಜೆಗಳಾಗಲು ಸಾಧ್ಯವಿಲ್ಲ: ಅಮಿತ್‌ ಶಾ

Public TV
Last updated: October 11, 2021 9:20 pm
Public TV
Share
2 Min Read
amith shah 1
SHARE

ನವದೆಹಲಿ: ಶಿಕ್ಷಣ ಪಡೆಯದ ಜನರು ದೇಶದ ಹೊರೆಯಾಗುತ್ತಾರೆ. ಅನಕ್ಷರಸ್ಥರು ಭಾರತದ ಉತ್ತಮ ಪ್ರಜೆಗಳಾಗಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ.

ನರೇಂದ್ರ ಮೋದಿ ಅಧಿಕಾರ ಸ್ವೀಕರಿಸಿ 20 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಸಂಸದ್‌ ಟಿವಿಗೆ ಅಮಿತ್‌ ಶಾ ಸಂದರ್ಶನ ನೀಡಿದರು. ಈ ವೇಳೆ ಮೊದಲು ಗುಜರಾತ್ ಮುಖ್ಯಮಂತ್ರಿಯಾಗಿ ಮತ್ತು ನಂತರ ಭಾರತದ ಪ್ರಧಾನಿಯಾಗಿ ಶಾಲೆಗಳಲ್ಲಿ ದಾಖಲಾತಿಯನ್ನು ಹೆಚ್ಚಿಸಲು ಪ್ರಸ್ತುತ ಸರ್ಕಾರವು ಯಾವ ರೀತಿ ಕ್ರಮ ಕೈಗೊಂಡಿದೆ ಎಂಬುದರ ಕುರಿತು ಶಾ ಮಾತನಾಡಿದರು.

pm modi amit shah

ನೀವು ಸಾಕ್ಷರತೆಯನ್ನು ಮೌಲ್ಯಮಾಪನ ಮಾಡಿದಾಗ ಒಂದು ರಾಷ್ಟ್ರದ ಪ್ರಗತಿಗೆ ಅದರ ಕೊಡುಗೆ ಏನೆಂದು ನಿಮಗೆ ತಿಳಿಯುತ್ತದೆ. ಅನಕ್ಷರಸ್ಥ ವ್ಯಕ್ತಿ ದೇಶಕ್ಕೆ ಹೊರೆ. ಆತನಿಗೆ ಸಂವಿಧಾನ ನೀಡಿದ ಹಕ್ಕುಗಳು ತಿಳಿಯುವುದಿಲ್ಲ. ಅಥವಾ ಆತನಿಗೆ ಮಾಡಬೇಕಾದ ಕರ್ತವ್ಯಗಳು ಗೊತ್ತಿರುವುದಿಲ್ಲ. ಅಂತಹ ವ್ಯಕ್ತಿಯು ಉತ್ತಮ ಪ್ರಜೆ ಹೇಗೆ ಆಗುತ್ತಾನೆ ಎಂದು ಪ್ರಶ್ನಿಸಿದರು.

ನರೇಂದ್ರ ಮೋದಿ ಮುಖ್ಯಮಂತ್ರಿ ಅವಧಿಯ ಬಗ್ಗೆ ಪ್ರಸ್ತಾಪ ಮಾಡಿದ ಅವರು, ಆ ಸಮಯದಲ್ಲಿ ಗುಜರಾತ್‌ ಶಾಲೆಗಳಲ್ಲಿ ಡ್ರಾಪ್‌ಔಟ್‌ ಅತಿ ದೊಡ್ಡ ಸಮಸ್ಯೆಯಾಗಿತ್ತು. ಮೋದಿಯವರು ಒಂದು ಹಬ್ಬದಂತೆಯೇ ದಾಖಲಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಿದರು ಮತ್ತು ಅದನ್ನು ಶೇ.100ಕ್ಕೆ ತೆಗೆದುಕೊಂಡು ಹೋಗುವ ನಿಟ್ಟಿನಲ್ಲಿ ಪೋಷಕರ ಸಮಿತಿಯನ್ನು ರಚಿಸಿದರು. ಒಂದು ವೇಳೆ ವಿದ್ಯಾರ್ಥಿ ಶಾಲೆಗೆ ಬರದಿದ್ದರೆ ಆ ವಿದ್ಯಾರ್ಥಿಯ ಬಗ್ಗೆ ಯೋಚಿಸಲಾಯಿತು. ಶಿಕ್ಷಕರಿಗೂ ಜವಾಬ್ದಾರಿಯನ್ನು ನೀಡಲಾಯಿತು. ಈ ಎಲ್ಲ ಕ್ರಮಗಳಿಂದ ಡ್ರಾಪ್ಔಟ್ ದರವು ಶೇ.37% ರಿಂದ ಈಗ ಶೇ.1ಕ್ಕಿಂತಲೂ ಕಡಿಮೆಯಾಗಿದೆ ಎಂದರು.

ಮೋದಿ ಒಬ್ಬ ನಿರಂಕುಶ ನಾಯಕ ಎಂಬ ಆರೋಪಗಳನ್ನು ತಿರಸ್ಕರಿಸಿದ ಅಮಿತ್‌ ಶಾ, ಪ್ರಧಾನಮಂತ್ರಿಯವರು ತಮ್ಮ ಹುದ್ದೆ ಅಥವಾ ಶ್ರೇಣಿಯನ್ನು ಲೆಕ್ಕಿಸದೇ ಯಾರೇ ನೀಡಿದ ಎಲ್ಲ ಯೋಗ್ಯ ಸಲಹೆಗಳನ್ನು ಸ್ವೀಕರಿಸುತ್ತಾರೆ. ರಾಷ್ಟ್ರೀಯ ಹಿತಾಸಕ್ತಿಗೆ ಸಂಬಂಧಿಸಿದ ನಿರ್ಧಾರಗಳಿಗಾಗಿ ರಾಜಕೀಯ ಅಪಾಯಗಳನ್ನು ತೆಗೆದುಕೊಳ್ಳಲು ಮೋದಿ ಎಂದಿಗೂ ಹಿಂಜರಿಯಲಿಲ್ಲ ಎಂದು ಅವರು ಹೇಳಿದರು.

ನಾನು ಮೋದಿ ಮತ್ತು ಅವರ ಕೆಲಸದ ಶೈಲಿಯನ್ನು ಹತ್ತಿರದಿಂದ ಗಮನಿಸಿದ್ದೇನೆ. ಅವರಂತಹ ತಾಳ್ಮೆಯ ಕೇಳುಗನನ್ನು ನಾನು ನೋಡಿಲ್ಲ. ಸಮಸ್ಯೆ ಏನೇ ಇರಲಿ ಅವರು ಎಲ್ಲರ ಮಾತನ್ನು ಆಲಿಸುತ್ತಾರೆ ಮತ್ತು ಕನಿಷ್ಠ ಮಾತನಾಡುತ್ತಾರೆ. ನಂತರ ಸರಿಯಾದ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ತಿಳಿಸಿದರು. ಇದನ್ನೂ ಓದಿ: ಮಹಿಳೆಯರ ಬಗ್ಗೆ ವಿವಾದಾತ್ಮಕ ಹೇಳಿಕೆ – ಸಾಕ್ಷ್ಯ ನೀಡಿ ಸ್ಪಷ್ಟನೆ ನೀಡಿದ ಸುಧಾಕರ್

Modi Shah

ಪಕ್ಷದ ಬೆಂಬಲಿಗರಿಗೆ ವಿರುದ್ಧವಾಗಬಹುದು ಎಂದು ಗೊತ್ತಿದ್ದರೂ ರಾಷ್ಟ್ರ ಮತ್ತು ಜನರ ಹಿತಾಸಕ್ತಿಗಾಗಿ ಕಠಿಣ ಮತ್ತು ಅಪಾಯಕಾರಿ ನಿರ್ಧಾರಗಳನ್ನು ತೆಗೆದುಕೊಳ್ಳಲು ಮೋದಿ ಹಿಂಜರಿಯುವುದಿಲ್ಲ. ಕಪ್ಪುಹಣ ನಿಯಂತ್ರಣ, ತೆರಿಗೆ ವಂಚನೆಯ ಎಲ್ಲ ಲೋಪದೋಷಗಳ ತಡೆದು ಆರ್ಥಿಕ ಸುಧಾರಣೆ ಮಾಡುವ ವೇಳೆ ಕೆಲವು ವರ್ಷಗಳಿಂದ ನಮಗೆ ಮತ ಹಾಕಿದವರು ಸೇರಿದಂತೆ ಕೆಲವರು ತೊಂದರೆ ಅನುಭವಿಸುತ್ತಾರೆ. ಹಾಗಿದ್ದರೂ ಮೋದಿ ಇದರಿಂದ ಏನೂ ಪ್ರಯೋಜನ ಪಡೆಯುವುದಿಲ್ಲ. ಈ ಕಠಿಣ ಕ್ರಮದಿಂದ ಅಂತಿಮವಾಗಿ ದೇಶಕ್ಕೆ ಪ್ರಯೋಜನವಾಗಲಿದೆ ಎನ್ನುವುದನ್ನು ಜನರು ಅರ್ಥಮಾಡಿಕೊಂಡಿದ್ದಾರೆ ಎಂದು ಹೇಳಿದರು.

ವಿರೋಧ ಪಕ್ಷಗಳನ್ನು ತರಾಟೆಗೆ ತೆಗೆದುಕೊಂಡ ಶಾ, ನಮ್ಮ ವೈಫಲ್ಯಗಳನ್ನು ಜನರಿಗೆ ಬಹಿರಂಗಪಡಿಸಿ ಆದರೆ ರಾಜಕೀಯ ಗುಣಮಟ್ಟವನ್ನು ಕಡಿಮೆ ಮಾಡಿ ವೈಯಕ್ತಿಕ ದಾಳಿಯನ್ನು ನಡೆಸುವುದು ಸರಿಯಲ್ಲ ಎಂದರು.

TAGGED:Amit Shahbjpindiakannada newsnarendra modiಅನಕ್ಷರತೆಅಮಿತ್ ಶಾನರೇಂದ್ರ ಮೋದಿಬಿಜೆಪಿಭಾರತ
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Bengaluru City Universitys honorary doctorate
Bengaluru City

ಅರ್ಜುನ ಜನ್ಯ, ವೆಂಕಟೇಶ ಪ್ರಸಾದ್ ಸೇರಿ 6 ಗಣ್ಯರಿಗೆ ಬೆಂಗಳೂರು ನಗರ ವಿವಿಯಿಂದ ಗೌರವ ಡಾಕ್ಟರೇಟ್ ಪ್ರದಾನ

Public TV
By Public TV
1 minute ago
MLAs PA Que For IPL Ticket
Bengaluru City

IPL ಟಿಕೆಟ್‌ಗಾಗಿ ಸ್ಪೀಕರ್ ಕಚೇರಿ ಮುಂದೆ ಶಾಸಕರ ಪಿಎಗಳ ಕ್ಯೂ

Public TV
By Public TV
15 minutes ago
ANKITA
Chikkaballapur

ಚಿಕ್ಕಬಳ್ಳಾಪುರ | ಡಿವೈಡರ್‌ಗೆ ಕಾರು ಡಿಕ್ಕಿಯಾಗಿ ಪಲ್ಟಿ – 9 ವರ್ಷದ ಬಾಲಕಿ ಸಾವು

Public TV
By Public TV
16 minutes ago
Mobile Theft
Bengaluru City

ಮೊಬೈಲ್ ಕದೀತಿದ್ದ 9 ಅಪ್ರಾಪ್ತರು ಸೇರಿ 13 ಮಂದಿ ಅರೆಸ್ಟ್ – ಕಳುವಾಗಿದ್ದ 75 ಹೈಎಂಡ್ ಮೊಬೈಲ್‌ಗಳು ಸೀಜ್‌

Public TV
By Public TV
17 minutes ago
Rajat Patidar Tirupati Temple
Cricket

ಸಿಎಸ್‌ಕೆ ವಿರುದ್ಧದ ಪಂದ್ಯಕ್ಕೂ ಮುನ್ನ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಆರ್‌ಸಿಬಿ ಆಟಗಾರರು

Public TV
By Public TV
37 minutes ago
Liquor Party 2 e1682567560961
Bengaluru City

ರಕ್ತಸಿಕ್ತವಾಯ್ತು ಎಣ್ಣೆ ಪಾರ್ಟಿ – ಸ್ನೇಹಿತನಿಂದಲೇ ಸ್ನೇಹಿತನಿಗೆ ಚಾಕು ಇರಿತ..!

Public TV
By Public TV
49 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?