Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶಿಕ್ಷಣ ಪಡೆಯದ ಜನರು ದೇಶಕ್ಕೆ ಹೊರೆ, ಉತ್ತಮ ಪ್ರಜೆಗಳಾಗಲು ಸಾಧ್ಯವಿಲ್ಲ: ಅಮಿತ್‌ ಶಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಶಿಕ್ಷಣ ಪಡೆಯದ ಜನರು ದೇಶಕ್ಕೆ ಹೊರೆ, ಉತ್ತಮ ಪ್ರಜೆಗಳಾಗಲು ಸಾಧ್ಯವಿಲ್ಲ: ಅಮಿತ್‌ ಶಾ

Latest

ಶಿಕ್ಷಣ ಪಡೆಯದ ಜನರು ದೇಶಕ್ಕೆ ಹೊರೆ, ಉತ್ತಮ ಪ್ರಜೆಗಳಾಗಲು ಸಾಧ್ಯವಿಲ್ಲ: ಅಮಿತ್‌ ಶಾ

Public TV
Last updated: October 11, 2021 9:20 pm
Public TV
Share
2 Min Read
amith shah 1
SHARE

ನವದೆಹಲಿ: ಶಿಕ್ಷಣ ಪಡೆಯದ ಜನರು ದೇಶದ ಹೊರೆಯಾಗುತ್ತಾರೆ. ಅನಕ್ಷರಸ್ಥರು ಭಾರತದ ಉತ್ತಮ ಪ್ರಜೆಗಳಾಗಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ.

ನರೇಂದ್ರ ಮೋದಿ ಅಧಿಕಾರ ಸ್ವೀಕರಿಸಿ 20 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಸಂಸದ್‌ ಟಿವಿಗೆ ಅಮಿತ್‌ ಶಾ ಸಂದರ್ಶನ ನೀಡಿದರು. ಈ ವೇಳೆ ಮೊದಲು ಗುಜರಾತ್ ಮುಖ್ಯಮಂತ್ರಿಯಾಗಿ ಮತ್ತು ನಂತರ ಭಾರತದ ಪ್ರಧಾನಿಯಾಗಿ ಶಾಲೆಗಳಲ್ಲಿ ದಾಖಲಾತಿಯನ್ನು ಹೆಚ್ಚಿಸಲು ಪ್ರಸ್ತುತ ಸರ್ಕಾರವು ಯಾವ ರೀತಿ ಕ್ರಮ ಕೈಗೊಂಡಿದೆ ಎಂಬುದರ ಕುರಿತು ಶಾ ಮಾತನಾಡಿದರು.

pm modi amit shah

ನೀವು ಸಾಕ್ಷರತೆಯನ್ನು ಮೌಲ್ಯಮಾಪನ ಮಾಡಿದಾಗ ಒಂದು ರಾಷ್ಟ್ರದ ಪ್ರಗತಿಗೆ ಅದರ ಕೊಡುಗೆ ಏನೆಂದು ನಿಮಗೆ ತಿಳಿಯುತ್ತದೆ. ಅನಕ್ಷರಸ್ಥ ವ್ಯಕ್ತಿ ದೇಶಕ್ಕೆ ಹೊರೆ. ಆತನಿಗೆ ಸಂವಿಧಾನ ನೀಡಿದ ಹಕ್ಕುಗಳು ತಿಳಿಯುವುದಿಲ್ಲ. ಅಥವಾ ಆತನಿಗೆ ಮಾಡಬೇಕಾದ ಕರ್ತವ್ಯಗಳು ಗೊತ್ತಿರುವುದಿಲ್ಲ. ಅಂತಹ ವ್ಯಕ್ತಿಯು ಉತ್ತಮ ಪ್ರಜೆ ಹೇಗೆ ಆಗುತ್ತಾನೆ ಎಂದು ಪ್ರಶ್ನಿಸಿದರು.

ನರೇಂದ್ರ ಮೋದಿ ಮುಖ್ಯಮಂತ್ರಿ ಅವಧಿಯ ಬಗ್ಗೆ ಪ್ರಸ್ತಾಪ ಮಾಡಿದ ಅವರು, ಆ ಸಮಯದಲ್ಲಿ ಗುಜರಾತ್‌ ಶಾಲೆಗಳಲ್ಲಿ ಡ್ರಾಪ್‌ಔಟ್‌ ಅತಿ ದೊಡ್ಡ ಸಮಸ್ಯೆಯಾಗಿತ್ತು. ಮೋದಿಯವರು ಒಂದು ಹಬ್ಬದಂತೆಯೇ ದಾಖಲಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಿದರು ಮತ್ತು ಅದನ್ನು ಶೇ.100ಕ್ಕೆ ತೆಗೆದುಕೊಂಡು ಹೋಗುವ ನಿಟ್ಟಿನಲ್ಲಿ ಪೋಷಕರ ಸಮಿತಿಯನ್ನು ರಚಿಸಿದರು. ಒಂದು ವೇಳೆ ವಿದ್ಯಾರ್ಥಿ ಶಾಲೆಗೆ ಬರದಿದ್ದರೆ ಆ ವಿದ್ಯಾರ್ಥಿಯ ಬಗ್ಗೆ ಯೋಚಿಸಲಾಯಿತು. ಶಿಕ್ಷಕರಿಗೂ ಜವಾಬ್ದಾರಿಯನ್ನು ನೀಡಲಾಯಿತು. ಈ ಎಲ್ಲ ಕ್ರಮಗಳಿಂದ ಡ್ರಾಪ್ಔಟ್ ದರವು ಶೇ.37% ರಿಂದ ಈಗ ಶೇ.1ಕ್ಕಿಂತಲೂ ಕಡಿಮೆಯಾಗಿದೆ ಎಂದರು.

ಮೋದಿ ಒಬ್ಬ ನಿರಂಕುಶ ನಾಯಕ ಎಂಬ ಆರೋಪಗಳನ್ನು ತಿರಸ್ಕರಿಸಿದ ಅಮಿತ್‌ ಶಾ, ಪ್ರಧಾನಮಂತ್ರಿಯವರು ತಮ್ಮ ಹುದ್ದೆ ಅಥವಾ ಶ್ರೇಣಿಯನ್ನು ಲೆಕ್ಕಿಸದೇ ಯಾರೇ ನೀಡಿದ ಎಲ್ಲ ಯೋಗ್ಯ ಸಲಹೆಗಳನ್ನು ಸ್ವೀಕರಿಸುತ್ತಾರೆ. ರಾಷ್ಟ್ರೀಯ ಹಿತಾಸಕ್ತಿಗೆ ಸಂಬಂಧಿಸಿದ ನಿರ್ಧಾರಗಳಿಗಾಗಿ ರಾಜಕೀಯ ಅಪಾಯಗಳನ್ನು ತೆಗೆದುಕೊಳ್ಳಲು ಮೋದಿ ಎಂದಿಗೂ ಹಿಂಜರಿಯಲಿಲ್ಲ ಎಂದು ಅವರು ಹೇಳಿದರು.

ನಾನು ಮೋದಿ ಮತ್ತು ಅವರ ಕೆಲಸದ ಶೈಲಿಯನ್ನು ಹತ್ತಿರದಿಂದ ಗಮನಿಸಿದ್ದೇನೆ. ಅವರಂತಹ ತಾಳ್ಮೆಯ ಕೇಳುಗನನ್ನು ನಾನು ನೋಡಿಲ್ಲ. ಸಮಸ್ಯೆ ಏನೇ ಇರಲಿ ಅವರು ಎಲ್ಲರ ಮಾತನ್ನು ಆಲಿಸುತ್ತಾರೆ ಮತ್ತು ಕನಿಷ್ಠ ಮಾತನಾಡುತ್ತಾರೆ. ನಂತರ ಸರಿಯಾದ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ತಿಳಿಸಿದರು. ಇದನ್ನೂ ಓದಿ: ಮಹಿಳೆಯರ ಬಗ್ಗೆ ವಿವಾದಾತ್ಮಕ ಹೇಳಿಕೆ – ಸಾಕ್ಷ್ಯ ನೀಡಿ ಸ್ಪಷ್ಟನೆ ನೀಡಿದ ಸುಧಾಕರ್

Modi Shah

ಪಕ್ಷದ ಬೆಂಬಲಿಗರಿಗೆ ವಿರುದ್ಧವಾಗಬಹುದು ಎಂದು ಗೊತ್ತಿದ್ದರೂ ರಾಷ್ಟ್ರ ಮತ್ತು ಜನರ ಹಿತಾಸಕ್ತಿಗಾಗಿ ಕಠಿಣ ಮತ್ತು ಅಪಾಯಕಾರಿ ನಿರ್ಧಾರಗಳನ್ನು ತೆಗೆದುಕೊಳ್ಳಲು ಮೋದಿ ಹಿಂಜರಿಯುವುದಿಲ್ಲ. ಕಪ್ಪುಹಣ ನಿಯಂತ್ರಣ, ತೆರಿಗೆ ವಂಚನೆಯ ಎಲ್ಲ ಲೋಪದೋಷಗಳ ತಡೆದು ಆರ್ಥಿಕ ಸುಧಾರಣೆ ಮಾಡುವ ವೇಳೆ ಕೆಲವು ವರ್ಷಗಳಿಂದ ನಮಗೆ ಮತ ಹಾಕಿದವರು ಸೇರಿದಂತೆ ಕೆಲವರು ತೊಂದರೆ ಅನುಭವಿಸುತ್ತಾರೆ. ಹಾಗಿದ್ದರೂ ಮೋದಿ ಇದರಿಂದ ಏನೂ ಪ್ರಯೋಜನ ಪಡೆಯುವುದಿಲ್ಲ. ಈ ಕಠಿಣ ಕ್ರಮದಿಂದ ಅಂತಿಮವಾಗಿ ದೇಶಕ್ಕೆ ಪ್ರಯೋಜನವಾಗಲಿದೆ ಎನ್ನುವುದನ್ನು ಜನರು ಅರ್ಥಮಾಡಿಕೊಂಡಿದ್ದಾರೆ ಎಂದು ಹೇಳಿದರು.

ವಿರೋಧ ಪಕ್ಷಗಳನ್ನು ತರಾಟೆಗೆ ತೆಗೆದುಕೊಂಡ ಶಾ, ನಮ್ಮ ವೈಫಲ್ಯಗಳನ್ನು ಜನರಿಗೆ ಬಹಿರಂಗಪಡಿಸಿ ಆದರೆ ರಾಜಕೀಯ ಗುಣಮಟ್ಟವನ್ನು ಕಡಿಮೆ ಮಾಡಿ ವೈಯಕ್ತಿಕ ದಾಳಿಯನ್ನು ನಡೆಸುವುದು ಸರಿಯಲ್ಲ ಎಂದರು.

TAGGED:Amit Shahbjpindiakannada newsnarendra modiಅನಕ್ಷರತೆಅಮಿತ್ ಶಾನರೇಂದ್ರ ಮೋದಿಬಿಜೆಪಿಭಾರತ
Share This Article
Facebook Whatsapp Whatsapp Telegram

Cinema news

Anushka Shetty
ಸ್ವೀಟಿ ಅನುಷ್ಕಾಗೆ ಕಂಕಣ ಭಾಗ್ಯ – ಬೆಂಗಳೂರು ಮೂಲದ ಉದ್ಯಮಿ ಜೊತೆ ಮದ್ವೆ?
Cinema Latest South cinema
Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post

You Might Also Like

01 8
Big Bulletin

ಬಿಗ್‌ ಬುಲೆಟಿನ್‌ 14 March 2026 ಭಾಗ-1

Public TV
By Public TV
16 minutes ago
02 8
Big Bulletin

ಬಿಗ್‌ ಬುಲೆಟಿನ್‌ 14 March 2026 ಭಾಗ-2

Public TV
By Public TV
17 minutes ago
03 8
Big Bulletin

ಬಿಗ್‌ ಬುಲೆಟಿನ್‌ 14 March 2026 ಭಾಗ-3

Public TV
By Public TV
19 minutes ago
Stray Dogs 1
Crime

ತೆಲಂಗಾಣದಲ್ಲಿ ನೂರಾರು ಬೀದಿ ನಾಯಿಗಳ ಹತ್ಯೆ – ಪ್ರಕರಣ ದಾಖಲು

Public TV
By Public TV
32 minutes ago
Donald Trump 1
Latest

ಶೀಘ್ರವೇ ಹಾರ್ಮುಜ್‌ ಜಲಸಂಧಿ ಓಪನ್‌: ಡೊನಾಲ್ಡ್‌ ಟ್ರಂಪ್‌

Public TV
By Public TV
1 hour ago
Ramesha Bandisiddegowda
Karnataka

ಶ್ರೀಗಳ ಹೆಜ್ಜೆ ಎಲ್ಲೆಲ್ಲೋ ದಾರಿ ತಪ್ಪುತ್ತಿದೆ: ನಿರ್ಮಲಾನಂದನಾಥ ಸ್ವಾಮೀಜಿ ಬಗ್ಗೆ ರಮೇಶ್ ಬಂಡಿಸಿದ್ದೇಗೌಡ ವಿವಾದಾತ್ಮಕ ಹೇಳಿಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?