ಚಿಕ್ಕಬಳ್ಳಾಪುರ: ಆವಲಗುರ್ಕಿ ಬಳಿಯ ಈಶಾ ಆದಿಯೋಗಿ ಸನ್ನಿಧಾನದ ಬಳಿಯ ಶ್ರೀ ಜಾಲಾರಿ ಲಕ್ಷ್ಮೀನರಸಿಂಹ ಸ್ವಾಮಿ ದೇವಾಲಯದ (Jalari Lakshmi Narasimha Swamy Temple) ಬೆಟ್ಟದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ.
ಸುಮಾರು 50 ವರ್ಷದ ಪ್ರಾಯದ ಅಪರಿಚಿತ ವ್ಯಕ್ತಿಯಾಗಿದ್ದು ಗುರುತು ಪತ್ತೆಯಾಗಿಲ್ಲ. ಹತ್ತಾರು ಕಿಲೋಮೀಟರ್ ಬೆಟ್ಟದ ಸಾಲಿದ್ದು ಸರಿಸುಮಾರು 5-6 ಕಿಲೋಮೀಟರ್ ದೂರದಲ್ಲಿ ಕುರಚಲು ಕಾಡಿನ ಮಧ್ಯೆ ವ್ಯಕ್ತಿಯ ಮೃತದೇಹ ಸಿಕ್ಕಿದೆ.
ಬೆಟ್ಟದ ಬಳಿ ಸೈನಿಕರು ಕ್ಯಾಂಪ್ ಹಾಕಿ ಕೂಂಬಿಂಗ್ ನಡೆಸುತ್ತಿದ್ದಾಗ ಬೆಟ್ಟದಲ್ಲಿ ಸೈನಿಕರ ಕಣ್ಣಿಗೆ ಶವ ಕಾಣಿಸಿದೆ. ಈ ವಿಷಯವನ್ನು ಚಿಕ್ಕಬಳ್ಳಾಪುರ ಎಸ್ಪಿಯವರ (Chikkaballapura SP) ಗಮನಕ್ಕೆ ತಂದಿದ್ದು ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು ಮೃತದೇಹ ಹೊತ್ತು ಕೆಳಗೆ ತರಲು ಸಾಕಷ್ಟು ಹರಸಾಹಸ ಪಟ್ಟಿದ್ದಾರೆ.
ಚಿಕ್ಕಬಳ್ಳಾಪುರ ಗ್ರಾಮಾಂತರ ಪಿಎಸ್ಐ ಪ್ರದೀಪ್ ಪೂಜಾರಿ ಹಾಗೂ ಅವರ ಸಿಬ್ಬಂದಿ ಸೇರಿದಂತೆ-ಸೈನಿಕರು ಚಟ್ಟದ ಮಾದರಿ ತಯಾರು ಮಾಡಿ 5-6 ಕಿಲೋಮೀಟರ್ ದುರ್ಗಮ ಹಾದಿಯಲ್ಲಿ ಸಾಕಷ್ಟು ಹರಸಾಹಸ ಪಟ್ಟು ಮೃತದೇಹವನ್ನು ಕೆಳಗೆ ಹೊತ್ತು ತಂದಿದ್ದಾರೆ. ಈ ಸಂಬಂಧ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರ ಈ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.
Web Stories