Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಫೆ.1ಕ್ಕೆ ಕೇಂದ್ರ ಬಜೆಟ್ ಮಂಡನೆ – ಬೆಲೆ ಏರಿಕೆಯಿಂದ ಜನಸಾಮಾನ್ಯರಿಗೆ ಸಿಗುತ್ತಾ ರಿಲೀಫ್?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಫೆ.1ಕ್ಕೆ ಕೇಂದ್ರ ಬಜೆಟ್ ಮಂಡನೆ – ಬೆಲೆ ಏರಿಕೆಯಿಂದ ಜನಸಾಮಾನ್ಯರಿಗೆ ಸಿಗುತ್ತಾ ರಿಲೀಫ್?

Latest

ಫೆ.1ಕ್ಕೆ ಕೇಂದ್ರ ಬಜೆಟ್ ಮಂಡನೆ – ಬೆಲೆ ಏರಿಕೆಯಿಂದ ಜನಸಾಮಾನ್ಯರಿಗೆ ಸಿಗುತ್ತಾ ರಿಲೀಫ್?

Public TV
Last updated: January 31, 2023 9:44 pm
Public TV
Share
3 Min Read
nirmala sitaraman budget
SHARE

ನವದೆಹಲಿ: ಸಂಸತ್ (Parliament) ಹಾಲ್‌ನಲ್ಲಿ ಮೊದಲ ಹಂತದ ಬಜೆಟ್ ಅಧಿವೇಶನ (Union Budget 2023) ಇಂದಿನಿಂದ (ಮಂಗಳವಾರ) ಆರಂಭವಾಗಿದ್ದು, ಬುಧವಾರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitaraman) ಬಜೆಟ್ ಮಂಡಿಸಲಿದ್ದಾರೆ. ಸಾರ್ವತ್ರಿಕ ಚುನಾವಣೆಗೆ ಮುನ್ನ ಕೇಂದ್ರ ಸರ್ಕಾರ ಮಂಡಿಸಲಿರುವ ಕೊನೆಯ ಹಾಗೂ ಪೂರ್ಣ ಪ್ರಮಾಣದ ಬಜೆಟ್ ಇದಾಗಿದ್ದು, ಹಲವು ನಿರೀಕ್ಷೆಗಳನ್ನು ಹುಟ್ಟುಹಾಕಿದೆ.

ಒಂದೆಡೆ ಜಾಗತಿಕ ಆರ್ಥಿಕ ಹಿಂಜರಿತದ ಭೀತಿ. ಮತ್ತೊಂದೆಡೆ ದಿನೇ ದಿನೇ ಹೆಚ್ಚುತ್ತಿರುವ ಅಗತ್ಯ ವಸ್ತುಗಳ ಬೆಲೆಗಳಿಂದ ಜನ ಸಾಮಾನ್ಯರು ತತ್ತರಿಸಿದ್ದಾರೆ. ಹೆಚ್ಚಿದ ಬಡ್ಡಿದರದಿಂದ ತಿಂಗಳ ಇಎಂಐಗಳು ಭಾರವಾಗಿ ಪರಿಣಮಿಸಿದೆ. ಜೊತೆಗೆ ಉದ್ಯೋಗ ಅಭದ್ರತೆಯ ಚಿಂತೆ ಕೂಡ ಶುರುವಾಗಿದೆ. ಇದರ ಮಧ್ಯೆ ದೇಶದ ವಿವಿಧ ರಾಜ್ಯಗಳಲ್ಲಿ ಚುನಾವಣೆಗಳು ಸರಣಿಯಾಗಿ ನಡೆಯಲಿವೆ. ಈ ಹೊತ್ತಲ್ಲಿಯೇ ಮತ್ತೊಮ್ಮೆ ಬಜೆಟ್ ಸಮಯ ಬಂದಿದೆ. ನಾಳೆ ಬೆಳಗ್ಗೆ 11 ಗಂಟೆಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸಲಿದ್ದಾರೆ. ಹೀಗಾಗಿ ಈ ಬಜೆಟ್ ಮೇಲೆ ನಿರೀಕ್ಷೆಗಳ ಭಾರ ಹೆಚ್ಚಿದೆ. ಇದನ್ನೂ ಓದಿ: ನನ್ನ ಸರ್ಕಾರ ಬಡವರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ತಿದೆ: ಮುರ್ಮು

union budget 2023

ಬಜೆಟ್ ಬಗ್ಗೆ ಪ್ರಧಾನಿ ಮೋದಿ ಪ್ರತಿಕ್ರಿಯೆ ನೀಡಿದ್ದು, ಅಸ್ಥಿರ ಜಾಗತಿಕ ಆರ್ಥಿಕ ಪರಿಸ್ಥಿತಿಯ ಈ ಸಂದರ್ಭದಲ್ಲಿ ಕೇಂದ್ರದ ಬಜೆಟ್‌ಗಾಗಿ ಬರೀ ಭಾರತವಲ್ಲ ಇಡೀ ವಿಶ್ವವೇ ಎದಿರು ನೋಡ್ತಿದೆ ಎಂದಿದ್ದಾರೆ.

ಕೇಂದ್ರ ಬಜೆಟ್; ತೆರಿಗೆ ಪಾವತಿದಾರರ ಬೇಡಿಕೆಗಳೇನು?
ಆದಾಯ ತೆರಿಗೆ ಮಿತಿ 2.5 ಲಕ್ಷದಿಂದ 5 ಲಕ್ಷಕ್ಕೆ ಹೆಚ್ಚಿಸಬೇಕು, ಶೇ.30ರಷ್ಟು ತೆರಿಗೆ ಸ್ಲಾಬ್ ಮಿತಿಯನ್ನು ಇನ್ನಷ್ಟು ಹೆಚ್ಚಿಸಬೇಕು, ಸೆಕ್ಷನ್ 80-ಸಿ ಅಡಿ ನೀಡುತ್ತಿರುವ ವಿನಾಯ್ತಿ ಮಿತಿ ಹೆಚ್ಚಿಸಬೇಕು, ಸ್ಟ್ಯಾಂಡರ್ಡ್‌ ಡಿಡಕ್ಷನ್ ಮಿತಿ 2 ಲಕ್ಷಕ್ಕೆ ಹೆಚ್ಚಳ ಮಾಡಬೇಕು, ಜೀವವಿಮೆ, ಆರೋಗ್ಯ ವಿಮೆ ಪ್ರೀಮಿಯಂಗಳಿಗೆ ತೆರಿಗೆ ವಿನಾಯ್ತಿ, ಗೃಹಸಾಲದ ಬಡ್ಡಿ ಏರಿಕೆಯಾಗುತ್ತಿದೆ.. ಇದನ್ನು ಇಳಿಕೆ ಮಾಡಬೇಕು, ಐಟಿ ರೂಲ್ 24ರ ಅಡಿ ಲಭ್ಯವಿರುವ ವಿನಾಯ್ತಿ ಮಿತಿಯನ್ನು 4 ಲಕ್ಷಕ್ಕೆ ಹೆಚ್ಚಿಸಬೇಕು, ಠೇವಣಿ, ಬಾಂಡ್, ಪಿಪಿಎಫ್ ಹೂಡಿಕೆಗಳ ಮೇಲಿನ ವಿನಾಯ್ತಿ ಮಿತಿ ಹೆಚ್ಚಿಸಬೇಕು. ಇದನ್ನೂ ಓದಿ: ಕೇಂದ್ರ ಬಜೆಟ್ ಮೇಲೆ ಜಗತ್ತು ಕಣ್ಣಿಟ್ಟಿದೆ: ಮೋದಿ

ಜನಸಾಮಾನ್ಯರ ಬೇಡಿಕೆಗಳೇನು?
ಅಗತ್ಯ ವಸ್ತುಗಳ ಬೆಲೆ ಇಳಿಕೆ ಮಾಡಬೇಕು (ವಿಶೇಷವಾಗಿ ಬೇಳೆಕಾಳು, ಅಕ್ಕಿ, ಗೋಧಿ, ಹಾಲು), ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಇಳಿಕೆ ಮಾಡಬೇಕು, ಬೆಲೆ ಏರಿಕೆ ನಿಯಂತ್ರಿಸುವ ಕ್ರಮಗಳನ್ನು ತೆಗೆದುಕೊಳ್ಳಬೇಕು, ನಿರುದ್ಯೋಗ ಹೆಚ್ಚುತ್ತಿದೆ; ಹೆಚ್ಚೆಚ್ಚು ಉದ್ಯೋಗ ಸೃಷ್ಟಿಸಬೇಕು, ಮಧ್ಯಮ ವರ್ಗದ ಎಲ್ಲಾ ವೃತ್ತಿಯವರಿಗೆ ಒಳ್ಳೆಯದು ಮಾಡಬೇಕು, ಶಿಕ್ಷಣ ವೆಚ್ಚದ ತೆರಿಗೆ ವಿನಾಯಿತಿ ಮಿತಿ ಹೆಚ್ಚಳ ಮಾಡಬೇಕು.

Parliament

ಕೃಷಿಕರ ಬೇಡಿಕೆಗಳೇನು?
ರಸಗೊಬ್ಬರ, ರಾಸಾಯನಿಕಗಳ ಮೇಲೆ ಅಧಿಕ ಸಹಾಯಧನ, ಪಶುಸಂಗೋಪನಾ ವಲಯಕ್ಕೆ ಕಡಿಮೆ ದರದಲ್ಲಿ ಸಾಲ ಸೌಲಭ್ಯ, ಉದ್ಯೋಗ ಖಾತ್ರಿ ಯೋಜನೆಯಡಿ ದಿನಗೂಲಿ ಹೆಚ್ಚಿಸಬೇಕು, ಕೃಷಿ ಸಮ್ಮಾನ್ ಯೋಜನೆಯಡಿ ಸಹಾಯಧನ ಹೆಚ್ಚಿಸಬೇಕು.

ರಕ್ಷಣಾ ಇಲಾಖೆ ನಿರೀಕ್ಷೆಗಳೇನು?
ಐಎನ್‌ಎಸ್ ವಿಕ್ರಾಂತ್‌ಗೆ ಮರೇನ್ ರಫೇಲ್ ವಿಮಾನ ಖರೀದಿ, ಪ್ರಾಜೆಕ್ಟ್ 75ಐ ಅಡಿ 6 ಜಲಂತಾರ್ಗಾಮಿ ನಿರ್ಮಾಣಕ್ಕೆ ಹೆಚ್ಚುವರಿ ಅನುದಾನ, ಮಲ್ಟಿ ರೋಲ್ ಫೈಟರ್ ಏರ್‌ಕ್ರಾಫ್ಟ್‌ಗಳ ಖರೀದಿ, ಅನುದಾನ ಸಂಪೂರ್ಣ ಬಳಕೆಗಾಗಿ ನಾನ್ ಲ್ಯಾಪ್ಸೆಬಲ್ ಫಂಡ್, ಒನ್ ರ‍್ಯಾಂಕ್, ಒನ್ ಪೆನ್ಶನ್‌ಗಾಗಿ ಹೆಚ್ಚುವರಿ ಅನುದಾನ. ಇದನ್ನೂ ಓದಿ: Union Budget 2023: ಮಂಗಳವಾರದಿಂದ ಬಜೆಟ್ ಅಧಿವೇಶನ – ಫೆ. 1ಕ್ಕೆ ಬಜೆಟ್ ಮಂಡನೆ

ಕೇಂದ್ರದ ಮುಂದಿರುವ ಸವಾಲುಗಳೇನು?
ಜನಪರ ಕಾರ್ಯಸೂಚಿ ನಡುವೆ ಆರ್ಥಿಕ ಸಮತೋಲನ, ಶೇ.6.4ರಷ್ಟಿರುವ ವಿತ್ತೀಯ ಕೊರತೆ ನಿಯಂತ್ರಿಸುವುದು, ಹಣದುಬ್ಬರ ನಿಯಂತ್ರಣ, ಜನರ ಕೊಳ್ಳುವ ಶಕ್ತಿಗೆ ಇಂಬು, ಉದ್ಯೋಗ ಸೃಷ್ಟಿ, ರಫ್ತು ಪ್ರಮಾಣ ಹೆಚ್ಚಳ ಮಾಡುವುದು.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:New DelhiNirmala SitaramanparliamentUnion Budget 2023ನವದೆಹಲಿನಿರ್ಮಲಾ ಸೀತಾರಾಮನ್ಬಜೆಟ್ಸಂಸತ್
Share This Article
Facebook Whatsapp Whatsapp Telegram

Cinema news

Singer Mangli
ಗಾಯಕಿ ಮಂಗ್ಲಿಯಿಂದ 10 ಕೋಟಿ ವಂಚನೆ? – ಹಣ ಕೇಳಿದ್ದಕ್ಕೆ ಕೊಲೆ ಬೆದರಿಕೆ ಆರೋಪ; FIR ದಾಖಲು
Bengaluru City Cinema Crime Latest Top Stories
Duniya Vijay 1
ನಟ ದುನಿಯಾ ವಿಜಯ್ ಸೇರಿ 20 ಮಂದಿಗೆ ಬಾಗಲೂರು ಪೊಲೀಸರಿಂದ ನೋಟಿಸ್‌?
Cinema Latest Main Post Sandalwood
high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema

You Might Also Like

ಸಾಂದರ್ಭಿಕ ಚಿತ್ರ
Bengaluru City

ಸಹಜ ಸ್ಥಿತಿಗೆ ಮರಳುತ್ತಿದೆ ಆಟೋ ಚಾಲಕರ ಗ್ಯಾಸ್ ಪರದಾಟ

Public TV
By Public TV
16 minutes ago
Shobha Karandlaje 1
Bagalkot

ಮೀಸಲು ಕಾನೂನು – ಎಲ್ಲ ಜಿಲ್ಲೆಗಳಲ್ಲಿ ಬಿಜೆಪಿ ಮಹಿಳಾ ಮೋರ್ಚಾದಿಂದ ಸ್ತ್ರೀ ಸಮಾವೇಶ: ಶೋಭಾ ಕರಂದ್ಲಾಜೆ

Public TV
By Public TV
27 minutes ago
Islamabad Talks
Latest

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಕದನ ವಿರಾಮ ಮಾತುಕತೆ ಆರಂಭ – ಇರಾನಿನ ಕೆಲ ಬೇಡಿಕೆಗಳಿಗೆ ಅಮೆರಿಕ ತಾತ್ವಿಕ ಒಪ್ಪಿಗೆ

Public TV
By Public TV
48 minutes ago
BMW Car Accident
Crime

ಕಾಂಕ್ರೀಟ್‌ ಮಿಕ್ಸ್‌ ಸಾಗಿಸ್ತಿದ್ದ ಟ್ರಕ್‌ ಉರುಳಿಬಿದ್ದು BMW ಕಾರು ಅಪ್ಪಚ್ಚಿ – ಹೈಕೋರ್ಟ್‌ನ ಹಿರಿಯ ವಕೀಲ ಸಾವು

Public TV
By Public TV
1 hour ago
zameer ahmed s.s.mallikarjun
Bengaluru City

ದಾವಣಗೆರೆ ದಕ್ಷಿಣ ದಂಗಲ್ ಎಫೆಕ್ಟ್ – ಸ್ವಪಕ್ಷದಲ್ಲೇ ಸಚಿವ ಜಮೀರ್‌ಗೆ ಟ್ರಬಲ್, ತಿರುಗಿಬಿದ್ದ ಮತ್ತೊಂದು ಮುಸ್ಲಿಂ ಬಣ

Public TV
By Public TV
2 hours ago
Shreyas Iyer 3
Cricket

ಶ್ರೇಯಸ್‌ ಪರಾಕ್ರಮ, ಚಂಡೀಗಢದಲ್ಲಿ ಹೈದರಾಬಾದ್‌ ಚೆಂಡಾಡಿದ ಪಂಜಾಬ್‌ – 6 ವಿಕೆಟ್‌ಗಳ ಅಮೋಘ ಜಯ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?