ನವದೆಹಲಿ: ಚೀನಾದತ್ತ ವಾಲುತ್ತಿರುವ ಮಾಲ್ಡೀವ್ಸ್ಗೆ (Maldives) ತಿರುಗೇಟು ಎಂಬಂತೆ ಕೇಂದ್ರ ಸರ್ಕಾರ ತನ್ನ ಬಜೆಟ್ನಲ್ಲಿ ಲಕ್ಷದ್ವೀಪವನ್ನು (Lakshadweep) ಅಭಿವೃದ್ಧಿ ಮಾಡುವುದಾಗಿ ಘೋಷಣೆ ಮಾಡಿದೆ.
ದೇಶೀಯ ಪ್ರವಾಸೋದ್ಯಮದ ಉತ್ಸಾಹವನ್ನು ಹೆಚ್ಚಿಸಲು ಲಕ್ಷದ್ವೀಪ ಸೇರಿದಂತೆ ಹಲವು ದ್ವೀಪಗಳಲ್ಲಿ ಬಂದರು ಸಂಪರ್ಕ, ಮೂಲಸೌಕರ್ಯ ಯೋಜನೆಗಳನ್ನು ಆರಂಭಿಸಲಾಗುವುದು ಎಂದು ವಿತ್ತ ಮಂತ್ರಿ ನಿರ್ಮಲಾ ಸೀತಾರಾಮನ್ (Niramala Sitharaman) ತಮ್ಮ ಬಜೆಟ್ ಭಾಷಣದಲ್ಲಿ ಹೇಳಿದ್ದಾರೆ.
ನಿರ್ಮಲಾ ಸೀತಾರಾಮನ್ ಅವರು ಇಂದು ನೂತನ ಲೋಕಸಭೆಯಲ್ಲಿ (Loksabha) ಬಜೆಟ್ ಮಂಡಿಸಿದ ಅವರು, ವಿಕಸಿತ್ ಭಾರತ್ನ ದೃಷ್ಟಿಯನ್ನು ಸಾಕಾರಗೊಳಿಸಲು ರಾಜ್ಯದಲ್ಲಿ ಅನೇಕ ಬೆಳವಣಿಗೆ ಮತ್ತು ಅಭಿವೃದ್ಧಿ-ಶಕ್ತಗೊಳಿಸುವ ಸುಧಾರಣೆಗಳ ಅಗತ್ಯವಿದೆ ಎಂದು ಹೇಳಿದರು. ಇದನ್ನೂ ಓದಿ: ಮಧ್ಯಂತರ ಬಜೆಟ್ನಲ್ಲಿ ನಾರಿಶಕ್ತಿಗೆ ಹೆಚ್ಚಿನ ಒತ್ತು
ಜುಲೈನಲ್ಲಿ ಪೂರ್ಣ ಪ್ರಮಾಣದ ಬಜೆಟ್ನಲ್ಲಿ (Union Budget 2024) ನಮ್ಮ ಸರ್ಕಾರವು ವಿಕಸಿತ್ ಭಾರತ್ನ ನಮ್ಮ ಅನ್ವೇಷಣೆಗಾಗಿ ವಿವರವಾದ ಮಾರ್ಗಸೂಚಿಯನ್ನು ಪ್ರಸ್ತುತಪಡಿಸುತ್ತದೆ. ನಮ್ಮ ಸರ್ಕಾರವು ವಿವಿಧ ಇಲಾಖೆಗಳ ಅಡಿಯಲ್ಲಿ ಅಸ್ತಿತ್ವದಲ್ಲಿರುವ ಆಸ್ಪತ್ರೆ ಮೂಲಸೌಕರ್ಯಗಳನ್ನು ಬಳಸಿಕೊಂಡು ಹೆಚ್ಚಿನ ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸಲು ಯೋಜಿಸಿದೆ ಎಂದರು.