ಉದ್ಯಮಗಳಿಗೆ 20 ಕೋಟಿ ರೂ. ಸಾಲ
ಸಣ್ಣ ಮತ್ತು ಅತಿ ಸಣ್ಣ ಉದ್ಯಮ 7.5 ಕೋಟಿ ಮಂದಿಗೆ ಉದ್ಯೋಗ ನೀಡುತ್ತದೆ. 36% ಉತ್ಪಾದನೆ ಮಾಡುತ್ತಿದೆ. ಉತ್ತಮವಾಗಿ ನಡೆಯುವ ಉದ್ಯಮಗಳಿಗೆ 20 ಕೋಟಿ ವರೆಗೂ ಸಾಲ ನೀಡಲಾಗುವುದು.
5 ಲಕ್ಷ ರೂ.ಗೆ ಹೆಚ್ಚಳ
ಕಿಸಾನ್ ಕ್ರೆಡಿಟ್ ಕಾರ್ಡ್ ಸಾಲದ ಮಿತಿ 3 ಲಕ್ಷ ರೂ.ನಿಂದ 5 ಲಕ್ಷ ರೂ.ಗೆ ಏರಿಕೆ. ಮೂರು ಯೂರಿಯಾ ಪ್ಲ್ಯಾಂಟ್ ನಿರ್ಮಾಣ.
Advertisement
Advertisement
ಬಿಹಾರದಲ್ಲಿ ಮಖಾನಾ ಬೋರ್ಡ್ ಸ್ಥಾಪನೆ
ಅಧಿಕ ಇಳುವಳಿ ಬೀಜಗಳ ಉತ್ಪಾದನೆ ಮತ್ತು ಸಂಶೋಧನೆ. ಎನ್ಸಿಸಿಎಫ್ ಕಡೆಯಿಂದ ಧಾನ್ಯಗಳ ಸಂಗ್ರಹಣೆ. ಹಣ್ಣು ಮತ್ತು ತರಕಾರಿಯನ್ನು ಬೆಳೆಗೆ ಪ್ರೊತ್ಸಾಹ ನೀಡಲಾಗುವುದು. ರಾಜ್ಯಗಳ ಜೊತೆಗೆ ಸಹಯೋಗದೊಂದಿಗೆ ಕೆಲಸ ಮಾಡಲಾಗುತ್ತದೆ.
Advertisement
Advertisement
ಧನ ಧಾನ್ಯ ಯೋಜನಾ
ನೂರು ಜಿಲ್ಲೆಗಳನ್ನು ಕೇಂದ್ರೀಕರಿಸಿ ಯೋಜನೆ. ಕೃಷಿ ಉತ್ಪನ್ನಗಳ ಬೆಳವಣಿಗೆ ಆದ್ಯತೆ. ನೀರಾವರಿ, ಹಾಗೂ ಸ್ಟೋರೆಜ್ ಗಳ ನಿರ್ಮಾಣ. ಇದರಿಂದ 1.7 ಕೋಟಿ ರೈತರಿಗೆ ಅನುಕೂಲ
ದೇಶ ಎಂದರೆ ಜನರು
ದೇಶ ಎಂದರೆ ಮಣ್ಣು ಅಲ್ಲ, ದೇಶ ಎಂದರೆ ಜನರು. ಖ್ಯಾತ ಕವಿಯ ಹೇಳಿಕೆಯಂತೆ ನಾವು ಕೆಲಸ ಮಾಡುತ್ತಿದ್ದೇವೆ. ಈ ಬಜೆಟ್ನಲ್ಲಿ ಬಡತನ, ಮಹಿಳೆ, ಕೃಷಿ, ಯುವ, ರಫ್ತು ಪ್ರೊತ್ಸಾಹ, ಹೂಡಿಕೆ, ಸಣ್ಣ ಮತ್ತು ಅತಿ ಸಣ್ಣ ವಲಯಗಳನ್ನು ಕೇಂದ್ರೀಕರಿಸಿದೆ.
ಬಜೆಟ್ ಮಂಡನೆಗೆ ಗದ್ದಲ
ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆಗೆ ವಿರೋಧ ಪಕ್ಷಗಳಿಂದ ಗದ್ದಲ. ಇದು ಅಭಿವೃದ್ಧಿಯ ಬಜೆಟ್ ಎಂದ ಸಿಚಿವೆ
ಕೆಲವೇ ಕ್ಷಣಗಳಲ್ಲಿ ಬಜೆಟ್
ಕ್ಯಾಬಿನೆಟ್ ಸಭೆಯಲ್ಲಿ ಒಪ್ಪಿಗೆ ಪಡೆದ ನಿರ್ಮಲಾ ಸೀತಾರಾಮನ್. ಕೆಲವೇ ಕ್ಷಣಗಳಲ್ಲಿ ಲೋಕಸಭೆಯಲ್ಲಿ ಬಜೆಟ್ ಮಂಡನೆ . ಕ್ಯಾಬಿನೆಟ್ ಸಭೆಯಲ್ಲಿ ಒಪ್ಪಿಗೆ ಪಡೆದ ನಂತರ ಸಂಸತ್ ಆವರಣದಲ್ಲಿ ಡಿಜಿಟಲ್ ಬಜೆಟ್ ತೋರಿಸಿದ ಸಚಿವೆ.
ಕ್ಯಾಬಿನೆಟ್ ಸಭೆಯಲ್ಲಿ ಒಪ್ಪಿಗೆ
ಬಜೆಟ್ ಮಂಡನೆಗೂ ಮುನ್ನ ಮೋದಿ 3.0 ಸರ್ಕಾರದ ಕ್ಯಾಬಿನೆಟ್ ಸಭೆ ಆರಂಭ. ಕ್ಯಾಬಿನೆಟ್ ಸಭೆಯಲ್ಲಿ ಒಪ್ಪಿಗೆ ಪಡೆದ ಬಳಿಕ ಲೋಕಸಭೆಯಲ್ಲಿ ಬಜೆಟ್ ಮಂಡನೆ ಮಾಡಲಿರುವ ನಿರ್ಮಲಾ ಸೀತಾರಾಮನ್.
ಮಧುಬನಿ ಸೀರೆಯಲ್ಲಿ ಸಚಿವೆ!
ನಿರ್ಮಲಾ ಸೀತಾರಾಮನ್ 2021ರ ಪದ್ಮ ಪ್ರಶಸ್ತಿ ಪುರಸ್ಕೃತ ದುಲಾರಿ ದೇವಿ ಅವರಿಗೆ ಗೌರವ ಸಲ್ಲಿಸಲು ಮಧುಬನಿ ಕಲೆಯ ಸೀರೆಯನ್ನು ಧರಿಸಿದ್ದಾರೆ. ಬಿಹಾರದ ಮಧುಬನಿಯಲ್ಲಿರುರುವ ಮಿಥಿಲಾ ಕಲಾ ಸಂಸ್ಥೆಗೆ ನಿರ್ಮಲಾ ಸೀತಾರಾಮನ್ ಭೇಟಿ ನೀಡಿದ್ದಾಗ ದುಲಾರಿ ದೇವಿ ಉಡುಗೊರೆಯಾಗಿ ನೀಡಿದ್ದರು. ಅಷ್ಟೇ ಅಲ್ಲದೇ ಬಜೆಟ್ ವೇಳೆ ಈ ಸೀರೆಯನ್ನು ಧರಿಸುವಂತೆ ಕೇಳಿಕೊಂಡಿದ್ದರು.
ರಾಷ್ಟ್ರಪತಿ ಅನುಮತಿ
ಬಜೆಟ್ ಮಂಡನೆಗೂ ಮುನ್ನ ಸೀತಾರಾಮನ್ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ ಅನುಮತಿ ಪಡೆದುಕೊಂಡರು.
ಡಿಜಿಟಲ್ ಬಜೆಟ್!
ಈ ಹಿಂದೆ ಹಣಕಾಸು ಸಚಿವರು ಬಜೆಟ್ ಪುಸ್ತಕವನ್ನು ತಂದು ಓದುತ್ತಿದ್ದರು. 2019ರಲ್ಲಿ ಮೊದಲ ಬಾರಿ ಬಜೆಟ್ ಮಂಡಿಸಿದ್ದ ಸೀತಾರಾಮನ್ ಬ್ರೀಫ್ಕೇಸ್ ಬಜೆಟ್ ಸಾಂಪ್ರದಾಯಕ್ಕೆ ಗುಡ್ಬೈ ಹೇಳಿದ್ದರು. 2021ರಲ್ಲಿ ಕೋವಿಡ್ ಬಳಿಕ ಮೊದಲ ಬಾರಿ ಕಾಗದ ಪತ್ರಗಳನ್ನು ಬಿಟ್ಟು ಡಿಜಿಟಲ್ ಟ್ಯಾಬ್ಲೆಟ್ನಲ್ಲಿ ಬಜೆಟ್ ಮಂಡಿಸಿದ್ದರು. ಈ ಬಾರಿಯೂ ಬಜೆಟ್ ಭಾಷಣವನ್ನು ಪುಸ್ತಕದ ಬದಲಾಗಿ ಟ್ಯಾಬ್ಲೆಟ್ ಹಿಡಿದುಕೊಂಡೆ ಮಂಡಿಸಲಿದ್ದಾರೆ.
ಲೋಕಸಭೆಗೆ ಆಗಮಿಸಿದ ಸೀತಾರಾಮನ್
ಬಜೆಟ್ ಮಂಡನೆ ಮಾಡಲು ಲೋಕಸಭೆಗೆ ನಿರ್ಮಲಾ ಸೀತಾರಾಮನ್ ಆಗಮಿಸಿದರು.
ಮಹಿಳೆಯರ ಆರೋಗ್ಯಕ್ಕೆ ಸರ್ಕಾರ ಆದ್ಯತೆ
ಮಹಿಳೆಯರ ಆರೋಗ್ಯ ಸುಧಾರಣೆಗೆ ಅನುದಾನ ಹೆಚ್ಚಳ ಸಾಧ್ಯತೆ
ಗ್ರಾಮೀಣ ಭಾಗದಲ್ಲಿ ಶೌಚಾಲಯ ನಿರ್ಮಾಣಕ್ಕೆ ಆದ್ಯತೆ
ಗ್ರಾಮೀಣ ಮಹಿಳೆಯರ ಆರೋಗ್ಯ ಮೂಲಸೌಕರ್ಯಗಳ ಮೇಲೆ ವಿಶೇಷ ಗಮನ
ಗ್ರಾಮೀಣ ಪ್ರದೇಶಗಳಲ್ಲಿ ಮಹಿಳೆಯರಿಗೆ ಉಚಿತ ಲಸಿಕೆಗಳನ್ನು ಒದಗಿಸುವ ಯೋಜನೆ
ಉದ್ಯಮ ಸ್ಥಾಪಿಸಲು ಸುಲಭ ಸಾಲದ ಸೌಲಭ್ಯ,
ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ
ಮಹಿಳೆಯರಲ್ಲಿ ಉಳಿತಾಯ ಮತ್ತು ಹೂಡಿಕೆಯಲ್ಲಿ ಪ್ರೋತ್ಸಾಹ ನೀಡುವುದು ಮುಟ್ಟಿನ ಆರೋಗ್ಯ ಮತ್ತು ಕ್ಯಾನ್ಸರ್ ತಪಾಸಣೆಯಂತಹ ಆರೋಗ್ಯ ಯೋಜನೆ
ಲಕ್ ಪತಿ ದೀದಿ, ಡ್ರೋಣ್ ದೀದಿ ಯೋಜನೆ ಇನ್ನಷ್ಟು ವಿಸ್ತರಿಸುವ ಸಾಧ್ಯತೆ
ರೈಲ್ವೇ ನಿರೀಕ್ಷೆಗಳೇನು?
ಸರಕು ಸೇವೆಗಳಿಗೆ ರೈಲ್ವೇ ಸಚಿವಾಲಯ ಆದ್ಯತೆ
ತಂತ್ರಜ್ಞಾನದಿಂದ ಉದ್ಯೋಗಿಗಳ ವೆಚ್ಚ ನಿಯಂತ್ರಣ
ಕಡಿಮೆ ದಟ್ಟಣೆ ನಿಲ್ದಾಣಗಳಲ್ಲಿ ನಿಲುಗಡೆ ಕಡಿಮೆ ಮಾಡುವುದು
ಸಾರ್ವಜನಿಕ-ಖಾಸಗಿ ಸಹಭಾಗಿತ್ವವನ್ನು ವಿಸ್ತರಿಸುವುದು
ಕವಚ ತಂತ್ರಜ್ಞಾನ ಅಳವಡಿಕೆಗೆ ಇನ್ನಷ್ಟು ಒತ್ತು
ಮುಂದಿನ ಐದು ವರ್ಷದಲ್ಲಿ ಮೆಟ್ರೋ ಮಾರ್ಗ ದ್ವಿಗುಣ
ಮೆಟ್ರೋ ಮಾರ್ಗಗಳೂ ಇನ್ನಷ್ಟು ವಿಸ್ತರಣೆ
ರೈತರಿಗೆ ಬಂಪರ್ ಕೊಡುಗೆ?
ಈ ಬಾರಿಯ ಬಜೆಟ್ ನಲ್ಲಿ ಕಿಸಾನ್ ಕ್ರೆಡಿಟ್ ಕಾರ್ಡ್ ಮಿತಿಯನ್ನು 3ರಿಂದ 5 ಲಕ್ಷ ಹೆಚ್ಚಳವಾಗುವ ಸಾಧ್ಯತೆಯಿದೆ. ಕೃಷಿ ಮೂಲಸೌಕರ್ಯದಲ್ಲಿನ ಹೂಡಿಕೆಗಳಿಗೆ ಆದ್ಯತೆ ಸಿಗಲಿದೆ. ಕೃಷಿಯೇತರ ಆದಾಯಕ್ಕೆ ಹೆಚ್ಚು ಒತ್ತು ನೀಡಬಹುದು
ಬೆಳಗ್ಗೆ 11 ಗಂಟೆಗೆ ಮಂಡನೆ
ಇಂದು ಬೆಳಗ್ಗೆ 11 ಗಂಟೆಗೆ ಲೋಕಸಭೆಯಲ್ಲಿ ಬಜೆಟ್ ಮಂಡನೆಯಾಗಲಿದ್ದು, ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹಣಕಾಸು ಸಚಿವಾಲಯಕ್ಕೆ ಆಗಮಿಸಿದರು.
ಸಿಲಿಂಡರ್ ಬೆಲೆ ಇಳಿಕೆ
19 ಕೆಜಿ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಬೆಲೆ 7 ರೂ. ಇಳಿಕೆ. ಪರಿಷ್ಕೃತ ದರ ಇಂದಿನಿಂದಲೇ ಜಾರಿ
6.3-6.8% ಜಿಡಿಪಿ ಬೆಳವಣಿಗೆ
2025-26 ಹಣಕಾಸು ವರ್ಷದಲ್ಲಿ ವಾರ್ಷಿಕ 6.3-6.8% ದರದಲ್ಲಿ ಜಿಡಿಪಿ ಬೆಳವಣಿಗೆಯಾಬಹುದು ಎಂದು ಆರ್ಥಿಕ ಸಮೀಕ್ಷೆ (Economic Survey) ತಿಳಿಸಿದೆ.
8ನೇ ಬಜೆಟ್
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರದಲ್ಲಿ ಹಣಕಾಸು ಮಂತ್ರಿಯಾಗಿರುವ ನಿರ್ಮಲಾ ಸೀತಾರಾಮನ್ ಅವರು ಇದುವರೆಗೆ 7 ಬಜೆಟ್ ಮಂಡಿಸಿದ್ದಾರೆ. ಇಂದು 8ನೇ ಬಜೆಟ್ ಮಂಡಿಸಿ ದಾಖಲೆ ಬರೆಯಲಿದ್ದಾರೆ. 2019, 2020, 2021, 2022, 2023, 2024 (ಮಧ್ಯಂತರ ಬಜೆಟ್), 2024 (ಪೂರ್ಣ ಬಜೆಟ್) ಅವಧಿಯಲ್ಲಿ ಬಜೆಟ್ ಮಂಡಿಸಿದ್ದಾರೆ