– ಕನ್ನಡದಲ್ಲೇ ಟ್ವೀಟ್ ಮಾಡಿ ಖಂಡನೆ
ಬೆಂಗಳೂರು: ರಾಜ್ಯದಲ್ಲಿ ಎನ್ಇಪಿ ರದ್ದು ಮಾಡುವ ಬಗ್ಗೆ ಸಿಎಂ ಸಿದ್ದರಾಮಯ್ಯ (Siddaramaiah) ಅವರ ಹೇಳಿಕೆ ಕುರಿತಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ (Dharmendra Pradhan) ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಎನ್ಇಪಿ (NEP) ರದ್ದು ಕುರಿತ ಸಿಎಂ ಹೇಳಿಕೆಗೆ ಕನ್ನಡದಲ್ಲಿ ಟ್ವೀಟ್ (Tweet) ಮಾಡುವ ಮೂಲಕ ಧರ್ಮೇಂದ್ರ ಪ್ರಧಾನ್ ವಿರೋಧಿಸಿದ್ದಾರೆ. ಶಿಕ್ಷಣವು ಪ್ರಗತಿಯ ದಾರಿದೀಪವಾಗಬೇಕೇ ವಿನಃ ರಾಜಕೀಯದ ದಾಳವಾಗಬಾರದು ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಬೆಂಬಲಿಗರೇ ಬರುತ್ತೇವೆ ಎಂದ ಮೇಲೆ ಸೋಮಶೇಖರ್ ಕಾಂಗ್ರೆಸ್ನಲ್ಲಿರಲು ಸಾಧ್ಯವೇ : ಕೈ ಶಾಸಕ ಶ್ರೀನಿವಾಸ್
ಟ್ವೀಟ್ನಲ್ಲಿ ಏನಿದೆ?
ಶಿಕ್ಷಣವು ಪ್ರಗತಿಯ ದಾರಿದೀಪವಾಗಬೇಕೇ ವಿನಃ ರಾಜಕೀಯದ ದಾಳವಾಗಬಾರದು. ರಾಷ್ಟ್ರೀಯ ಶಿಕ್ಷಣ ನೀತಿ 2020 ಅನ್ನು ಸ್ಥಗಿತಗೊಳಿಸುವ ಕರ್ನಾಟಕ ರಾಜ್ಯದ ಸಿಎಂ ಅವರ ರಾಜಕೀಯ ಪ್ರೇರಿತ ನಿರ್ಧಾರದ ಬಗ್ಗೆ ತಿಳಿದು ನಿರಾಶೆಯಾಗಿದೆ. ನಮ್ಮ ಶಿಕ್ಷಣ ವ್ಯವಸ್ಥೆಗೆ ವಿಕಸನದ ಅಗತ್ಯವಿದೆಯೇ ಹೊರತು ಹಿಂಜರಿಕೆಯಲ್ಲ. ಎನ್ಇಪಿ ಎಂಬುದು ಹಲವು ವರ್ಷಗಳ ಗಂಭೀರ ಸಮಾಲೋಚನೆಗಳನ್ನು ಜನರ ಆಶೋತ್ತರಗಳನ್ನು ಪ್ರತಿಬಿಂಬಿಸುವ ಫಲಿತಾಂಶವಾಗಿದೆ. ಇದನ್ನೂ ಓದಿ: ಕಾಂಗ್ರೆಸ್ಗೆ ಜಂಪ್ ಆಗ್ತಾರಾ ಬಾಂಬೆ ಫ್ರೆಂಡ್ಸ್? – ಬಿಜೆಪಿ ಸ್ಥಳೀಯ ನಾಯಕರ ವಿರುದ್ಧ ಎಸ್ಟಿಎಸ್ ಕೆಂಡ
ಈ ನಿರ್ಧಾರವು ಕಾಂಗ್ರೆಸ್ನ ಸುಧಾರಣೆ-ವಿರೋಧಿ, ಭಾರತೀಯ ಭಾಷಾ ವಿರೋಧಿ ಮತ್ತು ಕರ್ನಾಟಕ ವಿರೋಧಿ ಗುಣಗಳನ್ನು ಬಹಿರಂಗಪಡಿಸುತ್ತದೆ. ಕರ್ನಾಟಕವು ಪ್ರಗತಿ ಶೀಲ ಮತ್ತು ಸರ್ವರನ್ನು ಒಳಗೊಳ್ಳುವಿಕೆಗೆ ಬೆಲೆಕೊಡುವ ನಾಯಕತ್ವವನ್ನು ಬಯಸುತ್ತದೆಯೇ ಹೊರತು ಕ್ಷುಲ್ಲಕ ರಾಜಕಾರಣವನ್ನಲ್ಲ. ವಿದ್ಯಾರ್ಥಿಗಳ ಭವ್ಯ ಭವಿಷ್ಯತ್ತಿಗೆ ಮೊದಲ ಆದ್ಯತೆಯನ್ನು ಕೊಡೋಣ. ಕ್ಷುಲ್ಲಕ ರಾಜಕಾರಣ ಮಾಡುವುದನ್ನು ನಿಲ್ಲಿಸೋಣ ಎಂದು ಬರೆದು ತಮ್ಮ ಟ್ವಿಟ್ಟರ್ನಲ್ಲಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಸರ್ಕಾರ ಮಾಡುವಾಗ ದಮ್ಮಯ್ಯ ಬನ್ನಿ ಅಂತಾ ಕರೆದ್ರು, ಈಗ ಬರ್ತೀವಿ ಅಂದ್ರೂ ಸೇರಿಸಿಕೊಳ್ಳೋರಿಲ್ಲ: ವಿಶ್ವನಾಥ್
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]