ಬೆಂಗಳೂರು: ಬಿಜೆಪಿ (BJP) ಶಾಸಕರನ್ನ ಆಪರೇಷನ್ ಹಸ್ತದ (Operation Hasta) ಮೂಲಕ ಸೆಳೆಯುವ ‘ಕೈ’ ಪ್ರಯತ್ನಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಎಂಟ್ರಿಯಾಗುವ ಸಾಧ್ಯತೆ ಇದೆ.
ಕಾಂಗ್ರೆಸ್ (Congress) ಆಪರೇಷನ್ ಪ್ರಯತ್ನಕ್ಕೆ ಅಮಿತ್ ಶಾ ಅಡ್ಡಿಯಾಗುವ ಸಾಧ್ಯತೆ ಇದೆ. ಶಾಸಕ ಎಸ್.ಟಿ. ಸೋಮಶೇಖರ್ (S.T.Somashekar) ಆಪರೇಷನ್ ಕಮಲಕ್ಕೆ ಒಳಗಾಗಬಹುದು ಎಂಬ ಅನುಮಾನಗಳ ನಡುವೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಎಂಟ್ರಿ ಆಗುವ ಸಾಧ್ಯತೆ ಇದೆ. ಇದನ್ನೂ ಓದಿ: ಮೇಕೆನೂ ಇಲ್ಲ, ದಾಟು ಇಲ್ಲ: ಡಿಕೆಶಿ ವಿರುದ್ಧ ಅಶೋಕ್ ಲೇವಡಿ
- Advertisement 2
- Advertisement 3
ಸೆಪ್ಟೆಂಬರ್ 2 ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ, ಶಾಸಕ ಎಸ್.ಟಿ. ಸೋಮಶೇಖರ್ ಭೇಟಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಶಾಸಕ ಎಸ್.ಟಿ. ಸೋಮಶೇಖರ್ ಸೆಪ್ಟೆಂಬರ್ 2 ರಂದು ಅಮಿತ್ ಶಾ ಭೇಟಿಗೆ ಸಮಯ ನಿಗದಿಯಾಗಿದ್ದು, ದೆಹಲಿಯಲ್ಲಿ ಭೇಟಿಯಾಗಲಿದ್ದಾರೆ ಎನ್ನಲಾಗಿದೆ.
- Advertisement 4
ಇನ್ನೊಂದು ಕಡೆ ಎಸ್.ಟಿ. ಸೋಮಶೇಖರ್ಗೆ ಬಿ.ಎಲ್. ಸಂತೋಷ್ ದೆಹಲಿಗೆ ಬುಲಾವ್ ನೀಡಿದ್ದಾರೆ. ಮಾಜಿ ಶಾಸಕ ನಿರ್ಮಲ್ ಕುಮಾರ್ ಸುರಾನ ಮೂಲಕ ದೆಹಲಿಗೆ ಕರೆತರಲು ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ನಿರ್ಮಲ್ ಕುಮಾರ್ ಸುರಾನ ಹಾಗೂ ಎಸ್.ಟಿ.ಸೋಮಶೇಖರ್, ಬಿ.ಎಲ್.ಸಂತೋಷ್ ಭೇಟಿಗೆ ದೆಹಲಿಗೆ ತೆರಳಲಿದ್ದಾರೆ. ಆಗಸ್ಟ್ 25 ರಂದು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಡಿಕೆ ಶಿವಕುಮಾರ್ ಲೂಟಿ ಹೊಡೆಯೋದು ಬಿಟ್ಟರೆ ತಮ್ಮನಾಗಿ ಸ್ವೀಕಾರ ಮಾಡ್ತೀನಿ: ಕುಮಾರಸ್ವಾಮಿ ಷರತ್ತು
Web Stories