Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಅವರೇನು ಮಾಡಿದ್ದಾರೆ, ನಾನೇನು ಮಾಡಿದ್ದೀನಿ ಅಂತಾ ಚರ್ಚೆ ಆಗಲಿ: ಸಿಎಂಗೆ ಹೆಚ್‌ಡಿಕೆ ಓಪನ್ ಚಾಲೆಂಜ್

Public TV
Last updated: October 6, 2024 1:18 pm
Public TV
Share
2 Min Read
siddu hdk
SHARE

– ಮನೆಯಲ್ಲಿ ಗೌರವದಿಂದ ಇದ್ದ ತಮ್ಮ ಪತ್ನಿಯನ್ನು ಹೊರಗೆ ತಂದಿದ್ದು ಸಿದ್ದರಾಮಯ್ಯರೇ: ಕುಮಾರಸ್ವಾಮಿ ತಿರುಗೇಟು

ಬೆಂಗಳೂರು: ನಾನು 14 ತಿಂಗಳಲ್ಲಿ ಮಾಡಿದ ಕೆಲಸ ಬಗ್ಗೆ ಸಿದ್ದರಾಮಯ್ಯಗೆ ಚಾಲೆಂಜ್ ಮಾಡ್ತೀನಿ. ಅವರೇನು ಮಾಡಿದ್ದಾರೆ ನಾನೇನು ಮಾಡಿದ್ದೀನಿ ಅಂತಾ ಚರ್ಚೆ ಆಗಲಿ. ಇದು ನನ್ನ ಓಪನ್ ಚಾಲೆಂಜ್ ಎಂದು ಸಿಎಂ ಸಿದ್ದರಾಮಯ್ಯಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ಸವಾಲು ಹಾಕಿದರು.

ನಗರದಲ್ಲಿ ಮಾತನಾಡಿದ ಹೆಚ್‌ಡಿಕೆ, ಕೊಟ್ಟ ಕುದುರೆ ಏರದವನು ವೀರನೂ ಅಲ್ಲ ಶೂರನೂ ಅಲ್ಲ ಅಂದಿದ್ದಾರೆ. ಯಾವ ಕುದುರೆ ಕೊಟ್ಟಿದ್ರು ಅವರು ನನಗೆ? ನಾನು 14 ತಿಂಗಳಲ್ಲಿ ಮಾಡಿದ ಕೆಲಸ ಬಗ್ಗೆ ಸಿದ್ದರಾಮಯ್ಯಗೆ ಚಾಲೆಂಜ್ ಮಾಡ್ತೀನಿ. ನಾನು ಬಹಿರಂಗ ಸವಾಲು ಹಾಕ್ತೀನಿ ಸಿದ್ದರಾಮಯ್ಯಗೆ. ಅವರ ಈ 15 ತಿಂಗಳಲ್ಲಿ ಅವರೇನು ಮಾಡಿದ್ರು, ನಾನು 2018 ರಲ್ಲಿ 14 ತಿಂಗಳಲ್ಲಿ ಏನು ಕೆಲಸ ಮಾಡಿದ್ದೀನಿ. ಇವರ ಸಹಕಾರ ಸರಿಯಾಗಿರದಿದ್ದರೂ 14 ತಿಂಗಳಲ್ಲಿ ಅಭಿವೃದ್ಧಿ ಕೆಲಸ ಮಾಡಿದ್ದೀನಿ. ಅವರೇನು ಮಾಡಿದ್ದಾರೆ, ನಾನೇನು ಮಾಡಿದ್ದೀನಿ ಅಂತಾ ಚರ್ಚೆ ಆಗಲಿ, ಇದು ನನ್ನ ಓಪನ್ ಚಾಲೆಂಜ್. ಚರ್ಚೆ ಮಾಡೋಣ, ಚರ್ಚೆಗೆ ನಾನು ಸಿದ್ಧ ಇದ್ದೀನಿ. ನಮ್ಮ 38 ಜನ ಶಾಸಕರು ಇದ್ರು, ನಿಮ್ಮ ಬೆಂಬಲ ಇರಲಿಲ್ಲ. ನೀವೇನು ನಡೆಸಿದ್ದೀರಿ, ಚರ್ಚೆ ಆಗಲಿ. ಇವತ್ತು ಹೇಳ್ತಿದ್ದೀರಲ್ಲ ಕುಮಾರಸ್ವಾಮಿ ಕೆಲಸ ಮಾಡಿಲ್ಲ ಅಂತಾ ಎಂದು ಸಿದ್ದರಾಮಯ್ಯ ವಿರುದ್ಧ ಗುಡುಗಿದರು. ಇದನ್ನೂ ಓದಿ: ಬೆಂಗಳೂರಲ್ಲಿ ಮಳೆ ಅವಾಂತರ: ಕೆಸರು ನೀರಲ್ಲಿ ಬಿದ್ದ ಬೈಕ್ ಸವಾರ

Siddaramaiah 4

ಮಾತು ಮಾತಿಗೆ ಹೊಟ್ಟೆ ಉರಿ ಅಂತಿದ್ದಾರೆ. ಅವರೇ ಅವರ ಪತ್ನಿಯನ್ನು ಹೊರಗೆ ತಂದವರು. ಯಾರು ತಂದಿದ್ದು ಅವರನ್ನು ಹೊರಗೆ, ನೀವೇ. ಮನೆಯಲ್ಲಿ ಗೌರವದಿಂದ ಇದ್ದವರನ್ನು ಹೊರಗೆ ತಂದಿದ್ದು ಅವರು. ನಿಮ್ಮ ನಡವಳಿಕೆಯಿಂದ ಅವರು ಹೊರಗೆ ಬಂದಂತಾಗಿದೆ. ನೀವೇ ತಪ್ಪು ಮಾಡಿ ಇಂತಹ ವಿಷಯಗಳನ್ನೆಲ್ಲ ಯಾಕೆ ಜನರ ಮುಂದೆ ಹೇಳ್ತೀರ ಈಗ. ಮಾತೆತ್ತಿದರೆ ಅಹಿಂದ ಅಹಿಂದ ಅನ್ನುತ್ತಾರೆ. ಅಹಿಂದ ವರ್ಗಗಳಿಗೆ ಸಿದ್ದರಾಮಯ್ಯ ಏನು ಮಾಡಿದ್ದಾರೆ ಹೇಳಲಿ. ವಾಲ್ಮೀಕಿ ನಿಗಮದಲ್ಲಿ ಲೂಟಿ ಹೊಡೆದಿರೋದು ನೋಡಿದ್ದೀವಲ್ಲ ಎಂದು ಟಾಂಗ್ ಕೊಟ್ಟರು.

ಮಳೆ ಅವಾಂತರ ಕುರಿತು ಮಾತನಾಡಿ, ಈ ಸರ್ಕಾರ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡ್ತಿಲ್ಲ. ಎಲ್ಲದರಲ್ಲೂ ಸರ್ಕಾರ ವಿಫಲವಾಗಿದೆ. ಹಲವು ಕುಟುಂಬಗಳ ಮನೆಗಳು ಜಲಾವೃತ ಆಗಿವೆ, ರಾತ್ರಿ ಎಲ್ಲ ಜನರಿಗೆ ನಿದ್ದೆ ಇಲ್ಲ. ಗುಂಡಿ ಮುಚ್ಚಲು ಅದೇನೋ ಗಡುವು ಕೊಟ್ಟಿದ್ರಲ್ಲ. ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ರಲ್ಲ. ಈ ಸರ್ಕಾರಕ್ಕೆ ಜನರ ಸಮಸ್ಯೆ ಬಗ್ಗೆ ಚಿಂತೆ ಇಲ್ಲ. ಅಭಿವೃದ್ಧಿ ಕೆಲಸಗಳ ಬಗ್ಗೆ ದೇವರೇ ಕಾಪಾಡಬೇಕು. ಈಗಲೂ ಕಾಲ ಮಿಂಚಿಲ್ಲ, ಮಳೆ ಅನಾಹುತ ಆಗಿದೆ. ನಿಮ್ಮ ಆಡಳಿತ ಸರಿ ಮಾಡ್ಕೊಳ್ಳಿ. ವಿಪಕ್ಷಗಳನ್ನು ಕ್ಷಮಿಸ್ತೀರಾ ಕ್ಷಮಿಸ್ತೀರಾ ಅಂತಾ ನಿನ್ನೆ ಹೇಳ್ತಿದ್ರು. ನಮ್ಮನ್ನ ಜನ ಕ್ಷಮಿಸ್ತಾರೋ ಅಪ್ಪಿಕೊಳ್ತಾರೋ ಅದನ್ನು ಜನ ತೀರ್ಮಾನ ಮಾಡ್ತಾರೆ. ಅದೇ ಜನ ಸಿದ್ದರಾಮಯ್ಯ ಅವರಿಗೇ ಏನು ಮಾಡಬೇಕು ಅಂತಾ ಹೇಳಲಿ. ಇಂಥ ಆಡಳಿತ ಕೊಟ್ಟಿದ್ದೀರಲ್ಲ ಜನರ ಕ್ಷಮೆ ಅವರು ಕೇಳಬೇಕು ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಮಾಜಿ ಶಾಸಕ ಮೊಯಿದ್ದೀನ್ ಬಾವ ಸಹೋದರ ಮುಮ್ತಾಜ್ ಅಲಿ ನಾಪತ್ತೆ

ಜಾತಿಗಣತಿ ಇದೆಲ್ಲ ರಾಜಕೀಯ, ಇಷ್ಟು ದಿನ ಜಾರಿ ಮಾಡಲಿಲ್ಲ. ಈಗೇನು ಜಾರಿ ಮಾಡ್ತಾರೆ ಅವರು? ಇದೆಲ್ಲ ರಾಜಕೀಯ ಅಷ್ಟೇ ಎಂದು ಪ್ರತಿಕ್ರಿಯಿಸಿದರು.

TAGGED:bengaluruh d kumaraswamysiddaramaiahಬೆಂಗಳೂರುಸಿದ್ದರಾಮಯ್ಯಹೆಚ್‌.ಡಿ.ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema Updates

Vijay Devarakonda
ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ವಿಜಯ್ ದೇವರಕೊಂಡ
Cinema Latest Top Stories
War 2 Hrithik Roshan Jr NTR
ವಾರ್-2 ಟ್ರೇಲರ್‌ ರಿಲೀಸ್‌ಗೆ ಮುಹೂರ್ತ ಫಿಕ್ಸ್
Bollywood Cinema South cinema
Ram Charan Peddi
ಪೆದ್ದಿ ಚಿತ್ರಕ್ಕಾಗಿ ದೇಹ ಹುರಿಗೊಳಿಸಿದ ರಾಮ್ ಚರಣ್ : ಮತ್ತೆ ಶೂಟಿಂಗ್ ಶುರು
Cinema Latest Top Stories
Bhargavi LLB Nandagokula Colors kannada Mahasangama Today 1
ಭಾರ್ಗವಿ LL.B, ನಂದಗೋಕುಲ ಮಹಾ ಸಂಗಮ: ಮನಮಿಡಿಯುವ ಕಥೆ
Cinema TV Shows
darshan and kapil sibal
ದರ್ಶನ್‌ ಕೇಸ್‌ – ಸುಪ್ರೀಂ ಕೋರ್ಟ್‌ಗೆ ಹಿರಿಯ ವಕೀಲ ಕಪಿಲ್ ಸಿಬಲ್ ಗೈರು
Bengaluru City Cinema Court Karnataka Latest Sandalwood States Top Stories

You Might Also Like

Nimisha Priya
Crime

ಯೆಮೆನ್‌ನಲ್ಲಿ ಕೇರಳದ ನರ್ಸ್ ನಿಮಿಷ ಪ್ರಿಯಾಗೆ ಮರಣದಂಡನೆ ರದ್ದು?

Public TV
By Public TV
4 minutes ago
Jagdeep Dhankhar 2
Latest

ಜಗದೀಪ್ ಧನಕರ್ ರಾಜೀನಾಮೆ ಸುತ್ತ ಅನುಮಾನದ ಹುತ್ತ- ದಿಢೀರ್‌ ರಿಸೈನ್‌ ಮಾಡಿದ್ದು ಯಾಕೆ?

Public TV
By Public TV
26 minutes ago
MurughaShri
Chitradurga

ಮುರುಘಾಶ್ರೀ ಕೇಸ್ ವಿಚಾರಣೆ ಆ.1ಕ್ಕೆ ಮುಂದೂಡಿಕೆ

Public TV
By Public TV
38 minutes ago
Money
Bengaluru City

ತಲಾ ಆದಾಯ ಶೇ.93.6ರಷ್ಟು ಹೆಚ್ಚಳ – ದೇಶದಲ್ಲೇ ಅಗ್ರ ಸ್ಥಾನಕ್ಕೇರಿದ ಕರ್ನಾಟಕ

Public TV
By Public TV
58 minutes ago
Dharmasthala Files
Crime

ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಕೇಸ್ – ಬುಧವಾರ SITಯಿಂದ ತನಿಖೆ ಆರಂಭ

Public TV
By Public TV
1 hour ago
Biklu Shiva Murder Case Kolar Supari Killers arrest
Bengaluru City

ಬಿಕ್ಲು ಶಿವ ಮರ್ಡರ್ ಕೇಸ್ – ಕೋಲಾರ ಮೂಲದ ನಾಲ್ವರು ಸುಪಾರಿ ಕಿಲ್ಲರ್ಸ್ ಅರೆಸ್ಟ್

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?