ರಿಷಬ್ ಶೆಟ್ಟಿ (Rishabh Shetty) ನಿರ್ದೇಶಿಸಿ, ನಟಿಸಿರುವ ಕಾಂತಾರ (Kantara) ಸಿನಿಮಾದ ಬಗ್ಗೆ ಚಿತ್ರರಂಗದವರು ಮೆಚ್ಚುಗೆ ವ್ಯಕ್ತ ಪಡಿಸಿದ್ದು ವಿಶೇಷವಾದರೂ, ಅದಕ್ಕಿಂತ ವಿಶೇಷ ಅನಿಸಿದ್ದು ಕೇಂದ್ರ ಸಚಿವ ಪಿಯೂಶ್ ಗೋಯಲ್ (Piyush Goyal) ಮೆಚ್ಚಿಕೊಂಡ ರೀತಿಗೆ. ಜೊತೆಗೆ ಅದನ್ನು ಸ್ಪೂರ್ತಿಯಾಗಿ ತಗೆದುಕೊಳ್ಳುವಂತೆ ಹೂಡಿಕೆದಾರರಿಗೆ ಹೇಳಿದ್ದು. ಬೆಂಗಳೂರಿನಲ್ಲಿ (Bangalore) ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ನಡೆಯುತ್ತಿದ್ದು, ಈ ಸಮಾವೇಶದಲ್ಲಿ ಸಚಿವರು ಚಿತ್ರವನ್ನು ಉದಾಹರಣೆಯಾಗಿ ನೀಡಿದ್ದಾರೆ.
ಜಾಗತಿಕ ಬಂಡವಾಳ ಹೂಡಿಕೆದಾರರ (Investors Conference) ಸಮಾವೇಶದಲ್ಲಿ ಮಾತನಾಡಿದ ಕೇಂದ್ರ ಸಚಿವ ಪಿಯೂಶ್ ಗೋಯಲ್, ‘ಕಾಂತಾರ ಸಿನಿಮಾವನ್ನು ಉಲ್ಲೇಖ ಮಾಡಿದ್ದಲ್ಲದೇ, ಚಿತ್ರವನ್ನು ಹೊಗಳಿದರು. ಇದೊಂದು ಸಣ್ಣ ಬಂಡವಾಳದಲ್ಲಿ ನಿರ್ಮಿಸಿದ ಚಿತ್ರ. ಸೂಪರ್ ಹಿಟ್ ಆಗಿದೆ. ಬ್ಲಾಕ್ ಬಸ್ಟರ್ ಚಿತ್ರ ಎನಿಸಿಕೊಂಡಿದೆ. ನೂರಾರು ಕೋಟಿ ಬಿಸ್ನೆಸ್ ಮಾಡಿದೆ’ ಎಂದು ಅವರು ಉಲ್ಲೇಖಿಸಿದರು. ಇದನ್ನೂ ಓದಿ:ಹೈವೋಲ್ಟೇಜ್ ಆ್ಯಕ್ಷನ್ ʻಪಠಾಣ್ʼ ಟೀಸರ್ನಲ್ಲಿ ಶಾರುಖ್ ಖಾನ್ ಗ್ರ್ಯಾಂಡ್ ಎಂಟ್ರಿ
ಹೂಡಿಕೆದಾರರ ಜೊತೆ ಮಾತನಾಡಿದ ಸಚಿವರು, ‘ಸ್ಥಳೀಯ ಸಂಸ್ಕೃತಿ, ಆಚರಣೆಯ ಕಥಾಹಂದರ ಇರುವ ಚಿತ್ರ ಈ ಚಿತ್ರದ ತಯಾರಿಕೆಗೆ ಸಣ್ಣ ಬಂಡವಾಳವನ್ನೇ ಹೂಡಲಾಗಿದೆ. ಆದರೆ, ಈಗ ಆ ಚಿತ್ರ 300 ಕೋಟಿಗೂ ಹೆಚ್ಚು ಗಳಿಸಿದೆ. ಕಾಂತಾರ ಚಿತ್ರವನ್ನು ನಾನೂ ವೀಕ್ಷಿಸಿದ್ದೇನೆ. ತುಂಬಾ ಚೆನ್ನಾಗಿ ಮೂಡಿ ಬಂದಿದೆ. ಸ್ಥಳಿಯ ಕಥೆಯನ್ನೇ ಜಾಗತಿಕ ಮಟ್ಟದಲ್ಲಿ ಹೇಳುವಂತೆ ಸಿನಿಮಾವನ್ನು ಕಟ್ಟಿಕೊಟ್ಟಿದ್ದಾರೆ’ ಎಂದು ವಿವರಿಸಿದರು.