Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರಧಾನಿ ವಿರುದ್ಧ ಆಕ್ಷೇಪಾರ್ಹ ಪೋಸ್ಟರ್ ಪ್ರಚೋದನಕಾರಿ ನೀತಿ: ಕಾಂಗ್ರೆಸ್‌ ವಿರುದ್ಧ ಜೋಶಿ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಪ್ರಧಾನಿ ವಿರುದ್ಧ ಆಕ್ಷೇಪಾರ್ಹ ಪೋಸ್ಟರ್ ಪ್ರಚೋದನಕಾರಿ ನೀತಿ: ಕಾಂಗ್ರೆಸ್‌ ವಿರುದ್ಧ ಜೋಶಿ ಕಿಡಿ

Latest

ಪ್ರಧಾನಿ ವಿರುದ್ಧ ಆಕ್ಷೇಪಾರ್ಹ ಪೋಸ್ಟರ್ ಪ್ರಚೋದನಕಾರಿ ನೀತಿ: ಕಾಂಗ್ರೆಸ್‌ ವಿರುದ್ಧ ಜೋಶಿ ಕಿಡಿ

Public TV
Last updated: February 10, 2026 4:26 pm
Public TV
Share
2 Min Read
Prahlad Joshi 1
SHARE

– ರಾಹುಲ್ ಗಾಂಧಿ & ಕಾಂಗ್ರೆಸ್ ಪಕ್ಷ ತೀರಾ ಕೆಳಮಟ್ಟಕ್ಕೆ ಇಳಿಯುತ್ತಿದೆ ಎಂದ ಕೇಂದ್ರ ಸಚಿವ

ನವದೆಹಲಿ: ಸಂಸತ್ ಆವರಣದಲ್ಲಿ ಕಾಂಗ್ರೆಸ್ ಸಂಸದರು ಪ್ರಧಾನಿ ಮೋದಿ (PM Modi) ಅವರ ವಿರುದ್ಧ ಆಕ್ಷೇಪಾರ್ಹ ಪೋಸ್ಟರ್ ಹೊತ್ತೊಯ್ದಿರುವುದು ಪ್ರಚೋದನಕಾರಿ ನೀತಿ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ (Pralhad Joshi) ಕಿಡಿ ಕಾರಿದ್ದಾರೆ.

ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಉತ್ತರಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಗೆ ಆಗಮಿಸುವ ಮೊದಲು ಸಂಸತ್ತಿನಲ್ಲಿ ನಡೆದ ಘಟನೆ ತೀವ್ರ ಆಘಾತಕಾರಿ ಎಂದು ಜೋಶಿ ಕಳವಳ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಮೇಜರ್‌ ನರವಣೆ ʻಅಪ್ರಕಟಿತ ಆತ್ಮಚರಿತ್ರೆʼ ಎಬ್ಬಿಸಿದ ಬಿರುಗಾಳಿ – 2020 ಆಗಸ್ಟ್‌ 31ರ ರಾತ್ರಿಗೂ ಮುನ್ನ ಏನಾಯ್ತು?

ಪ್ರಧಾನ ಮಂತ್ರಿ ಪೀಠದವರೆಗೂ, ಗದ್ದಲದ ನಡುವೆಯೂ ವಿರೋಧ ಪಕ್ಷದ ಸಂಸದರು ಎಲ್ಲಾ ಮಿತಿಗಳನ್ನು ದಾಟಿದ್ದಾರೆ. ಇವರದ್ದು ಚರ್ಚೆ ಆಗಿರಲಿಲ್ಲ. ಪ್ರತಿಭಟನೆಯೂ ಆಗಿರಲಿಲ್ಲ. ಇದು ಕೇವಲ ಉದ್ದೇಶಪೂರ್ವಕವಾದಂತಹ ಪ್ರಚೋದನೆಯಾಗಿತ್ತು ಎಂದು ಜೋಶಿ ಆರೋಪಿಸಿದ್ದಾರೆ. ಒಬ್ಬ ಸಂಸದರಾಗಿ ಸದನದ ಘನತೆ ಕಾಪಾಡಿಕೊಳ್ಳುವುದು ನಮ್ಮ ಆದ್ಯ ಕರ್ತವ್ಯ. ಆದರೆ, ಕಾಂಗ್ರೆಸ್ ಸಂಸದರ ನಡೆ ತೀವ್ರ ವಿರೋಧಾಭಾಸವಾಗಿದೆ ಎಂದು ಆಕ್ಷೇಪಿಸಿದ್ದಾರೆ.

pm modi mann ki baat

ಸಂಸತ್ತಿನ ಆವರಣದೊಳಗೆ ಗೌರವಾನ್ವಿತ ಪ್ರಧಾನಿಯವರ ವಿರುದ್ಧ ಆಕ್ಷೇಪಾರ್ಹ ಪೋಸ್ಟರ್‌ಗಳನ್ನು ಹೊತ್ತೊಯ್ಯುವುದು ರಾಹುಲ್‌ ಗಾಂಧಿ ಮತ್ತು ಕಾಂಗ್ರೆಸ್ ಅದೆಷ್ಟು ಕೆಳಮಟ್ಟಕ್ಕೆ ಇಳಿಯುತ್ತಿದೆ ಎಂಬುದನ್ನು ತೋರಿಸುತ್ತದೆ ಎಂದು ಪ್ರತಿಕ್ರಿಯಿಸಿದ್ದಾರೆ.

ರಾಜ್ಯದ ಖಜಾನೆ ಖಾಲಿ ಮಾಡಿದವರು ಮೊದಲು ತಮ್ಮನ್ನೇ ಪ್ರಶ್ನಿಸಿಕೊಳ್ಳಲಿ. ಭಾರತ-ಅಮೆರಿಕ ವಾಣಿಜ್ಯ ಒಪ್ಪಂದ ಟೀಕಿಸುವ ಮೊದಲು ಸಿಎಂ ಸಿದ್ದರಾಮಯ್ಯ ಅವರು, ಆರ್ಥಿಕ ಸಂಪದ್ಭರಿತವಾಗಿದ್ದ ರಾಜ್ಯದ ಖಜಾನೆ ಖಾಲಿ ಮಾಡಿರುವ ಬಗ್ಗೆ ತಮ್ಮನ್ನೊಮ್ಮೆ ಪ್ರಶ್ನೆ ಮಾಡಿಕೊಳ್ಳಲಿ ಎಂದು ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ರಾಜ್ಯ ರಾಜಕೀಯಕ್ಕೆ ಮರಳುವ ಸುಳಿವು ನೀಡಿದ ರೋಷನ್ ಬೇಗ್

ಆರ್ಥಿಕ ಸಂಪತ್ತಿನಿಂದ ಕೂಡಿದ್ದ ಕರ್ನಾಟಕದ ಖಜಾನೆಯನ್ನು ಕಾಂಗ್ರೆಸ್ ಸರ್ಕಾರ ಇಂದು ಖಾಲಿ ಮಾಡಿದ್ದಲ್ಲದೆ, ಸಂಪೂರ್ಣ ಅಭಿವೃದ್ಧಿಯನ್ನು ಸ್ಥಗಿತಗೊಳಿಸಿದೆ. ಹೂಡಿಕೆದಾರರ ವಿಶ್ವಾಸವನ್ನು ಸಹ ಕಳೆದುಕೊಂಡಿದೆ. ಇದೆಲ್ಲಾ ಏಕೆ? ಎಂಬುದನ್ನು ಸಿಎಂ ಉತ್ತರಿಸಲಿ ಎಂದಿದ್ದಾರೆ.

ಕಾಂಗ್ರೆಸ್ ಪಕ್ಷ ಮೊದಲು ‘ಭಾರತದ ಹಿತಾಸಕ್ತಿ’ ಕುರಿತು ಉಪನ್ಯಾಸ ನೀಡುವುದೊಳಿತು. 2008ರಲ್ಲಿ 26/11ರ ನಂತರ ಮುಂಬೈ ಹೊತ್ತಿ ಉರಿಯುತ್ತಿದ್ದರೂ ಕಾಂಗ್ರೆಸ್ ಮೌನವಹಿಸಿತು. ಹಿರಿಯ ಕಾಂಗ್ರೆಸ್ ನಾಯಕರು ಹಾಗೂ ಮಾಜಿ ಗೃಹ ಸಚಿವರು ಬಾಹ್ಯ ರಾಜತಾಂತ್ರಿಕ ಒತ್ತಡಕ್ಕೆ ಮಣಿದ ಪರಿಣಾಮ ಭಾರತ ನಿರ್ಣಾಯಕ ನಿರ್ಧಾರ ತೆಗೆದುಕೊಳ್ಳುವಲ್ಲಿ ವಿಫಲವಾಗಿತ್ತು ಎಂಬುದನ್ನು ಜೋಶಿ ಸಿಎಂಗೆ ನೆನಪಿಸಿದ್ದಾರೆ.

2020 ಮತ್ತು ಹಿಂದಿನ ವರ್ಷಗಳಲ್ಲಿ ನಮ್ಮ ಸೈನಿಕರು ಪಿಎಲ್‌ಎ ಆಕ್ರಮಣವನ್ನು ಎದುರಿಸುತ್ತಿದ್ದರೆ, ಇತ್ತ ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ಹಿರಿಯ ನಾಯಕರು ಚೀನಾದ ಅಧಿಕಾರಿಗಳೊಂದಿಗೆ ಗೌಪ್ಯ ಸಭೆ ನಡೆಸಿದರು. ಯಾವುದೊಂದು ಬಹಿರಂಗವಾಗದಂತೆ ನೋಡಿಕೊಂಡರು. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನೀತಿಗಳು ನಿಷ್ಕ್ರಿಯಗೊಂಡವು ಎಂದು ಆರೋಪಿಸಿದ್ದಾರೆ.

ಕಾಂಗ್ರೆಸ್ ಆಡಳಿತಾವಧಿಯಲ್ಲಿ ಭಾರತದ ನೀತಿಗಳನ್ನು ದುರ್ಬಲಗೊಳಿಸಿ, ಅವಮಾನಿಸಲಾಯಿತು. ಜಾಗತಿಕ ವಿಶ್ವಾಸ ಮತ್ತು ಕಾರ್ಯತಂತ್ರದ ನಿಲುವನ್ನು ಹಾಳು ಮಾಡಿತು. ಅಲ್ಪಾವಧಿಯ ರಾಜಕೀಯಕ್ಕಾಗಿ ಭಾರತದ ಸ್ಥಾನಮಾನವನ್ನು ದುರ್ಬಲಗೊಳಿಸಿತು. ಇದೆಲ್ಲಾ ಗೊತ್ತಿಲ್ಲದ ವಿಚಾರವೇ ಎಂದು ಚಾಟಿ ಬೀಸಿದ್ದಾರೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಭಾರತ ದೃಢತೆ, ಆತ್ಮವಿಶ್ವಾಸ ಮತ್ತು ಅತ್ಯಂತ ಸ್ಪಷ್ಟವಾಗಿ ಜಾಗತಿಕವಾಗಿ ಯಶಸ್ವಿ ಮಾತುಕತೆ ನಡೆಸುತ್ತಿದೆ. ಕಾಂಗ್ರೆಸ್ ಇದನ್ನು ಅರಿತುಕೊಳ್ಳಲಿ. ಏನೇನೋ ಬಡಬಡಿಸುವುದನ್ನು ನಿಲ್ಲಿಸಲಿ ಎಂದು ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.

TAGGED:congressNew DelhiPM ModiPralhad Joshiಕಾಂಗ್ರೆಸ್ನವದೆಹಲಿಪಿಎಂ ಮೋದಿಪ್ರಹ್ಲಾದ್ ಜೋಶಿ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

container ship
Latest

ಈಗ ಚೀನಾ ಹಡಗುಗಳಿಗೂ ಶಾಕ್‌ – ಅನುಮತಿ ನೀಡದ ಇರಾನ್‌

Public TV
By Public TV
7 hours ago
davanagere south by election local youth express anger against sadiq pailwan
Davanagere

ಕಾಂಗ್ರೆಸ್ ಜೊತೆ ಪೈಲ್ವಾನ್‌ಗೂ ಮಣ್ಣು ಮುಕ್ಕಿಸುತ್ತೇವೆ – ಬೀದಿಗಿಳಿದು ಆಕ್ರೋಶ ಹೊರಹಾಕಿದ ಮುಸ್ಲಿಂ ಯುವಕರು

Public TV
By Public TV
8 hours ago
PM Modi virtual meeting chief ministers and lieutenant governors
Latest

ಕೋವಿಡ್‌ ರೀತಿ ರಾಜ್ಯ, ಕೇಂದ್ರ ಒಗ್ಗಟ್ಟಾಗಿ ಇಂಧನ ಬಿಕ್ಕಟ್ಟನ್ನು ಎದುರಿಸೋಣ: ಮೋದಿ ಕರೆ

Public TV
By Public TV
8 hours ago
karwar demand for firewood increases due to cylinder shortage forest department grants permission to cut 3 lakh trees
Latest

ಸಿಲಿಂಡರ್ ಅಭಾವದಿಂದ ಕಟ್ಟಿಗೆಗೆ ಹೆಚ್ಚಿದ ಬೇಡಿಕೆ – ಅರಣ್ಯ ಇಲಾಖೆಯಿಂದ 3ಲಕ್ಷ ಮರಗಳ ಕಟಾವಿಗೆ ಅನುಮತಿ

Public TV
By Public TV
8 hours ago
man killed pet dog in honnali
Crime

ಸಾಕು ನಾಯಿ ಬೊಗಳಿದ್ದಕ್ಕೆ ಕುಡುಗೋಲಲ್ಲಿ ಕೊಚ್ಚಿ ಕೊಂದ ಪಾಪಿ

Public TV
By Public TV
9 hours ago
Basangouda Patil Yatnal
Kolar

ಐಪಿಎಲ್‌ ಟಿಕೆಟ್‌ ಬೇಕೆನ್ನುವ ಶಾಸಕರಿಗೆ ನಾಚಿಕೆಯಾಗಬೇಕು: ಯತ್ನಾಳ್‌ ಕಿಡಿ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?