Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹೆಸರು ಬದಲಾವಣೆಗೆ ಮುಂದಾದ ಶೋಭಾ ಕರಂದ್ಲಾಜೆ – ಏನಿದು ಹೊಸ ವರಸೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಹೆಸರು ಬದಲಾವಣೆಗೆ ಮುಂದಾದ ಶೋಭಾ ಕರಂದ್ಲಾಜೆ – ಏನಿದು ಹೊಸ ವರಸೆ?

Karnataka

ಹೆಸರು ಬದಲಾವಣೆಗೆ ಮುಂದಾದ ಶೋಭಾ ಕರಂದ್ಲಾಜೆ – ಏನಿದು ಹೊಸ ವರಸೆ?

Public TV
Last updated: September 29, 2022 12:14 pm
Public TV
Share
3 Min Read
Shobha Karandlaje 1 1
SHARE

ಬೆಂಗಳೂರು: ಕರಾವಳಿ ಮೂಲದವರಾದ ಕೇಂದ್ರ ಕೃಷಿ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ಇದೀಗ ದಿಢೀರ್ ಆಗಿ ತಮ್ಮ ಹೆಸರನ್ನು ಬದಲಾವಣೆ ಮಾಡಿಕೊಳ್ಳಲು ಮುಂದಾಗಿದ್ದಾರೆ ಎಂಬ ಚರ್ಚೆಯೊಂದು ಜೋರಾಗಿದೆ.

BJP

ರಾಜ್ಯ ರಾಜಕೀಯದಿಂದ ಕೇಂದ್ರ ಸಚಿವರಾಗುವ ಮಟ್ಟಿಗೆ ಬೆಳೆದಿರುವ ಶೋಭಾ ಕರಂದ್ಲಾಜೆ ಇದೀಗ ತಮ್ಮ ಹೆಸರನ್ನು ಬದಲಾವಣೆ ಮಾಡಿಕೊಳ್ಳಲು ಮುಂದಾಗಿದ್ದಾರೆ ಎಂಬುದಾಗಿ ಮೂಲಗಳಿಂದ ತಿಳಿದುಬಂದಿದೆ. ಪ್ರಸ್ತುತ ಇರುವ ಸರ್ ನೇಮ್ ‘ಕರಂದ್ಲಾಜೆ’ ಬದಲಿಗೆ ‘ಗೌಡ’ ಸೇರಿಸಲು ಪ್ರಕ್ರಿಯೆ ನಡೆಯುತ್ತಿದೆ ಎಂದು ವರದಿಯಾಗಿದ್ದು, ಮುಂದೆ ಅವರ ಹೆಸರು ‘ಶೋಭಾ ಗೌಡ’ (Shobha Gowda) ಆಗುವ ಸಾಧ್ಯತೆ ಇದೆ. ಇದನ್ನೂ ಓದಿ: ಕೇರಳ, ತಮಿಳುನಾಡಿನಲ್ಲೂ PFI ಬ್ಯಾನ್

Shobha Karandlaje 3

ಹೆಸರು ಬದಲಾವಣೆ ಯಾಕೆ..?:
ಇದೀಗ ಯಾಕೆ ಶೋಭಾ ಕರಂದ್ಲಾಜೆ ಹೆಸರು ಬದಲಾವಣೆಗೆ ಮುಂದಾಗಿದ್ದಾರೆ ಎಂಬ ಪ್ರಶ್ನೆ ಕಾಡುತ್ತಿದೆ. ಈ ನಡುವೆ ಹೆಸರು ಬದಲಾವಣೆಗೆ ಜ್ಯೋತಿಷಿಗಳ ಸಲಹೆಯೋ? ಸಂಖ್ಯಾಶಾಸ್ತ್ರವೋ? ಅಥವಾ ದೆಹಲಿ ಮೂಲದ ನಾಯಕರ ಸಲಹೆಯೋ ಎಂಬ ಅನುಮಾನವು ಇದೆ. ಬಿಜೆಪಿಯಲ್ಲಿ (BJP) ಒಂದು ವರ್ಗದ ಪ್ರಕಾರ 2023ರ ಚುನಾವಣೆಗೆ ತಯಾರಿ ನಡೆಸಿ ಶೋಭಾ ಗೌಡ ಎಂದು ಹೆಸರು ಬದಲಾವಣೆ ಮಾಡಿಕೊಳ್ಳಲು ಮುಂದಾಗಿದ್ದಾರೆ ಎನ್ನಲಾಗುತ್ತಿದೆ. ಜೊತೆಗೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಹೆಸರು ಬದಲಾಯಿಸಿಕೊಂಡು ರಾಜ್ಯ ರಾಜಕಾರಣಕ್ಕೆ ಶೋಭಾ ಕರಂದ್ಲಾಜೆ ಬರಲಿದ್ದಾರೆ. ರಾಜ್ಯದಲ್ಲಿ ಮಹತ್ವದ ಸ್ಥಾನ ಅಲಂಕರಿಸಲಿದ್ದಾರೆ ಎಂಬ ವದಂತಿ ಹರಿದಾಡುತ್ತಿದೆ.  ಇದನ್ನೂ ಓದಿ: PFI ಸಂಘಟನೆಗಳ ಆಸ್ತಿ ಬಗ್ಗೆ ಸರ್ವೆ ಕಾರ್ಯ ಆಗ್ತಿದೆ: ಆರಗ ಜ್ಞಾನೇಂದ್ರ

BJP JDS CON

ಚುನಾವಣಾ ವರ್ಷ ಆಗಿರುವುದರಿಂದಾಗಿ ಈಗಾಗಲೇ ಬಿಜೆಪಿ ಚುನಾವಣೆಗೆ ಸಿದ್ಧತೆ ಆರಂಭಿಸಿದೆ. ರಾಜ್ಯದಲ್ಲಿ ಒಕ್ಕಲಿಗ ಟ್ರಂಪ್ ಕಾರ್ಡ್ ಬಳಕೆಗೆ ಬಿಜೆಪಿ ಹೈಕಮಾಂಡ್ ಪ್ಲಾನ್ ಏನಾದರೂ ಹಾಕಿದ್ಯಾ ಎಂಬ ಪ್ರಶ್ನೆ ಕಾಡುತ್ತಿದೆ. ಯಾಕೆಂದರೆ ಶೋಭಾ ಕರಂದ್ಲಾಜೆ ತಂದೆ ದಿವಂಗತ ಮೋನಪ್ಪ ಗೌಡ ಆದರೆ ಶೋಭಾ ಈವರೆಗೆ ತಮ್ಮ ಸರ್ ನೇಮ್ ಆಗಿ ಕರಂದ್ಲಾಜೆ ಬಳಸುತ್ತಿದ್ದರು. ಇದೀಗ ಕರಂದ್ಲಾಜೆ ಬದಲಿಗೆ ಗೌಡ ಸೇರಿಸಿ 2023ರ ಚುನಾವಣಾ ಅಖಾಡದಲ್ಲಿ ಹಳೇ ಮೈಸೂರು ಭಾಗದಲ್ಲಿ ಒಕ್ಕಲಿಗ ಫ್ಯಾಕ್ಟರ್, ಕರಾವಳಿ ಭಾಗದಲ್ಲಿ ಹಿಂದುತ್ವ ಫ್ಯಾಕ್ಟರ್‌ಗೆ ಕೈ ಹಾಕಿದ್ಯಾ ಬಿಜೆಪಿ ಹೈಕಮಾಂಡ್ ಎಂಬ ಅನುಮಾನ ಮೂಡಿದೆ.

BJP 1

ಇದರೊಂದಿಗೆ ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ನಳಿನ್ ಕುಮಾರ್ ಕಟೀಲ್ (Nalinkumar Kateel) ಅವರ ಅಧಿಕಾರವಧಿ ಅಂತ್ಯಗೊಂಡಿದೆ. ಇದೀಗ ಮುಂದಿನ ರಾಜ್ಯಾಧ್ಯಕ್ಷರ ರೇಸ್‍ನಲ್ಲಿ ಶೋಭಾ ಕರಂದ್ಲಾಜೆ ಕೂಡ ಇದ್ದು, ಹೀಗಾಗಿ ಹೆಸರು ಬದಲಾವಣೆಯೊಂದಿಗೆ ಸಿ.ಟಿ ರವಿ (C.T Ravi) ಅವರ ಪ್ರಬಲ ಸ್ಪರ್ಧಿಯಾಗುವ ಸೂಚನೆ ನೀಡಿದ್ದಾರೆ. ಇದೀಗ ಮುಂಚೂಣಿಯಲ್ಲಿ ಕೇಳಿ ಬರುತ್ತಿರುವ ಹೆಸರುಗಳ ಪೈಕಿ ಸಿ.ಟಿ ರವಿ ಹಾಗೂ ಶೋಭಾ ಒಕ್ಕಲಿಗರು (Vokkaliga). ಇದೀಗ ಇವರಿಬ್ಬರಲ್ಲಿ ಒಬ್ಬರಿಗೆ ಮಹತ್ವದ ಸ್ಥಾನ ನೀಡಿ ಒಕ್ಕಲಿಗರ ಮತ ಸೆಳೆಯಲು ಬಿಜೆಪಿ ಪ್ಲಾನ್ ಮಾಡಿದೆ. ಈ ಪೈಕಿ ಶೋಭಾ ಅವರಿಗೆ ಉನ್ನತ ಸ್ಥಾನಮಾನ ನೀಡಿ ಮಹಿಳೆಯರಿಗೆ ಉನ್ನತ ಸ್ಥಾನ ನೀಡಿದ ಹೆಸರಿನೊಂದಿಗೆ ಒಕ್ಕಲಿಗರ ಮತ ಸೆಳೆಯುವ ಮೂಲಕ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆಯುವ ಪ್ಲಾನ್ ಹಾಕಿಕೊಂಡಂತಿದೆ. ಇದರೊಂದಿಗೆ ಈಗಾಗಲೇ ಕಾಂಗ್ರೆಸ್‍ನಲ್ಲಿ ಒಕ್ಕಲಿಗ ನಾಯಕರಾಗಿ ಡಿ.ಕೆ ಶಿವಕುಮಾರ್ (D.K Shivakumar) ಕಾಣಿಸಿಕೊಂಡರೆ, ಜೆಡಿಎಸ್‍ನಲ್ಲಿ ಹೆಚ್.ಡಿ ಕುಮಾರಸ್ವಾಮಿ (H.D Kumaraswamy) ಪ್ರಬಲರಾಗಿ ಗುರುತಿಸಿಕೊಂಡಿದ್ದಾರೆ. ಇದೀಗ ಬಿಜೆಪಿಯಿಂದ ಶೋಭಾ ಕರಂದ್ಲಾಜೆಯನ್ನು ಒಕ್ಕಲಿಗ ನಾಯಕಿಯಾಗಿ ಮಾಡಿ ಕಾಂಗ್ರೆಸ್ (Congress), ಜೆಡಿಎಸ್‍ಗೆ (JDS) ಟಕ್ಕರ್ ನೀಡಲು ಬಿಜೆಪಿ ಹೈಕಮಾಂಡ್ ಚಿಂತಿಸಿದಂತಿದೆ.

ಈ ನಡುವೆ ಶೋಭಾ ಕರಂದ್ಲಾಜೆ ಆಪ್ತ ವಲಯ ಹೆಸರು ಬದಲಾವಣೆ ಬಗ್ಗೆ ಮಾಹಿತಿ ಇಲ್ಲ ಎನ್ನುತ್ತಿದೆ. ಹಾಗಾದ್ರೆ ಶೋಭಾ ಕರಂದ್ಲಾಜೆ ಹೆಸರು ಬದಲಾವಣೆಗೆ ನಿಜಕ್ಕೂ ಮುಂದಾಗಿದ್ದಾರಾ? ಅಥವಾ ಬಿಜೆಪಿಯೊಳಗಿನ ಆಂತರಿಕ ರಾಜಕೀಯ ರೆಕ್ಕೆಪುಕ್ಕನಾ? ಮುಂದಿನ ದಿನಗಳಲ್ಲಿ ಈ ಬಗ್ಗೆ ಸ್ಪಷ್ಟತೆ ಸಿಗುವ ಸಾಧ್ಯತೆ ಇದೆ.

Live Tv
[brid partner=56869869 player=32851 video=960834 autoplay=true]

TAGGED:bjpCT RaviDK Shivakumarhd kumaraswamyNameshobha karandlajeUnion MinisterVokkaligaಒಕ್ಕಲಿಗಗೌಡಬಿಜೆಪಿಶೋಭಾ ಕರಂದ್ಲಾಜೆ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

F16 Fighter Jet
Latest

ಅಮೆರಿಕದ ಮತ್ತೊಂದು F-16 ಜೆಟ್‌ ಹೊಡೆದುರುಳಿಸಿದ ಇರಾನ್‌; ವಿಶ್ವವಿದ್ಯಾಲಯಗಳನ್ನ ಉಡಾಯಿಸೋದಾಗಿ ಬೆದರಿಕೆ

Public TV
By Public TV
21 minutes ago
Siddaramaiah 4
Districts

ನ್ಯಾಯ ವಿತರಣೆಯಲ್ಲಿ ಪೊಲೀಸರು ಯಾವುದೇ ಕಾರಣಕ್ಕೂ ರಾಜಿಯಾಗಬಾರದು: ಸಿದ್ದರಾಮಯ್ಯ

Public TV
By Public TV
33 minutes ago
Alok Kumar
Bengaluru City

`ಜೈಲಲ್ಲಿ ಮೊಬೈಲ್ ಕೊಟ್ಟಿದ್ದೇ ಅಲೋಕ್ ಕುಮಾರ್’ – ವಿಡಿಯೋ ಮಾಡಿ ಹರಿಬಿಟ್ಟಿದ್ದ ವಿಚಾರಣಾಧೀನ ಕೈದಿಗಳು

Public TV
By Public TV
34 minutes ago
Kolara 3
Districts

ಕೋಲಾರದಲ್ಲಿ ಶೋಭಯಾತ್ರೆ – ಇಂದಿನಿಂದ 7 ದಿನ ಶ್ರೀ ಕಾಲರುದ್ರ ಮಹಾಯಜ್ಞ

Public TV
By Public TV
55 minutes ago
Gurugram Thar Accident Kills Garndfather and grandsons
Crime

ನಡೆದುಕೊಂಡು ಹೋಗುತ್ತಿದ್ದವರಿಗೆ ಥಾರ್ ಡಿಕ್ಕಿ – ಅಜ್ಜ, ಇಬ್ಬರು ಮೊಮ್ಮಕ್ಕಳು ದುರ್ಮರಣ

Public TV
By Public TV
1 hour ago
indian LPG Tankers
Latest

ಹಾರ್ಮುಜ್‌ ದಾಟಲು ಗ್ರೀನ್‌ ಸಿಗ್ನಲ್‌ – ಭಾರತಕ್ಕೆ ಬಂತು LPG ಟ್ಯಾಂಕರ್‌, ಪೈನ್‌ ಗ್ಯಾಸ್‌ ಹೊತ್ತ ಮತ್ತೆರಡು ಹಡಗು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?