ಚಿಕ್ಕೋಡಿ: ಅಮಿತ್ ಶಾ (Amit Shah) ಖಡಕ್ ವಾರ್ನಿಂಗ್ ಬಳಿಕ ಬೆಳಗಾವಿ (Belagavi) ಬಿಜೆಪಿ (BJP) ಮುಖಂಡರು ಒಗ್ಗಟ್ಟಿನ ಮಂತ್ರ ಜಪಿಸಲು ಮುಂದಾಗಿದ್ದಾರೆ. ಇಷ್ಟು ದಿನ ನಾ ಒಂದು ದಿಕ್ಕು ತಾ ಒಂದು ದಿಕ್ಕು ಎಂದು ಮುಖ ತಿರುಗಿಸಿ ಓಡಾಡುತ್ತಿದ್ದ ಅಥಣಿ ಶಾಸಕ ಮಹೇಶ್ ಕುಮಠಳ್ಳಿ (Mahesh Kumathalli) ಹಾಗೂ ಲಕ್ಷ್ಮಣ ಸವದಿ (Laxman Savadi) ಇದೀಗ ಒಗ್ಗಟ್ಟು ಪ್ರದರ್ಶಿಸಿದ್ದಾರೆ.
ಅಥಣಿ ಪಟ್ಟಣದಲ್ಲಿ ಇಬ್ಬರು ನಾಯಕರು ಜೊತೆ ಜೊತೆಯಾಗಿ ಸಂಚಾರ ನಡೆಸಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದ್ದಾರೆ. ಇಷ್ಟು ದಿನ ಒಬ್ಬರ ಕಾರ್ಯಕ್ರಮಕ್ಕೆ ಒಬ್ಬರು ಗೈರಾಗುತ್ತಿದ್ದರು. ಆದರೆ ಅಮಿತ್ ಶಾ ಖಡಕ್ ವಾರ್ನಿಂಗ್ ಬಳಿಕ ಒಗ್ಗಟ್ಟಿನ ಮಂತ್ರ ಜಪಿಸಿದ್ದಾರೆ.
ಇದೀಗ ಇಬ್ಬರು ನಾಯಕರು ಒಗ್ಗಟ್ಟಿನಿಂದ ಮುದುವರಿಯುತ್ತಿರುವುದಕ್ಕೆ ಪಕ್ಷದ ಕಾರ್ಯಕರ್ತರ ಗೊಂದಲ ನಿವಾರಣೆ ಆದಂತಾಗಿದೆ. ಬೆಳಗಾವಿಗೆ ಅಮಿತ್ ಶಾ ಭೇಟಿ ನಂತರ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ಕೂಡಾ ಭಿನ್ನಮತ ಶಮನಕ್ಕೆ ಯತ್ನಿಸಿದ್ದರು. ಇಬ್ಬರು ರಾಷ್ಟ್ರೀಯ ನಾಯಕರ ಭೇಟಿ ನಂತರ ಬಿಜೆಪಿ ನಾಯಕರು ಒಗ್ಗಟ್ಟಾಗಿ ಚುನಾವಣೆ ಎದುರಿಸಲು ಸಜ್ಜಾಗಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಪಕ್ಷದ ತಾಯಿ ಬಂಜೆಯಾಗಿದ್ದಾಳೆ, ಇಲ್ಲಿ ಮಕ್ಕಳು ಹುಟ್ಟುವ ಪ್ರಶ್ನೆಯೇ ಇಲ್ಲ: ಲಕ್ಷ್ಮಣ ಸವದಿ
ಈ ಸಂದರ್ಭದಲ್ಲಿ ಶಾಸಕ ಮಹೇಶ್ ಕುಮಠಳ್ಳಿ, ಸವದಿ ಎಂಎಲ್ಸಿ. ನಾನು ಅಥಣಿ ಎಂಎಲ್ಎ ಎನ್ನುವ ಸಂದೇಶವನ್ನು ಕಾರ್ಯಕರ್ತರಿಗೆ ರವಾನಿಸಿದ್ದಾರೆ. ಇದಕ್ಕೆ ಪರಿಷತ್ ಸದಸ್ಯ ಲಕ್ಷ್ಮಣ ಸವದಿ ಕೂಡಾ ಸಹಮತ ಸೂಚಿಸಿದ ಮಾತುಗಳನ್ನು ಕಾರ್ಯಕರ್ತರ ಮುಂದೆ ಹೇಳಿಕೊಂಡಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಸವದಿ ಅವರನ್ನು ಕುಮಠಳ್ಳಿ ಸೋಲಿಸಿ ಬಳಿಕ ಬಿಜೆಪಿ ಸೇರಿ ಅಥಣಿ ಕ್ಷೇತ್ರದಿಂದ ಗೆಲುವು ಸಾಧಿಸಿದ್ದರು. ಬಳಿಕ ಅಥಣಿ ಕ್ಷೇತ್ರದ ಇಬ್ಬರ ನಡುವಿನ ಭಿನ್ನಮತ ಹಾಗೇ ಮುಂದುವರಿದಿತ್ತು. ಸದ್ಯ ಅಮಿತ್ ಶಾ ಭೇಟಿ ಬಳಿಕ ಇಬ್ಬರು ನಾಯಕರು ಒಂದಾಗಿದ್ದಾರೆ. ಇದನ್ನೂ ಓದಿ: 13 ಜನರನ್ನ ಮಂಚದ ಮೇಲೆ ಮಲಗಿಸಿ ಸರ್ಕಾರ ತಂದ್ರಲ್ಲ ನಾಚಿಕೆ ಆಗ್ಬೇಕು ನಿಮ್ಗೆ – ಸಿಎಂ ಇಬ್ರಾಹಿಂ
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k