Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಎಸ್‍ವೈ ನಾಯಕತ್ವದ ವಿರುದ್ಧ ಪಕ್ಷದೊಳಗೆ ಭಾರೀ ಅಸಹನೆ?- 4 ಪುಟಗಳ ಅನಾಮಧೇಯ ಪತ್ರ ವೈರಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬಿಎಸ್‍ವೈ ನಾಯಕತ್ವದ ವಿರುದ್ಧ ಪಕ್ಷದೊಳಗೆ ಭಾರೀ ಅಸಹನೆ?- 4 ಪುಟಗಳ ಅನಾಮಧೇಯ ಪತ್ರ ವೈರಲ್

Bengaluru City

ಬಿಎಸ್‍ವೈ ನಾಯಕತ್ವದ ವಿರುದ್ಧ ಪಕ್ಷದೊಳಗೆ ಭಾರೀ ಅಸಹನೆ?- 4 ಪುಟಗಳ ಅನಾಮಧೇಯ ಪತ್ರ ವೈರಲ್

Public TV
Last updated: February 18, 2020 1:11 pm
Public TV
Share
3 Min Read
yeddyurappa bsy serious thinking
SHARE

ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರಕ್ಕೆ 6 ತಿಂಗಳಾಗಿದೆ. ಆದರೆ ಈ ಆರು ತಿಂಗಳಲ್ಲಿ ನಡೆದ ವಿದ್ಯಮಾನಗಳು ಹತ್ತುಹಲವು. ಯಡಿಯೂರಪ್ಪ ಅವರಿಗೆ ಈಗಿನ ಸರ್ಕಾರ ನಡೆಸುವುದು ಕತ್ತಿ ಮೇಲಿನ ನಡಿಗೆಯಂತಾಗಿದೆ. ಒಂದು ಕಡೆ ಬಿಜೆಪಿ ಹೈಕಮಾಂಡ್ ಅಸಹಕಾರ. ಇನ್ನೊಂದು ಕಡೆ ಸ್ವಪಕ್ಷೀಯರ ಅಸಹಕಾರ, ಅಸಹನೆ. ಇನ್ನೊಂದು ಕಡೆ ಆರ್ಥಿಕ ದುಸ್ಥಿತಿ. ಮತ್ತೊಂದು ಕಡೆ ವಲಸಿಗರನ್ನು ನಿಭಾಯಿಸೋ ತಲೆನೋವು. ಸಚಿವಾಕಾಂಕ್ಷಿಗಳ ಒತ್ತಡ ಲಾಬಿ. ಇಷ್ಟೆಲ್ಲವನ್ನೂ ಸಂಭಾಳಿಸಿಕೊಂಡು ಸಿಎಂ ಯಡಿಯೂರಪ್ಪ ಆಡಳಿತ ನಡೆಸುವ ಅನಿವಾರ್ಯತೆಗೆ ಸಿಕ್ಕಿಬಿದ್ದಿದ್ದಾರೆ.

letter

ಆದರೆ ಈಗ ಯಡಿಯೂರಪ್ಪರಿಗೆ ಆಘಾತಕಾರಿ ತರುವ ಬೆಳವಣಿಗೆಯೊಂದು ಸ್ಪಪಕ್ಷೀಯರಿಂದಲೇ ನಡೆದಿದೆ. ಯಡಿಯೂರಪ್ಪ ನಾಯಕತ್ವದ ವಿರುದ್ಧವೇ ವಿರೋಧಿ ಬಣ ತೆರೆ ಹಿಂದೆಯೇ ನಿಂತುಕೊಂಡು ದನಿ ಎತ್ತಿದೆ. ಯಡಿಯೂರಪ್ಪ ಕಾರ್ಯವೈಖರಿ ಬಗ್ಗೆ ಪಕ್ಷದ ಒಳಗಿನವರಲ್ಲೇ ಅಸಹನೆ, ಅತೃಪ್ತಿ ಮನೆ ಮಾಡಿದೆಯಾ ಎಂಬ ಅನುಮಾನ ಬಲವಾಗಿ ಮೂಡಿದೆ. ಇದಕ್ಕೆ ಕಾರಣವಾಗಿರೋದು ಆ ನಾಲ್ಕು ಪುಟಗಳ ಅನಾಮಧೇಯ ಪತ್ರ.

bs yeddyurappa

ಹೌದು. ಕಳೆದ ಕೆಲವು ದಿನಗಳಿಂದಲೂ ರಾಜ್ಯ ಬಿಜೆಪಿ ಪಾಳಯದಲ್ಲಿ ನಾಲ್ಕು ಪುಟಗಳ ಆ ಅನಾಮಧೇಯರು ಬರೆದ ಅನಾಮಧೇಯ ಪತ್ರವೊಂದು ಹರಿದಾಡ್ತಿದೆ. ಸಾಮಾಜಿಕ ಜಾಲತಾಣದಲ್ಲೂ ಈ ಪತ್ರ ಭಾರೀ ಸದ್ದು ಮಾಡ್ತಿದೆ ಎನ್ನಲಾಗಿದೆ. ಸಿಎಂ ಯಡಿಯೂರಪ್ಪರ ಕಾರ್ಯವೈಖರಿ, ಪುತ್ರ ವಿಜಯೇಂದ್ರರ ಬಗ್ಗೆ ಈ ಅನಾಮಧೇಯ ಪತ್ರದಲ್ಲಿ ತೀವ್ರ ಆಕ್ಷೇಪ ವ್ಯಕ್ತಪಡಿಸಲಾಗಿದೆ. ಯಡಿಯೂರಪ್ಪರನ್ನು ಒಂದೆಡೆ ಹೊಗಳಲಾಗಿದ್ದರೆ, ಇನ್ನೊಂದೆಡೆ ಅವರ ಕಾರ್ಯವೈಖರಿ ಬಗ್ಗೆ ತೀವ್ರ ಅಸಮಾಧಾನ ಹೊರಹಾಕಲಾಗಿದೆ. ಇತ್ತ ಆಡಳಿತದಲ್ಲಿ ಮೂಗು ತೂರಿಸುತ್ತಿರುವ ಪುತ್ರ ವಿಜಯೇಂದ್ರರ ಬಗ್ಗೆನೂ ಆಕ್ಷೇಪ ಪತ್ರದಲ್ಲಿ ವ್ಯಕ್ತಪಡಿಸಲಾಗಿದೆ.

letter 2

ಅನಾಮಧೇಯ ಪತ್ರದಲ್ಲಿ ಏನಿದೆ..?
ಯಡಿಯೂರಪ್ಪ ರಾಜಕೀಯವಾಗಿ ನಿವೃತ್ತಿ ತೆಗೆದುಕೊಂಡು ಪಕ್ಷದಲ್ಲಿ ಹಿರಿಯ ಮಾರ್ಗದರ್ಶಕರಾಗಿ ಮುಂದುವರಿಯಲಿ ಅನ್ನೋದು ಈ ಪತ್ರದ ಪ್ರಮುಖ ಆಗ್ರಹ. ಯಡಿಯೂರಪ್ಪ ಮಾರ್ಗದರ್ಶಕರಾದರೂ ಆಗಲಿ ಅಥವಾ ಯಾವುದಾದರೊಂದು ರಾಜ್ಯದ ರಾಜ್ಯಪಾಲರಾಗಲಿ. ಆದರೆ ಸದ್ಯ ಸಿಎಂ ಸ್ಥಾನದಲ್ಲಿ ಮುಂದುವರಿಯುವುದು ಬೇಡ ಅನ್ನೋ ಭಾವನೆಯನ್ನು ಅನಾಮಧೇಯರು ಪತ್ರದ ಮೂಲಕ ರವಾನಿಸಿದ್ದಾರೆ. ನಾವು ಯಡಿಯೂರಪ್ಪ ಅವರ ನಿಷ್ಠಾವಂತ ಬಳಗದಲ್ಲಿರುವವರು. ಆದರೆ ನಮ್ಮ ನೋವು ಯಾರ ಬಳಿ ತೋಡಿಕೊಳ್ಳುವುದು? ಹೈಕಮಾಂಡ್ ಬಳಿ ಹೋದರೆ ಸ್ವಲ್ಪ ದಿನ ಕಾಯಿರಿ ಅಂತಾರೆ ಎಂದು ಅನಾಮಧೇಯರು ತಮ್ಮ ಬೇಗುದಿಯನ್ನು ಈ ಪತ್ರದಲ್ಲಿ ಹೊರ ಹಾಕಿದ್ದಾರೆ. ಯಡಿಯೂರಪ್ಪ ಅವರ ದೈಹಿಕ ಅಸಮರ್ಥತೆಯಿಂದ ಸರ್ಕಾರ ನಿಷ್ಕ್ರಿಯವಾಗಿದೆ. ಹಾಗಾಗಿ ಸಿಎಂ ಸ್ಥಾನ ತ್ಯಜಿಸಲಿ. ಯಡಿಯೂರಪ್ಪ ತಮ್ಮ ಸಮುದಾಯದ ಯಾರನ್ನೂ ರಾಜಕೀಯವಾಗಿ ಬೆಳೆಸಿಲ್ಲ. ಅಸೂಯೆ ಮತ್ತು ದ್ವೇಷಗಳನ್ನು ಯಡಿಯೂರಪ್ಪ ಮೈಗೂಡಿಸಿಕೊಂಡಿದ್ದಾರೆ. ಯಡಿಯೂರಪ್ಪ ಪಕ್ಷ ಸಿದ್ಧಾಂತ ಮತ್ತು ಸಂವಿಧಾನ ವಿರುದ್ಧ ನಡೆದುಕೊಳ್ತಿದ್ದಾರೆ. ಇಂತಹ ಯಡಿಯೂರಪ್ಪ ಅವರನ್ನು ಹೈಕಮಾಂಡ್ ನಿವೃತ್ತಿಗೊಳಿಸಲಿ. ಅವರ ಅನುಭವದ ಮೇರೆಗೆ ಮಾರ್ಗದರ್ಶಕರಾಗಿ ಮಾಡಲಿ ಎಂದು ಹೈಕಮಾಂಡ್ಗೆ ಅನಾಮಧೇಯರು ಒತ್ತಾಯ ಮಾಡಿದ್ದಾರೆ.

BY VIJAYENDRA

ಯಡಿಯೂರಪ್ಪ ಅವರನ್ನು ರಾಜ್ಯಪಾಲರಾಗಿ ಮಾಡಲಿ. ಯಡಿಯೂರಪ್ಪ ಸಿಎಂ ಆಗಿ ಆಡಳಿತ ನಡೆಸಲು ದೈಹಿಕವಾಗಿ ಅಸಮರ್ಥರು. ಅವರಿಗೆ ಆಡಳಿತ ನಡೆಸಲು ದೇಹದ ಆರೋಗ್ಯ ಸ್ಪಂದಿಸುತ್ತಿಲ್ಲ. ಯಡಿಯೂರಪ್ಪ ವಯೋಸಹಜ ದೈಹಿಕ ಅಸಮರ್ಥತೆಯಿಂದ ನರಳುತ್ತಿದ್ದಾರೆ. ಯಡಿಯೂರಪ್ಪ ಸುತ್ತ ಒಂದು ಕೊಟೆಯೇ ಸೃಷ್ಟಿಯಾಗಿದೆ. ಅವರ ವಂಶದ ನಾಲ್ಕು ತಲೆಮಾರಿನವರೇ ಯಡಿಯೂರಪ್ಪ ಸುತ್ತ ಇದ್ದಾರೆ ಎಂದು ಪತ್ರದಲ್ಲಿ ಅಸಮಾಧಾನ ಹೊರ ಹಾಕಲಾಗಿದೆ.

letter 444

ವಿಜಯೇಂದ್ರ ವಿರುದ್ಧವೂ ಅಸಮಧಾನ:
ವಿಜಯೇಂದ್ರ ಸೂಪರ್ ಸಿಎಂ, ಡೀಫ್ಯಾಕ್ಟೋ ಸಿಎಂ ಅಂತ ವಿಪಕ್ಷ ಮತ್ತು ಸ್ವಪಕ್ಷದಲ್ಲೇ ಹೇಳುತ್ತಿದ್ದಾರೆ. ಶಿವಾನಂದ ಸರ್ಕಲ್ ಬಳಿ ಇರುವ ವಿಜಯೇಂದ್ರರ ಅಪಾರ್ಟ್‍ಮೆಂಟ್ ಮತ್ತೊಂದು ಪವರ್ ಸೆಂಟರ್ ಆಗಿದೆ ಎಂದು ಪತ್ರದಲ್ಲಿ ಕಿಡಿ ಕಾರಿದ್ದಾರೆ. ಯಡಿಯೂರಪ್ಪ ಭೇಟಿಗೆ ಬರೋರು ಮೊದಲು ವಿಜಯೇಂದ್ರರ ಭೇಟಿ ಮಾಡುವ ಅಗತ್ಯ ಇದೆ. ತಮ್ಮ ಭೇಟಿಗೆ ಬರೋರನ್ನು ವಿಜಯೇಂದ್ರ ಬಳಿ ಖುದ್ದು ಯಡಿಯೂರಪ್ಪ ಕಳಿಸುತ್ತಿದ್ದಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ವಿಜಯೇಂದ್ರ ಅವರ ಬಗ್ಗೆ ಗುಣಗಾನ ರೂಪದಲ್ಲಿರುವ ಪತ್ರದ ಮಾತುಗಳು ಪರೋಕ್ಷವಾಗಿ ಅಣಕಿಸುವಂತಿವೆ.

ಸದ್ಯ ಈ ಅನಾಮಧೇಯ ಪತ್ರ ಬಿಜೆಪಿ ಪಾಳಯದಲ್ಲಿ ಸಂಚಲನವನ್ನೇ ಸೃಷ್ಟಿಸಿದೆ. ಯಡಿಯೂರಪ್ಪ ಸಹ ಪತ್ರದ ಬಗ್ಗೆ ಗಂಭೀರವಾಗಿದ್ದು, ಆಪ್ತರ ಬಳಿ ಬೇಸರ ತೋಡಿಕೊಂಡಿದ್ದಾರೆ ಎನ್ನಲಾಗಿದೆ.  ಪತ್ರದ ಜನಕರ ಪತ್ತೆಗೆ ಯಡಿಯೂರಪ್ಪ ಮುಂದಾಗಿದ್ದಾರೆ ಎನ್ನಲಾಗುತ್ತಿದೆ.

TAGGED:bengaluruBSYeddyurappaletterPublic TVಪತ್ರಪಬ್ಲಿಕ್ ಟಿವಿಬಿಎಸ್ ಯಡಿಯೂರಪ್ಪಬೆಂಗಳೂರು
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Congress BJP
Bagalkot

ದಾವಣಗೆರೆ, ಬಾಗಲಕೋಟೆ ಉಪಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ

Public TV
By Public TV
3 hours ago
ipl 2026 Vaibhav Sooryavanshi stuns Jasprit Bumrah with first ball six Mumbai Indiansace can only smile
Cricket

ಬುಮ್ರಾಗೆ 2 ಸಿಕ್ಸ್‌ – ಮತ್ತೆ 5 ಸಿಕ್ಸ್‌ ಸಿಡಿಸಿದ ಸೂರ್ಯವಂಶಿ

Public TV
By Public TV
3 hours ago
01 6
Big Bulletin

ಬಿಗ್‌ ಬುಲೆಟಿನ್‌ 07 April 2026 ಭಾಗ-1

Public TV
By Public TV
3 hours ago
IPL match Rain
Cricket

IPL 2026 | ರಾಜಸ್ಥಾನ ರಾಯಲ್ಸ್‌ Vs ಮುಂಬೈ ಇಂಡಿಯನ್ಸ್‌ ಪಂದ್ಯಕ್ಕೆ ಮಳೆ ಅಡ್ಡಿ

Public TV
By Public TV
3 hours ago
02 6
Big Bulletin

ಬಿಗ್‌ ಬುಲೆಟಿನ್‌ 07 April 2026 ಭಾಗ-2

Public TV
By Public TV
3 hours ago
03 5
Big Bulletin

ಬಿಗ್‌ ಬುಲೆಟಿನ್‌ 07 April 2026 ಭಾಗ-3

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?