ದಾವಣಗೆರೆ: ಭದ್ರಾ ಬಲದಂಡೆ ಕಾಲುವೆ (Bhadra Right Bank Canal) ಸೀಳಿ ಕುಡಿಯುವ ನೀರಿನ ಅವೈಜ್ಞಾನಿಕ ಕಾಮಗಾರಿಯನ್ನು ಖಂಡಿಸಿ ಭಾರತೀಯ ರೈತ ಒಕ್ಕೂಟ ಹಾಗೂ ಬಿಜೆಪಿ ರೈತ ಮೋರ್ಚ ದಾವಣಗೆರೆ (Davanagere) ನಗರ ಬಂದ್ಗೆ ಕರೆ ಕೊಟ್ಟಿದೆ.
ಬಂದ್ ಹಿನ್ನೆಲೆ ದಾವಣಗೆರೆ ನಗರದ ಪ್ರಮುಖ ಸರ್ಕಲ್ಗಳಲ್ಲಿ ಪೊಲೀಸರು ಬಿಗಿ ಭದ್ರತೆ ವಹಿಸಿದ್ದಾರೆ. ಮಾಜಿ ಸಚಿವ ಎಂಪಿ ರೇಣುಕಾಚಾರ್ಯ, ಎಸ್ ರವೀಂದ್ರನಾಥ್, ಮಾಡಾಳ್ ಮಲ್ಲಿಕಾರ್ಜುನ್ ಹಾಗೂ ಭಾರತೀಯ ರೈತ ಒಕ್ಕೂಟದಿಂದ ಜಯದೇವ ಸರ್ಕಲ್ನಲ್ಲಿ ಬೃಹತ್ ಪ್ರತಿಭಟನೆ ನಡೆಸಲಿದ್ದಾರೆ. ಇದನ್ನೂ ಓದಿ: ವಿಮಾನ ದುರಂತವಾಗಿ ದಿನಗಳೂ ಕಳೆದಿರಲಿಲ್ಲ – ಪಾರ್ಟಿ ಮೂಡ್ನಲ್ಲಿದ್ದ ಉದ್ಯೋಗಿಗಳ ವಜಾಗೊಳಿಸಿದ Air India ವೆಂಚರ್
ಭದ್ರಾ ಬಲದಂಡೆ ನಾಲೆಯಿಂದ ಅವೈಜ್ಞಾನಿಕವಾಗಿ ಕುಡಿಯುವ ನೀರಿನ ಯೋಜನೆ ಮಾಡಲಾಗುತ್ತಿದೆ. ಹೊಸದುರ್ಗ ಅಜ್ಜಂಪುರ ತರೀಕೆರೆ ತಾಲೂಕುಗಳ 1600ಕ್ಕೂ ಹೆಚ್ಚು ಗ್ರಾಮಗಳಿಗೆ ಕುಡಿಯುವ ನೀರಿನ ಯೋಜನೆಯನ್ನು ಭದ್ರಾ ಬಲನಾಲೆ ಸೀಳಿ ಕಾಮಗಾರಿ ನಡೆಸಲಾಗುತ್ತಿದೆ. ಇದರಿಂದ ದಾವಣಗೆರೆ ಭಾಗದ ರೈತರಿಗೆ ನೀರು ಪೂರೈಕೆಯಾಗುವುದಿಲ್ಲ. ಇದು ಅವೈಜ್ಞಾನಿಕ, ಕೂಡಲೇ ಕಾಮಗಾರಿಯನ್ನು ಸ್ಥಗಿತ ಮಾಡುವಂತೆ ಆಗ್ರಹಿಸಿ ಪ್ರತಿಭಟನೆ, ರಾಷ್ಟ್ರೀಯ ಹೆದ್ದಾರಿ ತಡೆ ನಡೆಸಿದರೂ ಪ್ರಯೋಜನವಾಗದ ಹಿನ್ನೆಲೆ ರಾಜ್ಯ ಸರ್ಕಾರದ ವಿರುದ್ಧ ದಾವಣಗೆರೆ ಬಂದ್ಗೆ ಕರೆ ನೀಡಿದ್ದಾರೆ. ಇದನ್ನೂ ಓದಿ: Bengaluru | ಬ್ರೇಕ್ ಫೇಲ್ ಆಗಿ ಡಿವೈಡರ್ಗೆ KSRTC ಬಸ್ ಡಿಕ್ಕಿ