ಮುಂಬೈ: ಮಹಿಳೆಯರೆಲ್ಲಾ ಬಿಜೆಪಿಗೆ ಮತ ಹಾಕಿರಬೇಕು ಮತ್ತು ಪುರುಷರೆಲ್ಲಾ ಸಮಾಜವಾದಿ ಪಕ್ಷಕ್ಕೆ ಮತ ಹಾಕಿರಬಹುದು ಎಂದು ಮಹಾರಾಷ್ಟ್ರದ ಬಿಜೆಪಿ ಪಕ್ಷದ ಮುಖ್ಯಸ್ಥ ಚಂದ್ರಕಾಂತ್ ಪಾಟೀಲ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಮಾಧ್ಯಮವೊಂದಕ್ಕೆ ಪ್ರತಿಕ್ರಿಯಿಸಿದ ಅವರು, ಪ್ರಬುದ್ಧ ರಾಜಕೀಯ ನಾಯಕನಾಗಿ ನಾನು ಫಲಿತಾಂಶಗಳ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ. ಆದರೆ ಎಲ್ಲಾ ಮಹಿಳೆಯರು ಬಿಜೆಪಿಗೆ ಮತ ಹಾಕಿರಬೇಕು ಮತ್ತು ಪುರುಷರು ಎಸ್ಪಿಗೆ ಮತ ಹಾಕಿರಬಹುದು ಎಂದಿದ್ದಾರೆ. ಇದನ್ನೂ ಓದಿ: ಪಂಚರಾಜ್ಯಗಳ ಚುನಾವಣೆಯಲ್ಲಿ ವಿರೋಧ ಪಕ್ಷ ಧೂಳಿಪಟ: ಬೊಮ್ಮಾಯಿ
ಇದೇ ವೇಳೆ ಬಿಜೆಪಿಯನ್ನು ಸೋಲಿಸುವುದು ನಿಮ್ಮ ತಲೆಯನ್ನು ಗೋಡೆಗೆ ಬಡಿದುಕೊಳ್ಳುವುದಕ್ಕೆ ಸಮಾನವಾಗಿದೆ. ಸದ್ಯ ಐದು ರಾಜ್ಯಗಳಾದ ಉತ್ತರ ಪ್ರದೇಶ, ಗೋವಾ, ಮಣಿಪುರ, ಉತ್ತರಾಖಂಡ ಮತ್ತು ಪಂಜಾಬ್ನಲ್ಲಿ ಮತ ಎಣಿಕೆ ನಡೆಯುತ್ತಿದೆ. ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ದೊಡ್ಡ ಗೆಲುವನ್ನು ಸಾಧಿಸುತ್ತಿದೆ ಮತ್ತು ಪಂಜಾಬ್ನಲ್ಲಿ ಎಎಪಿ ಮುನ್ನಡೆ ಸಾಧಿಸಿದೆ.
ಈ ವರ್ಷ ಫೆಬ್ರವರಿ ಮತ್ತು ಮಾರ್ಚ್ನಲ್ಲಿ ಐದು ರಾಜ್ಯಗಳಲ್ಲಿ ಚುನಾವಣೆ ನಡೆದಿತ್ತು. ಉತ್ತರ ಪ್ರದೇಶದಲ್ಲಿ ಏಳು ಹಂತಗಳಲ್ಲಿ ಚುನಾವಣೆ ನಡೆದಿತ್ತು. ಇದನ್ನೂ ಓದಿ: ಪಂಜಾಬ್ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ಗೆ ಸೋಲು