ಲಕ್ನೋ: ಮೂರು ತಿಂಗಳ ಹಿಂದೆ ಅತ್ಯಾಚಾರಕ್ಕೊಳಗಾಗಿ ನಂತರ ಗರ್ಭಿಣಿಯಾಗಿದ್ದ 15 ವರ್ಷದ ಬಾಲಕಿಗೆ ಆರೋಪಿಯ ತಾಯಿ ಮತ್ತು ಸಹೋದರಿ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ (Uttar Pradesh) ಮಣಿಪುರಿಯಲ್ಲಿ ನಡೆದಿದೆ.
ಸಂತ್ರಸ್ತೆ ಗರ್ಣಿಯಾಗಿರುವ ವಿಷಯ ತಿಳಿದ ತಾಯಿ ಮತ್ತು ಮಗಳು ಅಪ್ರಾಪ್ತೆಯನ್ನು ಆರೋಪಿಗೆ ಮದುವೆ ಮಾಡಿಕೊಡುವುದಾಗಿ ಹೇಳಿ ಮನೆಗೆ ಕರೆದೊಯ್ದಿದ್ದಾರೆ. ಆದರೆ ರಾತ್ರಿ ವೇಳೆ ಬಾಲಕಿ ಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾರೆ. ಇದನ್ನೂ ಓದಿ: ಶಿಕ್ಷಕರ ನೇಮಕಾತಿ ಹಗರಣ- ಮತ್ತೋರ್ವ ಟಿಎಂಸಿ ಶಾಸಕ ಬಂಧನ
ನೆರೆಹೊರೆಯವರು ಅಪ್ರಾಪ್ತಿಯನ್ನು ರಕ್ಷಿಸಿ ಆಸ್ಪತ್ರೆಗೆ ಸಾಗಿಸಿದ್ದಾರೆ. ತೀವ್ರ ಸುಟ್ಟ ಗಾಯಗಳಾಗಿದ್ದ ಆಕೆಯನ್ನು ಸೈಫಾಯಿ ವೈದ್ಯಕೀಯ ಕಾಲೇಜಿಗೆ ಕರೆದೊಯ್ದು ದಾಖಲಿಸಲಾಗಿದೆ. ಆಕೆಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಕಮಲೇಶ್ ದೀಕ್ಷಿತ್ ತಿಳಿಸಿದ್ದಾರೆ.
25ರ ಹರೆಯದ ಆರೋಪಿ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದ್ದು, ಆತನ ತಾಯಿ ಮತ್ತು ಸಹೋದರಿಯ ವಿರುದ್ಧ ಕೊಲೆ ಯತ್ನದ ಆರೋಪ ಹೊರಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಇದನ್ನೂ ಓದಿ: ಉಗ್ರ ಸಂಘಟನೆಗೆ ಬೆಂಬಲ ಆರೋಪ – ಪ್ರೊಫೆಸರ್ ಮನೆ ಮೇಲೆ NIA ದಾಳಿ
ಆರೋಪಿಯ ತಾಯಿಯನ್ನು ಶನಿವಾರ ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ. ಯುವಕ ಮತ್ತು ಆತನ ಸಹೋದರಿ ತಲೆಮರೆಸಿಕೊಂಡಿದ್ದು, ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.